Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ರಾ.ಹೆ 169 : ಸಾಣೂರು ಗ್ರಾಪಂ ವ್ಯಾಪ್ತಿಯಲ್ಲಿ  ರಸ್ತೆ ಮಧ್ಯದಲ್ಲಿ ಬಸ್ಸು ಕಾಯುವ ಸಂಕಷ್ಟಕ್ಕೆ ಪರಿಹಾರ ಸನ್ನಿಹಿತ : ಬಸ್ಸು ತಂಗುದಾಣಗಳ ನೀಲನಕಾಶೆ ಸಿದ್ದ..!!

ರಾ.ಹೆ 169 : ಸಾಣೂರು ಗ್ರಾಪಂ ವ್ಯಾಪ್ತಿಯಲ್ಲಿ ಕಳೆದ 3 ವರ್ಷಗಳ ಕಾಲ ಗಾಳಿ ಮಳೆ ಬಿಸಿಲಿಗೆ ಮೈಯೊಡ್ಡಿ ರಸ್ತೆ ಮಧ್ಯದಲ್ಲಿ ಬಸ್ಸು ಕಾಯುವ ಸಂಕಷ್ಟಕ್ಕೆ ಮುಕ್ತಿ ಸನ್ನಿಹಿತ 4 ಬಸ್ಸು ತಂಗುದಾಣಗಳ ನಿರ್ಮಾಣ ಕಾರ್ಯ ಆರಂಭ

Dhrishya News by Dhrishya News
06/12/2025
in ಮುಖಪುಟ
0
ರಾ.ಹೆ 169 : ಸಾಣೂರು ಗ್ರಾಪಂ ವ್ಯಾಪ್ತಿಯಲ್ಲಿ  ರಸ್ತೆ ಮಧ್ಯದಲ್ಲಿ ಬಸ್ಸು ಕಾಯುವ ಸಂಕಷ್ಟಕ್ಕೆ ಪರಿಹಾರ ಸನ್ನಿಹಿತ : ಬಸ್ಸು ತಂಗುದಾಣಗಳ ನೀಲನಕಾಶೆ ಸಿದ್ದ..!!
0
SHARES
103
VIEWS
Share on FacebookShare on Twitter

ಕಾರ್ಕಳ: ಡಿಸೆಂಬರ್ 06:ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಫುಲ್ಕೇರಿ ಬೈಪಾಸ್ ಸರ್ಕಲ್ ನಿಂದ ಮಂಗಳೂರಿನ ಬಿಕರ್ನ ಕಟ್ಟೆಯಯವರೆಗೆ (45 ಕಿ.ಮೀ.)ರಾಷ್ಟ್ರೀಯ ಹೆದ್ದಾರಿ _ 169 ಚತುಷ್ಪಥ ಕಾಮಗಾರಿ ಕಳೆದ 3 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದೆ.

ಹಳೆ ಬಸ್ಸು ತಂಗುದಾಣಗಳು ಧರಾಶಾಯಿ

ಹೆದ್ದಾರಿ ಅಗಲೀಕರಣದ ಸಂದರ್ಭದಲ್ಲಿ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 6 ಬಸ್ಸುತಂಗುದಾಣಗಳನ್ನು ಕೆಡವಿ ಹಾಕಲಾಗಿತ್ತು 

ಹೊಸ ಬಸ್ಸು ನಿಲ್ದಾಣಗಳು ನಿರ್ಮಾಣವಾಗುವವರೆಗೆ ಕನಿಷ್ಠಪಕ್ಷ ತಾತ್ಕಾಲಿಕ ಬಸ್ಸು ತಂಗುದಾಣಗಳನ್ನು ನಿರ್ಮಾಣ ಮಾಡಿಕೊಡಿ ಎನ್ನುವ ನಾಗರಿಕರ ಬೇಡಿಕೆಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಕಿವಿಗೊಡದೆ, ಕಳೆದ 3 ವರ್ಷಗಳಿಂದ ಸಾಣೂರು ಗ್ರಾಮದ ಬಸ್ಸು ಪ್ರಯಾಣಿಕರು ಬಿಸಿಲು ಮಳೆ ಗಾಳಿಗೆ ಮೈಯೊಡ್ಡಿ ರಸ್ತೆ ಮಧ್ಯದಲ್ಲಿ ಅಸುರಕ್ಷಿತವಾಗಿ ಬಸ್ಸು ಕಾಯಬೇಕಾದ ದುರ್ಗತಿ ಒದಗಿ ಬಂದಿತ್ತು.

ಈ ಬಗ್ಗೆ ಹಲವಾರು ಬಾರಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ಜನ ಪ್ರತಿನಿಧಿಗಳಿಗೆ ಮನವಿ ನೀಡಿ ಪ್ರತಿಭಟನೆ ಮಾಡಿದರೂ ಪ್ರಯೋಜನವಾಗಿರಲಿಲ್ಲ.

ರಿಕ್ಷಾ ಚಾಲಕರಿಂದ ತಾತ್ಕಾಲಿಕ ಬಸ್ಸು ತಂಗುದಾಣ ನಿರ್ಮಾಣ

ದಿನಂಪ್ರತಿ ರಸ್ತೆ ಮಧ್ಯದಲ್ಲಿಯೇ ಬಿಸಿಲು ಮಳೆಗೆ ಬಸ್ಸು ಕಾಯಬೇಕಾದ ಜನರ ದುರ್ಗತಿ ನೋಡಿ ಸ್ಥಳೀಯ ರಿಕ್ಷಾ ಚಾಲಕ ಮತ್ತು ಮಾಲಕರು ಜೊತೆಗೂಡಿ ತಾತ್ಕಾಲಿಕ ಬಸ್ಸು ತಂಗುದಾಣವನ್ನು ನಿರ್ಮಾಣ ಮಾಡಿ ಹೆದ್ದಾರಿ ಇಲಾಖೆಗೆ ಎಚ್ಚರಿಕೆ ನೀಡಿ ಸವಾಲು ಒಡ್ಡಿದ್ದರು.

ಸಂಸದರಿಂದ ಹೆದ್ದಾರಿ ಕಾಮಗಾರಿ ಪರಿಶೀಲನೆ

ಇತ್ತೀಚೆಗೆ ಉಡುಪಿ ಸಂಸದರಾದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿಯವರು ಸಾರ್ವಜನಿಕರ ಒತ್ತಡಕ್ಕೆ ಮಣಿದು ಬಾಕಿ ಉಳಿದಿರುವ ಹೆದ್ದಾರಿ ಕಾಮಗಾರಿಗಳ ಪರಿಶೀಲನೆ ಮಾಡುವಾಗ ಡಿಸೆಂಬರ್ ಮೊದಲ ವಾರದ ಒಳಗೆ ಬಸ್ಸು ತಂಗುದಾಣಗಳ ಕೆಲಸಗಳನ್ನುಪ್ರಾರಂಭಿಸುವಂತೆ ದಿನ ನಿಗದಿ ಮಾಡಿ ಹೆದ್ದಾರಿ ಗುತ್ತಿಗೆದಾರರಿಗೆ ತಾಕೀತು ಮಾಡಿದ್ದರು.

 

ಕೊನೆಗೂ ಜನರ ಬಹುಕಾಲದ ಬೇಡಿಕೆಗೆ 3 ವರ್ಷದ ನಂತರ ಮನ್ನಣೆ ಸಿಗುವ ಕಾಲ ಸನ್ನಿಹಿತವಾಗಿದೆ

ಸಾಣೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಬಳಿ ಎದುರು ಬದುರು ಎರಡು ಬಸ್ಸು ತಂಗುದಾಣಗಳು ಮತ್ತು ಮುರತ್ತಂಗಡಿ ಪರಿಸರದ ಇರುವತ್ತೂರು ರಸ್ತೆ ತಿರುವಿನಲ್ಲಿ ಗಂಗಾ ಸ್ಟೋರ್ಸ್ಎದುರು  ಮತ್ತು ರಸ್ತೆಯ ಇನ್ನೊಂದು ಮಗ್ಗುಲಿನಲ್ಲಿ ಗೇರುಬೀಜ ಕಾರ್ಖಾನೆಯ ಎದುರು ಹೊಸ ಬಸ್ಸು ತಂಗುದಾಣ ನಿರ್ಮಾಣಕ್ಕೆ ಜಾಗ ನಿಗದಿಪಡಿಸಿದ್ದು, ಈಗಾಗಲೇ ಸಾಣೂರಿನಲ್ಲಿ ಬಸ್ಸು ತಂಗುದಾಣಗಳ ನಿರ್ಮಾಣಕ್ಕೆ ಕೆಲಸ ಕಾರ್ಯ ಪ್ರಾರಂಭಗೊಂಡಿರುವುದು ಸಮಾಧಾನಕರ ವಿಷಯ ಎಂದು ಸಾರ್ವಜನಿಕರು ಅಭಿಪ್ರಾಯ ಪಡುತ್ತಿದ್ದಾರೆ.

ಗುಣಮಟ್ಟದ ಹೆದ್ದಾರಿ ಕಾಮಗಾರಿಯ ಜೊತೆಗೆ ಸ್ಥಳೀಯ ಜನರ ಮೂಲಭೂತ ಸೌಕರ್ಯ ಮತ್ತು ರಸ್ತೆ ಸುರಕ್ಷತೆಗೆ ಕೂಡ ಹೆದ್ದಾರಿ ಇಲಾಖೆ ಹೆಚ್ಚಿನ ಗಮನ ಕೊಡಬೇಕೆಂದು_ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯ ಪ್ರಮುಖರಾದ ಸಾಣೂರು ನರಸಿಂಹ ಕಾಮತ್ ರವರು ಹೆದ್ದಾರಿ ಇಲಾಖೆ ಮತ್ತು ಜನಪ್ರತಿನಿಧಿಗಳಿಗೆ ಒತ್ತಾಯಿಸಿರುತ್ತಾರೆ

ವರದಿ ಅರುಣ್ ಭಟ್ ಕಾರ್ಕಳ 

Previous Post

ಡಾ. ರಾಮದಾಸ್ ಎಂ ಪೈ ಬ್ಲಾಕ್‌ನಲ್ಲಿರುವ ಮಣಿಪಾಲ ಅಸಿಸ್ಟೆಡ್ ರಿಪ್ರೊಡಕ್ಷನ್ ಸೆಂಟರ್ ( ಮಾರ್ಕ್) ಘಟಕವು ಪ್ರಾರಂಭವಾದ 16 ತಿಂಗಳೊಳಗೆ 100 ಯಶಸ್ವಿ ಗರ್ಭಧಾರಣೆಯ ಮೂಲಕ ಮಹತ್ವದ ಸಾಧನೆ ಮಾಡಿದೆ..!!

Next Post

ಶ್ರೀಕೃಷ್ಣ ಮಠಕ್ಕೆ ಇಂದು ಪವನ್​ ಕಲ್ಯಾಣ್​ ಭೇಟಿ; ಗೀತೋತ್ಸವದಲ್ಲಿ ಭಾಗಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಡಿ.7: ಗೀತೋತ್ಸವ ಸಮಾರೋಪಕ್ಕೆ ಪವನ್ ಕಲ್ಯಾಣ್..!!

ಶ್ರೀಕೃಷ್ಣ ಮಠಕ್ಕೆ ಇಂದು ಪವನ್​ ಕಲ್ಯಾಣ್​ ಭೇಟಿ; ಗೀತೋತ್ಸವದಲ್ಲಿ ಭಾಗಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026