Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನ.28ರ ‘ಲಕ್ಷ ಕಂಠ ಗೀತೋತ್ಸವ’ ಯಶಸ್ವಿಗೊಳಿಸಲು ನಾಗರಾಜ ಆಚಾರ್ಯ ಕರೆ..!!

Dhrishya News by Dhrishya News
27/11/2025
in ಸುದ್ದಿಗಳು
0
ನ.28ರ ‘ಲಕ್ಷ ಕಂಠ ಗೀತೋತ್ಸವ’ ಯಶಸ್ವಿಗೊಳಿಸಲು ನಾಗರಾಜ ಆಚಾರ್ಯ ಕರೆ..!!
0
SHARES
31
VIEWS
Share on FacebookShare on Twitter

ಉಡುಪಿ: ನವೆಂಬರ್ 27:ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ‘ವಿಶ್ವ ಗೀತಾ ಪರ್ಯಾಯ’ದ ವಿಶಿಷ್ಟ ಕಾರ್ಯಕ್ರಮವಾಗಿ ನ.28ರಂದು ಉಡುಪಿ ರಾಜಾoಗಣದ ಪಾರ್ಕಿಂಗ್ ಸ್ಥಳದ ಬಳಿ ನಡೆಯಲಿರುವ ‘ಲಕ್ಷ ಕಂಠ ಗೀತೋತ್ಸವ’ದ ಐತಿಹಾಸಿಕ ಕಾರ್ಯಕ್ರಮದಲ್ಲಿ ವಿಶ್ವ ನಾಯಕ, ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಂಡು ಭಗವದ್ಗೀತೆಯ 15ನೇ ಅಧ್ಯಾಯವನ್ನು ನೆರೆದ ಎಲ್ಲರೊಂದಿಗೆ ಸಾಮೂಹಿಕ ಪಠಣ ಮಾಡಲಿದ್ದಾರೆ. ಈ ಅಪೂರ್ವ ಕ್ಷಣಗಳಲ್ಲಿ ಶ್ರೀ ಕೃಷ್ಣ ಭಕ್ತರು, ಸಮಸ್ತ ಭಜನಾ ಮಂಡಳಿಗಳ ಸದಸ್ಯರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳ ಸಹಿತ ಜಿಲ್ಲೆಯ ಮಹಾ ಜನತೆ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ, ‘ಲಕ್ಷ ಕಂಠ ಗೀತೋತ್ಸವ’ವನ್ನು ಯಶಸ್ವಿಗೊಳಿಸಬೇಕು ಎಂದು ಶ್ರೀ ಮಠದ ದಿವಾನ ನಾಗರಾಜ ಆಚಾರ್ಯ ಕರೆ ನೀಡಿದರು.

 

ಅವರು ಶ್ರೀ ಕೃಷ್ಣ ಮಠದ ಕನಕ ಮಂಟಪದಲ್ಲಿ ನಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಇದರ ಪೂರ್ವಸಿದ್ದತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

 

ಲಕ್ಷ ಕಂಠ ಗೀತೋತ್ಸವ ಸಮಿತಿಯ ಪ್ರಮುಖರಾದ ವಿಕ್ರಂ ಕುಂಟಾರು ನ.28ರ ಕಾರ್ಯಕ್ರಮದ ಕುರಿತು ವಿಸ್ತ್ರತ ಮಾಹಿತಿ ನೀಡಿ, ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಳ್ಳುವವರು ನ.28ರಂದು ಬೆಳಿಗ್ಗೆ 9.00 ಗಂಟೆಗೆ ಸಮವಸ್ತ್ರ ಹಾಗೂ ನಿಗದಿತ ಪಾಸ್ ನೊಂದಿಗೆ ಪಾರಾಯಣದ ಸ್ಥಳದಲ್ಲಿ ಉಪಸ್ಥಿತರಿರುವಂತೆ ಕೋರಿದರು.

 

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಮಾತನಾಡಿ, ಶ್ರೀ ಮಠದ ವತಿಯಿಂದ ನ.28ರಂದು ನಡೆಯುವ ಲಕ್ಷ ಕಂಠ ಗೀತಾ ಪಾರಾಯಣ ಮತ್ತು ನ.30ರಂದು ನಡೆಯುವ ಭಜನೋತ್ಸವದ ಬಗ್ಗೆ ಭಜನಾ ಪರಿಷತ್ ಕೇಂದ್ರ ಸಮಿತಿಯ ಭಜನಾ ತರಬೇತುದಾರೆ ವಿದುಷಿ ಉಷಾ ಹೆಬ್ಬಾರ್ ನೇತೃತ್ವದಲ್ಲಿ ಅನೇಕ ಕಡೆಗಳಲ್ಲಿ ತರಬೇತಿಗಳು ಯಶಸ್ವಿಯಾಗಿ ನಡೆದಿವೆ. ಈ ಅಭೂತಪೂರ್ವ ಕಾರ್ಯಕ್ರಮದಲ್ಲಿ ಸಮಸ್ತ ಭಜನಾ ಮಂಡಳಿಗಳ ಸದಸ್ಯರು ಮತ್ತು ಭಜಕರು ಗರಿಷ್ಠ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದಿವ್ಯಾನುಗ್ರಹಕ್ಕೆ ಪಾತ್ರರಾಗಬೇಕು ಎಂದು ವಿನಂತಿಸಿದರು.

 

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ ಮಾತನಾಡಿ, ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರ ಮಹತ್ವಾಕಾಂಕ್ಷೆಯಂತೆ ನಡೆಯುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮಕ್ಕೆ ಯೋಜನೆಯ ಸಂಪೂರ್ಣ ಸಹಕಾರವಿದೆ. ಎಲ್ಲರೂ ಸಂಘಟಿತರಾಗಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಎಂದರು.

 

ಲಕ್ಷ ಕಂಠ ಗೀತಾ ಪಾರಾಯಣ ಸಮಿತಿಯ ಸಂಚಾಲಕ ಬೈಕಾಡಿ ಸುಪ್ರಸಾದ್ ಶೆಟ್ಟಿ, ಲಕ್ಷ ಕಂಠ ಗೀತಾ ಪಾರಾಯಣದ ಮುಖ್ಯಸ್ಥೆ ವಿದುಷಿ ಉಷಾ ಹೆಬ್ಬಾರ್, ಯೋಜನೆಯ ಉಡುಪಿ ತಾಲೂಕು ಯೋಜನಾಧಿಕಾರಿ ಸುರೇಂದ್ರ ನಾಯ್ಕ್, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಸಹಿತ ವಲಯಗಳ ಸಂಚಾಲಕರು, ಯೋಜನೆಯ ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಹಾಗೂ ತಾಲೂಕಿನ ವಿವಿಧ ಭಜನಾ ಮಂಡಳಿಗಳ ಪದಾಧಿಕಾರಿಗಳು, ಸದಸ್ಯರು, ಭಜಕರು ಉಪಸ್ಥಿತರಿದ್ದರು.

Previous Post

ಪ್ರಧಾನಿ ಮೋದಿ ಆಗಮನಕ್ಕೆ ಕೃಷ್ಣನೂರು ಉಡುಪಿ ಸರ್ವ ಸನ್ನದ..!!

Next Post

ಪ್ರಧಾನಿ ಮೋದಿ ರೋಡ್‌ ಶೋನಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಉಡುಪಿ ಜಿಲ್ಲಾ ಪೊಲೀಸ್ ಸಲಹೆಗಳು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪ್ರಧಾನಿ ಮೋದಿ ರೋಡ್‌ ಶೋನಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಉಡುಪಿ ಜಿಲ್ಲಾ ಪೊಲೀಸ್ ಸಲಹೆಗಳು..!

ಪ್ರಧಾನಿ ಮೋದಿ ರೋಡ್‌ ಶೋನಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಉಡುಪಿ ಜಿಲ್ಲಾ ಪೊಲೀಸ್ ಸಲಹೆಗಳು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಮಾಜಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುರೇಶ್ ಶೇರಿಗಾರ್ ಅಲೆವೂರು ನಿಧನ..!!

ಬಿಜೆಪಿ ಮಾಜಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುರೇಶ್ ಶೇರಿಗಾರ್ ಅಲೆವೂರು ನಿಧನ..!!

19/08/2026
ಮಣಿಪಾಲ: ಇಂದ್ರಾಳಿ ರೈಲ್ವೆ ನಿಲ್ದಾಣದ ಬಳಿ ಸ್ಕೂಟರ್ ಕಳವು..!

ಮಣಿಪಾಲ: ಇಂದ್ರಾಳಿ ರೈಲ್ವೆ ನಿಲ್ದಾಣದ ಬಳಿ ಸ್ಕೂಟರ್ ಕಳವು..!

19/08/2026
ದುರ್ನಾಥ ಬೀರುತ್ತಿರುವ ಕಾರ್ಕಳ ಮಾರುಕಟ್ಟೆ ಪಾರ್ಕಿಂಗ್ : ರಮಿತಾ ಸೂರ್ಯವಂಶಿ ಖಂಡನೆ

ದುರ್ನಾಥ ಬೀರುತ್ತಿರುವ ಕಾರ್ಕಳ ಮಾರುಕಟ್ಟೆ ಪಾರ್ಕಿಂಗ್ : ರಮಿತಾ ಸೂರ್ಯವಂಶಿ ಖಂಡನೆ

19/08/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆ.21ರಂದು ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆ.21ರಂದು ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ

19/08/2026

Recent News

ಬಿಜೆಪಿ ಮಾಜಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುರೇಶ್ ಶೇರಿಗಾರ್ ಅಲೆವೂರು ನಿಧನ..!!

ಬಿಜೆಪಿ ಮಾಜಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುರೇಶ್ ಶೇರಿಗಾರ್ ಅಲೆವೂರು ನಿಧನ..!!

19/08/2026
ಮಣಿಪಾಲ: ಇಂದ್ರಾಳಿ ರೈಲ್ವೆ ನಿಲ್ದಾಣದ ಬಳಿ ಸ್ಕೂಟರ್ ಕಳವು..!

ಮಣಿಪಾಲ: ಇಂದ್ರಾಳಿ ರೈಲ್ವೆ ನಿಲ್ದಾಣದ ಬಳಿ ಸ್ಕೂಟರ್ ಕಳವು..!

19/08/2026
ದುರ್ನಾಥ ಬೀರುತ್ತಿರುವ ಕಾರ್ಕಳ ಮಾರುಕಟ್ಟೆ ಪಾರ್ಕಿಂಗ್ : ರಮಿತಾ ಸೂರ್ಯವಂಶಿ ಖಂಡನೆ

ದುರ್ನಾಥ ಬೀರುತ್ತಿರುವ ಕಾರ್ಕಳ ಮಾರುಕಟ್ಟೆ ಪಾರ್ಕಿಂಗ್ : ರಮಿತಾ ಸೂರ್ಯವಂಶಿ ಖಂಡನೆ

19/08/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆ.21ರಂದು ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆ.21ರಂದು ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ

19/08/2026