Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ವಿಜ್ಞಾನ ಮತ್ತು ತಂತ್ರಜ್ಞಾನ

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

Dhrishya News by Dhrishya News
05/12/2025
in ವಿಜ್ಞಾನ ಮತ್ತು ತಂತ್ರಜ್ಞಾನ
0
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!
0
SHARES
13
VIEWS
Share on FacebookShare on Twitter

ಬೆಂಗಳೂರು – ಡಿಸೆಂಬರ್ 5, 2025 -ಭಾರತದ ಅತಿ ದೊಡ್ಡ ಕನ್ಸ್ಯೂಮರ್ ಎಲೆಕ್ಟ್ರಾನಿಕ್ಸ್ ಬ್ರಾಂಡ್ ಆಗಿರುವ ಸ್ಯಾಮ್‌ಸಂಗ್ ಇಂದು ಎಲ್ಲಾ ವಯಸ್ಸಿನವರಿಗೂ ಇಷ್ಟವಾಗುವ ಮನರಂಜನಾ ಸೌಲಭ್ಯ, ಸುಗಮ ಕಾರ್ಯಕ್ಷಮತೆ ಮತ್ತು ಬಹುಮುಖ ಸಾಮರ್ಥ್ಯವನ್ನು ಹೊಂದಿರುವ ಗ್ಯಾಲಕ್ಸಿ ಟ್ಯಾಬ್ ಎ11 ಅನ್ನು ಬಿಡುಗಡೆ ಮಾಡಿದೆ. 

ಗ್ಯಾಲಕ್ಸಿ ಟ್ಯಾಬ್ ಎ11 ನಲ್ಲಿ 8.7 ಇಂಚಿನ ಡಿಸ್‌ಪ್ಲೇ ಇದ್ದು, 90ಹರ್ಟ್ಜ್ ರಿಫ್ರೆಶ್ ರೇಟ್ ಹೊಂದಿದೆ. ವೆಬ್ ಬ್ರೌಸ್ ಮಾಡುತ್ತಿರಲಿ, ಸೋಷಿಯಲ್ ಮೀಡಿಯಾ ನೋಡುತ್ತಿರಲಿ ಅಥವಾ ನೆಚ್ಚಿನ ಶೋಗಳನ್ನು ವೀಕ್ಷಣೆ ಮಾಡುತ್ತಿರಲಿ ಹೀಗೆ ಎಲ್ಲಾ ಸಂದರ್ಭದಲ್ಲಿಯೂ ಎಷ್ಟೇ ಬೆಳಕಿದ್ದರೂ ಅದ್ಭುತ ವೀಕ್ಷಣಾ ಸಾಮರ್ಥ್ಯ ಹೊಂದಿದೆ ಮತ್ತು ಸುಗಮವಾದ ಸ್ಕ್ರಾಲಿಂಗ್ ಅನುಭವ ನೀಡುತ್ತದೆ. ಇದರ ಜೊತೆಗೆ ಡಾಲ್ಬಿ ತಂತ್ರಜ್ಞಾನದ ಡ್ಯುಯಲ್ ಸ್ಪೀಕರ್‌ ಗಳು ಶ್ರೀಮಂತ ಮತ್ತು ಬಹು ಆಯಾಮದ ಆಡಿಯೋ ಸೌಲಭ್ಯ ನೀಡುತ್ತವೆ. ಹಾಗಾಗಿ ಸಿನಿಮಾ, ಸಂಗೀತ ಅಥವಾ ವೀಡಿಯೊ ಕಾಲ್‌ಗಳಿಗೆ ಪರ್ಫೆಕ್ಟ್ ಆಗಿದೆ.

6ಎನ್ಎಂ ಆಧಾರಿತ ಆಕ್ಟಾ-ಕೋರ್ ಪ್ರೊಸೆಸರ್‌ ನಿಂದ ಚಾಲಿತವಾದ ಗ್ಯಾಲಕ್ಸಿ ಟ್ಯಾಬ್ ಎ11 ವೇಗವಾದ ಮತ್ತು ವಿದ್ಯುಚ್ಛಕ್ತಿ ಉಳಿತಾಯದ ಸಾಮರ್ಥ್ಯ ಹೊಂದಿದೆ. ಬ್ರೌಸಿಂಗ್, ಗೇಮಿಂಗ್ ಮತ್ತು ಸತತವಾಗಿ ವೆಬ್ ಸೀರೀಸ್ ವೀಕ್ಷಣೆಗೆ ನೆರವಾಗುವ 5100ಎಂಎಎಚ್ ಬ್ಯಾಟರಿ ಇದೆ.

ವೀಡಿಯೊ ಕಾಲ್‌ಗಳಿಗೆ 5ಎಂಪಿಯ ಫ್ರಂಟ್ ಕ್ಯಾಮೆರಾ ಇದ್ದು, ಹೆಚ್ಚು ಸ್ಪಷ್ಟ ಮತ್ತು ಸೊಗಸಾದ ಚಿತ್ರಣ ನೀಡುತ್ತದೆ. ಕುಟುಂಬದೊಂದಿಗೆ ಮಾತಾಡುತ್ತಿರಲಿ ಅಥವಾ ತಂಡದೊಂದಿಗೆ ಕೆಲಸ ಮಾಡುತ್ತಿರಲಿ ಹೀಗೆ ಎಲ್ಲಾ ಸಂದರ್ಭದಲ್ಲಿ ಪ್ರತಿಯೊಬ್ಬರ ಭಾವನೆಯೂ ಸ್ಪಷ್ಟವಾಗಿ ತಿಳಿಯುವಂತಹ ಸಾಮರ್ಥ್ಯ ಹೊಂದಿದೆ.

ಕ್ಲಾಸಿಕ್ ಗ್ರೇ ಮತ್ತು ಸಿಲ್ವರ್ ಬಣ್ಣಗಳಲ್ಲಿ ಲಭ್ಯವಿರುವ ಗ್ಯಾಲಕ್ಸಿ ಟ್ಯಾಬ್ ಎ11, 8ಜಿಬಿ ವರೆಗೆ ರಾಮ್ ಹೊಂದಿದ್ದು, ವೇಗವಾದ ಮತ್ತು ಸುಗಮ ಮಲ್ಟಿಟಾಸ್ಕಿಂಗ್ ಸಾಧ್ಯವಾಗಿಸುತ್ತದೆ. 12 8ಜಿಬಿ ಸ್ಟೋರೇಜ್ ಇದ್ದು, ದೊಡ್ಡ ಫೈಲ್‌ಗಳಿಗೆ ಸಾಕಷ್ಟು ಜಾಗವಿದೆ. ಇದಲ್ಲದೆ ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 2 ಟಿಬಿವರೆಗೆ ಸ್ಟೋರೇಜ್ ವಿಸ್ತರಿಸಬಹುದು.

*ಬೆಲೆ ಮತ್ತು ಲಭ್ಯತೆ:*

ಗ್ಯಾಲಕ್ಸಿ ಟ್ಯಾಬ್ ಎ11 Samsung.com, ಅಮೆಜಾನ್, ಫ್ಲಿಪ್‌ಕಾರ್ಟ್ ಮತ್ತು ಆಯ್ದ ರಿಟೇಲ್ ಮಳಿಗೆಗಳಲ್ಲಿ ಲಭ್ಯವಿದೆ.

ಉತ್ಪನ್ನ ಕನೆಕ್ಟಿವಿಟಿ ರಾಮ್ ಸ್ಟೋರೇಜ್ ಬೆಲೆ ಬ್ಯಾಂಕ್ ಕ್ಯಾಶ್ ಬ್ಯಾಕ್

ಗ್ಯಾಲಕ್ಸಿ ಟ್ಯಾಬ್ ಎ11 ವೈಫೈ 4ಜಿಬಿ 64ಜಿಬಿ ರೂ. 12999 ರೂ. 1000

ಗ್ಯಾಲಕ್ಸಿ ಟ್ಯಾಬ್ ಎ11 ಎಲ್ ಟಿ ಇ 4ಜಿಬಿ 64ಜಿಬಿ ರೂ. 15999 ರೂ. 1000

ಗ್ಯಾಲಕ್ಸಿ ಟ್ಯಾಬ್ ಎ11 ವೈಫೈ 8ಜಿಬಿ 128ಜಿಬಿ ರೂ. 17999 ರೂ. 1000

ಗ್ಯಾಲಕ್ಸಿ ಟ್ಯಾಬ್ ಎ11 ಎಲ್ ಟಿ ಇ 8ಜಿಬಿ 128ಜಿಬಿ ರೂ. 20999 ರೂ. 1000

Previous Post

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

Next Post

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ - ಪ್ರಯಾಣಿಕರ ತೀವ್ರ ಪರದಾಟ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

14/03/2026

Recent News

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved