Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಆಳ್ವಾಸ್ ಶಿಕ್ಷಣ ಸಂಸ್ಥೆ ಸಾಂಸ್ಕೃತಿಕ ವೈಭವ ಕಾರ್ಯಕ್ರಮ..!!

Dhrishya News by Dhrishya News
30/11/2025
in ಮುಖಪುಟ
0
ಆಳ್ವಾಸ್ ಶಿಕ್ಷಣ ಸಂಸ್ಥೆ ಸಾಂಸ್ಕೃತಿಕ ವೈಭವ ಕಾರ್ಯಕ್ರಮ..!!
0
SHARES
21
VIEWS
Share on FacebookShare on Twitter

 

ಕಾರ್ಕಳ :ನವೆಂಬರ್ 30: ಆಳ್ವಾಸ್ ಶಿಕ್ಷಣ ಸಂಸ್ಥೆ ಸಾಂಸ್ಕೃತಿಕ ವೈಭವಕ್ಕೆ ಮಾತ್ರ ಹೆಸರುವಾಸಿಯಾಗಿಲ್ಲ ಬದಲಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾದಾನವನ್ನು ಮಾಡುವ ಮಾದರಿ ವಿದ್ಯಾಸಂಸ್ಥೆಯಾಗಿ ರಾಜ್ಯದಲ್ಲೇ ಗುರುತಿಸಿಕೊಂಡಿದೆ.

ಆಳ್ವಾಸ್ ವಿರಾಸತ್, ನುಡಿಸಿರಿ ಸಾಂಸ್ಕೃತಿಕ ವೈಭವ ಮೋಹನ್ ಆಳ್ವರ ಒಳ್ಳೆಯ ಹುಚ್ಚುತನ.  ಆಳ್ವರಿಗೆ ಸರಿಸಮನವಾದ ವ್ಯಕ್ತಿ ಬೇರೊಂದಿಲ್ಲ. ಎಂದು ಶಶಿಧರ್ ಶೆಟ್ಟಿ ಹೇಳಿದರು. 

ಆಳ್ವಾಸ್ ಎಜುಕೇಷನ್ ಫೌಂಡೇಶನ್ ವತಿಯಿಂದ ಆಳ್ವಾಸ್ ನುಡಿಸಿರಿ ವಿರಾಸತ್ ಕಾರ್ಕಳ ಘಟಕದ ಆಶ್ರಯದಲ್ಲಿ ಕಾರ್ಕಳದ ಸ್ವರಾಜ್ಯ ಮೈದಾನದ ಪ್ರೊ. ಎಂ. ರಾಮಚಂದ್ರ ವೇದಿಕೆಯಲ್ಲಿ ನಡೆದ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮವನ್ನು  ಉದ್ಘಾಟಿಸಿ ಮಾತನಾಡಿದರು.

 

ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ. ಎಂ. ಮೋಹನ್ ಅಳ್ವಾ ಪ್ರಾಸ್ತಾವಿಕ ಮಾತುಗಳನ್ನಾಡಿ ದೇಶ ವಿದೇಶಗಳಲ್ಲಿ ಒಟ್ಟು 88 ಕಡೆಗಳಲ್ಲಿ ನುಡಿಸಿರಿ, ವಿರಾಸತ್ ಘಟಕಗಳನ್ನು ರಚಿಸಲಾಗಿದ್ದು ಫೆಬ್ರವರಿ ಅಂತ್ಯದೊಳಗೆ 50 ಘಟಕಗಳಲ್ಲಿ ವೈಭವಯುತ ಕಾರ್ಯಕ್ರಮಗಳು ನಡೆಯಲಿವೆ. ಈ ಸಾಂಸ್ಕೃತಿಕ ವೈಭವದ ಮೂಲಕ ಯುವಪೀಳಿಗೆಗೆ ಏಕತೆ–ಸಾಮರಸ್ಯದ ಸಂದೇಶವನ್ನು ತಲುಪಿಸುವುದು ನಮ್ಮ ಉದ್ದೇಶ. ಜಾತಿ, ಧರ್ಮ, ಭಾಷೆ ಮೀರಿದ ಭಾರತದ ಸಂಪ್ರದಾಯವನ್ನು ತೋರಿಸುವುದು ನಮ್ಮ ಗುರಿ. ಆಳ್ವಾಸ್ ಸಂಸ್ಥೆಯನ್ನು ಮಿನಿ ಇಂಡಿಯಾವಾಗಿ ರೂಪಿಸುವ ಕನಸು ನಮ್ಮದು. 144 ಕೋಟಿ ಜನಸಂಖ್ಯೆಯ ದೇಶದಲ್ಲಿ 52 ಕೋಟಿ ಯುವಕರಿದ್ದಾರೆ. ವಿದ್ಯಾರ್ಥಿಗಳಲ್ಲಿ ಸುಂದರ ಮನಸು ಕಟ್ಟುವ ಕೆಲಸವಾಗಬೇಕು ಎಂದರು.

 

 ಅಧ್ಯಕ್ಷತೆಯನ್ನು ವಹಿಸಿದ್ದ ಕಾರ್ಕಳ ಶಾಸಕ  ವಿ. ಸುನಿಲ ಕುಮಾರ್ ಮಾತನಾಡಿ  ಶಿಕ್ಷಣ ಹಾಗೂ ಸಾಂಸ್ಕೃತಿಕವಾಗಿಯೂ ನಾಡಿನ ಗಮನ ಸೆಳೆದ ಶಿಕ್ಷಣ ಸಂಸ್ಥೆ ಆಳ್ವಾಸ್. ನಮ್ಮ ನಾಡಿನಲ್ಲಿ ಕಲೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೊಸ ರೂಪವನ್ನು ಕೊಟ್ಟವರು ಆಳ್ವರು. ಇಲ್ಲಿನ ಶಿಕ್ಷಣ ಬರೀ ಅಂಕ ಪಟ್ಟಿಗೆ ಮಾತ್ರ ಸೀಮಿತವಾಗದೆ, ಕ್ರೀಡೆ, ಸಂಸ್ಕೃತಿ, ರಾಷ್ಟ್ರೀಯತೆ, ಸಾಮರಸ್ಯವನ್ನು ಸಾರುವಂತಿದೆ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕಾರ್ಯ ಆಳ್ವಾಸ್ ಸಂಸ್ಥೆಯ ಮೂಲಕ ನಡೆಯುತ್ತಿದೆ ಎಂದರು.

 

ಆಳ್ವಾಸ್ ನುಡಿಸಿರಿ–ವಿರಾಸತ್ ಕಾರ್ಕಳ ಘಟಕದ ಅಧ್ಯಕ್ಷ  ವಿಜಯ ಶೆಟ್ಟಿ, ಉದಯ ಕುಮಾರ್ ಶೆಟ್ಟಿ ಮುನಿಯಾಲು, ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ. ಗಫೂರ್, ಗುಣಪಾಲ ಕಡಂಬ, ದಿನೇಶ್ ಜಿ.ಡಿ., ಮುನಿರಾಜ ರೆಂಜಾಳ, ರಾಜ್ಯ ಕಲ್ಲುಕ್ವಾರಿ ಫೆಡರೇಷನ್ ಅಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ, ಸುಗ್ಗಿ ಸುಧಾಕರ ಶೆಟ್ಟಿ, ಕ್ರಿಯೇಟಿವ್ ಕಾಲೇಜಿನ ಗಣನಾಥ ಶೆಟ್ಟಿ, ಜ್ಞಾನಸುಧ ಶಿಕ್ಷಣ ಸಂಸ್ಥೆಯ ಡಾ. ಸುಧಾಕರ ಶೆಟ್ಟಿ, ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಕೊಟ್ಯಾನ್, ಅಂಬರೀಶ್ ಚಿಪ್ಳುಣ್ಕರ್ ಮತ್ತಿತರರು ಉಪಸ್ಥಿತರಿದ್ದರು.

ಉಪನ್ಯಾಸಕ ವೇಣು ಗೋಪಾಲ್ ಕಾರ್ಯಕ್ರಮ  ನಿರೂಪಿಸಿ, ಕಾರ್ಕಳ ತಾಲೂಕು ಕಸಪ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಕೊಂಡಳ್ಳಿ ವಂದಿಸಿದರು.

Previous Post

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

Next Post

ಮಣಿಪಾಲದ ಕೆಎಂಸಿಯಲ್ಲಿ ನಡೆದ 28ನೇ ವಾರ್ಷಿಕ ಮಕ್ಕಳ ರಕ್ತ ಶಾಸ್ತ್ರ ಮತ್ತು ಆಂಕೊಲಾಜಿ ಸಮ್ಮೇಳನ ಫೋಕಾನ್ 2025..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲದ ಕೆಎಂಸಿಯಲ್ಲಿ ನಡೆದ 28ನೇ ವಾರ್ಷಿಕ ಮಕ್ಕಳ ರಕ್ತ ಶಾಸ್ತ್ರ ಮತ್ತು ಆಂಕೊಲಾಜಿ ಸಮ್ಮೇಳನ ಫೋಕಾನ್ 2025..!!

ಮಣಿಪಾಲದ ಕೆಎಂಸಿಯಲ್ಲಿ ನಡೆದ 28ನೇ ವಾರ್ಷಿಕ ಮಕ್ಕಳ ರಕ್ತ ಶಾಸ್ತ್ರ ಮತ್ತು ಆಂಕೊಲಾಜಿ ಸಮ್ಮೇಳನ ಫೋಕಾನ್ 2025..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved