Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ನ. 28 : ಉಡುಪಿ ಬನ್ನಂಜೆಯಿಂದ ಕಲ್ಸoಕ ಜಂಕ್ಷನ್ ವರೆಗೆ ಪ್ರಧಾನಿ ಮೋದಿ ‘ರೋಡ್ ಶೋ’..!!

Dhrishya News by Dhrishya News
26/11/2025
in ಕರಾವಳಿ
0
ನ. 28 : ಉಡುಪಿ ಬನ್ನಂಜೆಯಿಂದ ಕಲ್ಸoಕ ಜಂಕ್ಷನ್ ವರೆಗೆ ಪ್ರಧಾನಿ ಮೋದಿ ‘ರೋಡ್ ಶೋ’..!!
0
SHARES
28
VIEWS
Share on FacebookShare on Twitter

ಉಡುಪಿ: ನವೆಂಬರ್ 26:ನ.28 ಶುಕ್ರವಾರ ಬೆಳಿಗ್ಗೆ ಗಂಟೆ 11.40ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ‘ರೋಡ್ ಶೋ’ ಉಡುಪಿ-ಬನ್ನಂಜೆಯ ಡಾ! ವಿ.ಎಸ್. ಆಚಾರ್ಯ ಬಸ್ ನಿಲ್ದಾಣದ ಬಳಿ ಶ್ರೀ ನಾರಾಯಣ ಗುರು ಸರ್ಕಲ್ ನಿಂದ ಪ್ರಾರಂಭಗೊಂಡು ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ಕಲ್ಸoಕ ಜಂಕ್ಷನ್ ವರೆಗೆ ಸಾಗಲಿದೆ. ಕಲ್ಸoಕ ರಸ್ತೆಯಿಂದ ನೇರವಾಗಿ ಪಾರ್ಕಿಂಗ್ ಏರಿಯಾ-ರಥಬೀದಿ ಮೂಲಕ ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ ಕೃಷ್ಣ ಮಠವನ್ನು ತಲುಪಿ, ಶ್ರೀ ಕೃಷ್ಣ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

ಅವರು ಪ್ರಧಾನಿ ನರೇಂದ್ರ ಮೋದಿ ಅವರ ನ.28ರ ‘ಉಡುಪಿ ರೋಡ್ ಶೋ’ ಮತ್ತು ‘ಶ್ರೀ ಕೃಷ್ಣ ಮಠ ಬೇಟಿ’ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಸಾಮೂಹಿಕ ‘ಲಕ್ಷ ಕಂಠ ಗೀತಾ ಪಾರಾಯಣ’ದಲ್ಲಿ ಪಾಲ್ಗೊಂಡು, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ ಮಧ್ಯಾಹ್ನ ಗಂಟೆ 1.35ಕ್ಕೆ ಸಮಾರಂಭದ ಸ್ಥಳದಿಂದ ಹೊರಟು 1.40ಕ್ಕೆ ಆದಿಉಡುಪಿ ಹೆಲಿಪ್ಯಾಡ್ ತಲುಪಿ 1.45ಕ್ಕೆ ಎಂಐ-17 ಹೆಲಿಕಾಪ್ಟರ್ ಮೂಲಕ ಮಂಗಳೂರಿಗೆ ತೆರಳಿ, ಮಧ್ಯಾಹ್ನ 2.15ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನದಲ್ಲಿ ಗೋವಾಕ್ಕೆ ಪ್ರಯಾಣ ಮಾಡಲಿದ್ದಾರೆ.

ಉಡುಪಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರನ್ನು ಭವ್ಯವಾಗಿ ಸ್ವಾಗತಿಸಲು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಪ್ರಧಾನಿ ಮೋದಿ ಅವರ ‘ರೋಡ್ ಶೋ’ ಮಾರ್ಗದ ಮೂರು ಕಡೆಗಳಲ್ಲಿ ಕರಾವಳಿಯ ಕಲೆ, ಸಂಸ್ಕೃತಿಯನ್ನು ಬಿಂಬಿಸುವ ಯಕ್ಷಗಾನ ವೇಷ, ಹುಲಿ ವೇಷ, ಶ್ರೀ ಕೃಷ್ಣ ವೇಷದಾರಿಗಳ ಪ್ರದರ್ಶನ ಇತ್ಯಾದಿ ಇರಲಿವೆ. ರಸ್ತೆ ಮಾರ್ಗದ ಒಂದು ಕಡೆ ಬ್ಯಾರಿಕೇಡ್ ಅಳವಡಿಸಲಾಗುತ್ತಿದ್ದು, ಆ ರಸ್ತೆಯ ಇಕ್ಕೆಲಗಳಲ್ಲಿ 30 ಸಾವಿರಕ್ಕೂ ಅಧಿಕ ಜನರು ನಿಂತು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲಿದ್ದಾರೆ. ರೋಡ್ ಶೋ ವೀಕ್ಷಣೆ ಮಾಡುವ ಸಮಸ್ತ ನಾಗರಿಕರು ನ.28 ಶುಕ್ರವಾರ ಬೆಳಿಗ್ಗೆ ಗಂಟೆ 10.30ರೊಳಗೆ ಬನ್ನಂಜೆ-ಕಲ್ಸoಕ ರಸ್ತೆಯ ಇಕ್ಕೆಲಗಳಲ್ಲಿ ಉಪಸ್ಥಿತರಿರುವಂತೆ ಕೋರಲಾಗಿದೆ.

ಕಾರ್ಯಕ್ರಮದಲ್ಲಿ ಜಿಲ್ಲೆಯ 1,112 ಮತಗಟ್ಟೆಗಳ ಪ್ರತೀ ಬೂತ್‌ಗಳಿಂದ ತಲಾ 12 ಮಂದಿಯ ತಂಡ ಕಡ್ಡಾಯವಾಗಿ ಪಾಲ್ಗೊಳ್ಳಬೇಕೆಂದು ಜಿಲ್ಲಾ ಬಿಜೆಪಿಯಿಂದ ಆದೇಶಿಸಲಾಗಿದೆ. ಉಡುಪಿ ನಗರ ಭಾಗದಿಂದ ಗರಿಷ್ಠ ಸಂಖ್ಯೆಯ ಜನತೆ ಭಾಗವಹಿಸಲಿದ್ದಾರೆ.

2018ರ ಬಳಿಕ ಉಡುಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ತಿರದಿಂದ ನೋಡುವ ಸದವಕಾಶ ಜಿಲ್ಲೆಯ ಜನತೆಗೆ ಲಭಿಸುತ್ತಿದೆ. ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ವೈ. ರಾಘವೇಂದ್ರ, ಕ್ಯಾ. ಬ್ರಿಜೇಶ್ ಚೌಟ ಸಹಿತ ಜಿಲ್ಲೆಯ ಶಾಸಕರು, ರಾಜ್ಯದ ಪ್ರಮುಖ ನಾಯಕರು ಈ ಭಾವನಾತ್ಮಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು, ಮೋದಿ ಅಭಿಮಾನಿಗಳ ಸಹಿತ ಜಿಲ್ಲೆಯ ಮಹಾ ಜನತೆ ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶ್ವ ನಾಯಕ, ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಭ್ರಮದಿಂದ ಸ್ವಾಗತಿಸಬೇಕು ಎಂದು ಕುತ್ಯಾರು ನವೀನ್ ಶೆಟ್ಟಿ ವಿನಂತಿಸಿದ್ದಾರೆ.

 

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಮಾಧ್ಯಮ ಸಮಿತಿ ಸದಸ್ಯ ರತನ್ ರಮೇಶ್ ಪೂಜಾರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ನೇಕಾರ ಪ್ರಕೋಷ್ಠ ಸಮಿತಿ ಸದಸ್ಯ ರತ್ನಾಕರ್ ಇಂದ್ರಾಳಿ, ಜಿಲ್ಲಾ ವಕ್ತಾರ ಕೆ.ದಿವಾಕರ ಶೆಟ್ಟಿ ಕಲ್ಯಾ ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಸ್ವಾಗತಿಸಿ, ಶಿವಕುಮಾರ್ ಅಂಬಲಪಾಡಿ ವಂದಿಸಿದರು.

Previous Post

ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ವಿಧಿವಶ..!!

Next Post

ಕೋಡಿಕನ್ಯಾನ ಗ್ರಾಮದ ಮೊದಲ ಅಧ್ಯಕ್ಷರಾಗಿದ್ದ (ಚೇರ್ ಮೆನ್ )ದಿ.ಆರ್ಕಾಟೆ ನರಸಿಂಹ ಖಾರ್ವಿ ಅವರ ಹೆಸರುಳ್ಳ ನಾಮಫಲಕ ಅನಾವರಣ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕೋಡಿಕನ್ಯಾನ ಗ್ರಾಮದ ಮೊದಲ ಅಧ್ಯಕ್ಷರಾಗಿದ್ದ (ಚೇರ್ ಮೆನ್ )ದಿ.ಆರ್ಕಾಟೆ ನರಸಿಂಹ ಖಾರ್ವಿ ಅವರ ಹೆಸರುಳ್ಳ ನಾಮಫಲಕ ಅನಾವರಣ..!!

ಕೋಡಿಕನ್ಯಾನ ಗ್ರಾಮದ ಮೊದಲ ಅಧ್ಯಕ್ಷರಾಗಿದ್ದ (ಚೇರ್ ಮೆನ್ )ದಿ.ಆರ್ಕಾಟೆ ನರಸಿಂಹ ಖಾರ್ವಿ ಅವರ ಹೆಸರುಳ್ಳ ನಾಮಫಲಕ ಅನಾವರಣ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved