Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಿರ್ಮಾಪಕ ಎವಿಎಂ ಸರವಣನ್ ನಿಧನ..!!

Dhrishya News by Dhrishya News
04/12/2025
in ಸುದ್ದಿಗಳು
0
0
SHARES
6
VIEWS
Share on FacebookShare on Twitter

ಬೆಂಗಳೂರು:ಡಿಸೆಂಬರ್ 04:ಭಾರತದ ಅತ್ಯಂತ ಹಳೆಯ ನಿರ್ಮಾಣ ಸಂಸ್ಥೆಗಳಲ್ಲಿ ಒಂದು ಎವಿಎಂ ನಿರ್ಮಾಣ ಸಂಸ್ಥೆ, ಡಾ ರಾಜ್​​ಕುಮಾರ್ ನಾಯಕನಾಗಿ ನಟಿಸಿದ ಮೊದಲ ಸಿನಿಮಾದ ನಿರ್ಮಾಣವನ್ನೂ ಇದೇ ಸಂಸ್ಥೆ ಮಾಡಿತ್ತು. ಈ ಸಂಸ್ಥೆಯನ್ನು ಅರ್ಧ ಶತಮಾನಕ್ಕೂ ಹೆಚ್ಚು ಕಾಲ ನಡೆಸಿ, ಲಿಜೆಂಡರಿ ನಿರ್ಮಾಪಕ ಎನಿಸಿಕೊಂಡಿರುವ ಎವಿಎಂ ಸರವಣ ಅವರು ನಿಧನರಾಗಿದ್ದಾರೆ.

ಎವಿಎಂ, ಭಾರತದ ಅತ್ಯಂತ ಹಳೆಯ ಸಿನಿಮಾ ನಿರ್ಮಾಣ ಸಂಸ್ಥೆಗಳಲ್ಲಿ ಒಂದು. ನಟಸಾರ್ವಭೌಮ ಡಾ ರಾಜ್​​ಕುಮಾರ್ ಅವರು ನಾಯಕನಾಗಿ ನಟಿಸಿದ ಮೊಟ್ಟ ಮೊದಲ ಸಿನಿಮಾ ‘ಬೇಡರ ಕಣ್ಣಪ್ಪ’ ಸಿನಿಮಾ ನಿರ್ಮಾಣ ಮಾಡಿದ್ದು ಸಹ ಇದೇ ಎವಿಎಂ ನಿರ್ಮಾಣ ಸಂಸ್ಥೆ. ಇದೀಗ ಈ ನಿರ್ಮಾಣ ಸಂಸ್ಥೆಯಲ್ಲಿ ನಿರ್ಮಾಪಕರಾಗಿ ಹಲವಾರು ಸಿನಿಮಾಗಳನ್ನು ನಿರ್ಮಿಸಿ, ತಮಿಳು ಮಾತ್ರವಲ್ಲದೆ ದಕ್ಷಿಣ ಭಾರತದ ಲೆಜೆಂಡರಿ ನಿರ್ಮಾಪಕ ಎನಿಸಿಕೊಂಡಿದ್ದ ಎವಿಎಂ ಸರವಣನ್ ಅವರು ನಿಧನ ಹೊಂದಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.

ಭಾರತೀಯ ಸಿನಿಮಾ ರಂಗದ ವಿಶೇಷವಾಗಿ ದಕ್ಷಿಣ ಭಾರತ ಸಿನಿಮಾ ರಂಗವನ್ನು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎವಿ ಮೇಯಪ್ಪನ್ ಅವರ ಪುತ್ರ ಎವಿ ಸರವಣ ಅವರು ಸಹ ತಂದೆಯ ರೀತಿಯೇ ತಮಿಳು, ತೆಲುಗು ಇನ್ನಿತರೆ ಭಾಷೆಗಳಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. 1943 ರಲ್ಲಿ ಪ್ರಾರಂಭವಾದ ಎವಿಎಂ ನಿರ್ಮಾಣ ಸಂಸ್ಥೆಯನ್ನು ಸುಮಾರು ಅರ್ಧ ಶತಮಾನದ ಕಾಲ ನಡೆಸಿದ ಸರವಣನ್ ಅವರು ಹಲವಾರು ಅತ್ಯುತ್ತಮ ಸಿನಿಮಾಗಳನ್ನು ನೀಡಿದ್ದಾರೆ. ಈಗ ತಮಿಳಿನಲ್ಲಿ ಸ್ಟಾರ್​​ಗಳಾಗಿರುವ ಹಲವು ನಟರಿಗೆ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಖ್ಯಾತಿ ಅವರಿಗಿದೆ.

ಸರವಣನ್ ಅವರು, ರಜನೀಕಾಂತ್ ನಟನೆಯ ‘ಶಿವಾಜಿ’, ರಾಣಾ ದಗ್ಗುಬಾಟಿ ನಟನೆಯ ‘ಲೀಡರ್’, ಸೂರ್ಯ ನಟನೆಯ ‘ಅಯನ್’, ಪ್ರಭುದೇವ, ಕಾಜೊಲ್ ನಟನೆಯ ‘ಮಿನ್ಸರ ಕನವು’, ದಳಪತಿ ವಿಜಯ್ ನಟನೆಯ ‘ವೇಟ್ಟೈಕಾರನ್’, ಅಜಿತ್ ನಟನೆಯ ‘ತಿರುಪತಿ’, ವಿಕ್ರಂ ನಟನೆಯ ‘ಜೆಮಿನಿ’, ವಿಜಯ್​​ಕಾಂತ್ ನಟನೆಯ ‘ಶಕ್ತಿವೇಲ್ ಐಪಿಎಸ್’, ರಜನೀಕಾಂತ್ ನಟನೆಯ ‘ಯಜಮಾನ’, ಕಮಲ್ ಹಾಸನ್ ನಟನೆಯ ‘ಸಕಲಕಲಾವಲ್ಲಭನ್’, ಶಿವಾಜಿ ಗಣೇಶನ್ ನಟನೆಯ ಹಲವಾರು ಸಿನಿಮಾಗಳು, ಅರ್ಜುನ್ ಸರ್ಜಾ ನಟನೆಯ ಹಲವಾರು ಸಿನಿಮಾಗಳನ್ನು ಎವಿಎಂ ನಿರ್ಮಾಣ ಮಾಡಿದ್ದು, ರಜನೀಕಾಂತ್, ಕಮಲ್, ಅರ್ಜುನ್ ಸರ್ಜಾ, ವಿಜಯ್, ವಿಕ್ರಂ, ಅಜಿತ್ ಇನ್ನೂ ಹಲವಾರು ಈಗಿನ ಸ್ಟಾರ್ ನಟರುಗಳ ಸಿನಿಮಾಗಳನ್ನು ಸರವಣ ನಿರ್ಮಾಣ ಮಾಡಿದ್ದರು.

 

 

Previous Post

ಶಬರಿಮಲೆ ತೆರಳುವ ಭಕ್ತರಿಗಾಗಿ ಮಂಗಳೂರು – ಶಬರಿಮಲೆ ವಿಶೇಷ ರೈಲು ಸೇವೆ..!!  

Next Post

CES 2026 ರ ‘ದಿ ಫಸ್ಟ್ ಲುಕ್’ ಕಾರ್ಯಕ್ರಮದಲ್ಲಿ ಸ್ಯಾಮ್‌ಸಂಗ್ ನಿಂದ ತನ್ನ DX ವಿಷನ್ ಘೋಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
CES 2026 ರ ‘ದಿ ಫಸ್ಟ್ ಲುಕ್’ ಕಾರ್ಯಕ್ರಮದಲ್ಲಿ ಸ್ಯಾಮ್‌ಸಂಗ್ ನಿಂದ ತನ್ನ DX ವಿಷನ್ ಘೋಷಣೆ..!!

CES 2026 ರ 'ದಿ ಫಸ್ಟ್ ಲುಕ್' ಕಾರ್ಯಕ್ರಮದಲ್ಲಿ ಸ್ಯಾಮ್‌ಸಂಗ್ ನಿಂದ ತನ್ನ DX ವಿಷನ್ ಘೋಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved