Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾಹೆಗೆ ಪ್ರತಿಷ್ಠಿತ ಸಿಐಐ ಕೈಗಾರಿಕೆ-ಶೈಕ್ಷಣಿಕ ಪಾಲುದಾರಿಕೆ ಪ್ರಶಸ್ತಿ..!!

Dhrishya News by Dhrishya News
09/12/2025
in ಸುದ್ದಿಗಳು
0
ಮಾಹೆಗೆ ಪ್ರತಿಷ್ಠಿತ ಸಿಐಐ ಕೈಗಾರಿಕೆ-ಶೈಕ್ಷಣಿಕ ಪಾಲುದಾರಿಕೆ ಪ್ರಶಸ್ತಿ..!!
0
SHARES
7
VIEWS
Share on FacebookShare on Twitter

ಮಣಿಪಾಲ: ಡಿಸೆಂಬರ್ 09:ಭಾರತೀಯ ಕೈಗಾರಿಕಾ ಒಕ್ಕೂಟದ (Confederation of Indian Industry -CII) ಪ್ರತಿಷ್ಠಿತ ಉದ್ದಿಮೆ-ಶೈಕ್ಷಣಿಕ ಪಾಲುದಾರಿಕೆ ಪ್ರಶಸ್ತಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಪಾತ್ರವಾಗಿದೆ. ನವದೆಹಲಿಯಲ್ಲಿ ಡಿಸೆಂಬರ್ 5 ರಂದು ನಡೆದ ಒಕ್ಕೂಟದ ಕೈಗಾರಿಕೆ-ಶೈಕ್ಷಣಿಕ ಪಾಲುದಾರಿಕೆ ಶೃಂಗಸಭೆಯಲ್ಲಿ, ಮಾಹೆ ಸಂಸ್ಶೆಯ ಕಾರ್ಪೋರೇಟ್ ಸಂಬಂಧಗಳ ನಿರ್ದೇಶಕ ಡಾ| ಹರೀಶ್ ಕುಮಾರ್, ವಿಶ್ವವಿದ್ಯಾಲಯದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.

ಭಾರತೀಯ ಕೈಗಾರಿಕಾ ಒಕ್ಕೂಟ (CII) ಆಯೋಜಿಸಿದ ಈ ಶೃಂಗಸಭೆಯು ಕೈಗಾರಿಕೆ, ಶೈಕ್ಷಣಿಕ, ಸರ್ಕಾರಿ ಸಂಸ್ಥೆಗಳು, ನವೋದ್ಯಮಗಳು, ತಂತ್ರಜ್ಞಾನ ಶೋಧಕರು, ಸಾಹಸೋದ್ಯಮ ಬಂಡವಾಳ ಸಮುದಾಯಗಳನ್ನು ಆಕರ್ಷಿಸಿತ್ತು. ವಿಜ್ಞಾನ ನಾಯಕರು, ವ್ಯಾಪಾರ ಪ್ರವರ್ತಕರು, ನೀತಿ ನಿರೂಪಕರು ಮತ್ತು ಉದಯೋನ್ಮುಖ ಉದ್ಯಮಿಗಳು ಹೆಚ್ಚಾಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಉದ್ದಿಮೆ ಹಾಗೂ ಶಿಕ್ಷಣ ಪಾಲುದಾರಿಕೆ 2025 ವಿಶೇಷ ಯೋಜನೆಯಡಿ ಆಯೋಜಿಸಿರುವ ಒಕ್ಕೂಟದ ಜಾಗತಿಕ ಕೈಗಾರಿಕಾ ಶೃಂಗಸಭೆಯು
CII ಜಾಗತಿಕ ಕೈಗಾರಿಕೆ ಶೃಂಗಸಭೆ – ಶೈಕ್ಷಣಿಕ ಪಾಲುದಾರಿಕೆ 2025

ಶೈಕ್ಷಣಿಕ, ಉದ್ಯಮ ಮತ್ತು ಸರ್ಕಾರದ ನಡುವಿನ ಸಹಯೋಗವನ್ನು ಬಲಪಡಿಸುವ ಗುರಿಯನ್ನು ಬಲಪಡಿಸಲು ಒಕ್ಕೂಟವು 2025 ಸಾಲಿನಲ್ಲಿ ಉದ್ದಿಮೆ ಹಾಗೂ ಶಿಕ್ಷಣ ಪಾಲುದಾರಿಕೆ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಮಾತ್ರವಲ್ಲದೇ, ಉದ್ಯಮ-ಕೇಂದ್ರಿತ ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಶ್ರೇಷ್ಠತೆಯನ್ನು ಪ್ರದರ್ಶಿಸುವ ಸಂಸ್ಥೆಗಳನ್ನು ಒಕ್ಕೂಟವು ಗುರುತಿಸುತ್ತಿದೆ.

ಮಾಹೆಗೆ ಒಲಿದಿರುವ ಒಕ್ಕೂಟದ ಪ್ರತಿಷ್ಠಿತ ಪ್ರಶಸ್ತಿಯ ಕುರಿತು ಮಾಹೆ ಉಪಕುಲಪತಿ ಲೆ.ಜ. (ಡಾ|) ಎಂ.ಡಿ. ವೆಂಕಟೇಶ್, ವಿಎಸ್ಎಂ (ನಿ) ಅವರು ಸಂತಸ ವ್ಯಕ್ತಪಡಿಸಿ, “ಈ ಪ್ರತಿಷ್ಠಿತ ಮನ್ನಣೆಯನ್ನು ಪಡೆದಿರುವುದು ನಮಗೆ ಅತ್ಯಂತ ಗೌರವ ತಂದಿದೆ. ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಉದ್ಯಮ ಪಾಲುದಾರರು ನಿರಂತರವಾಗಿ ಒಟ್ಟಾಗಿ ಕೆಲಸ ಮಾಡುವ ಮತ್ತು ಜ್ಞಾನ ಮತ್ತು ನಾವೀನ್ಯತೆಯ ಗಡಿಗಳನ್ನು ನಿರಂತರವಾಗಿ ವಿಸ್ತರಿಸುತ್ತಿದ್ದಾರೆ. ಆ ಮೂಲಕ ನಮ್ಮ ಬದ್ಧತೆಯನ್ನು ಇದು ನಿಜವಾಗಿಯೂ ಪುನರುಚ್ಚರಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಸಮಾಜದ ಧನಾತ್ಮಕ ಪರಿವರ್ತನೆಯ ಆಶಾದಾಯಕ ಫಲಿತಾಂಶಗಳತ್ತ ಕೊಡುಗೆ ನೀಡಬಹುದು” ಎಂದು ಹೇಳಿದರು.
ಈ ಪ್ರಶಸ್ತಿಯ ಕುರಿತು ಮಾತನಾಡಿದ ಮಾಹೆ ಕಾರ್ಪೊರೇಟ್ ಸಂಬಂಧಗಳ ನಿರ್ದೇಶಕ ಡಾ. ಹರೀಶ್ ಕುಮಾರ್ ಎಸ್, “ವಾಸ್ತವ ಪ್ರಪಂಚದ ಸವಾಲುಗಳಿಗೆ ಪರಿಹಾರಗಳನ್ನು ಕಂಡು ಹಿಡಿಯುವ ಪ್ರಯತ್ನಕ್ಕೆ ಸಂದ ಪ್ರಶಸ್ತಿ ಇದಾಗಿದೆ. ರಾಷ್ಟ್ರೀಯ ಪ್ರಗತಿಗಾಗಿ ಸಂಶೋಧನೆ, ನಾವೀನ್ಯತೆ ಮತ್ತು ಪ್ರತಿಭೆಗಳ ಅಭಿವೃದ್ಧಿಗಾಗಿ ವೇಗವರ್ಧಕ ಪಾಲುದಾರಿಕೆಗಳನ್ನು ಬೆಳೆಸಲು ಮಾಹೆ ಬದ್ಧವಾಗಿದೆ ಎಂದು ಅವರು ಹೇಳಿದರು.

ಈ ಮೈಲಿಗಲ್ಲು ಬಲವಾದ, ಭವಿಷ್ಯಕ್ಕೆ ಸಿದ್ಧವಾಗಿರುವ ಉದ್ಯಮ ಸಂಪರ್ಕಗಳನ್ನು ನಿರ್ಮಿಸಲು ಮತ್ತು ಭಾರತದ ನಾವೀನ್ಯತೆ ಪರಿಸರ ವ್ಯವಸ್ಥೆಗೆ ಅರ್ಥಪೂರ್ಣವಾಗಿ ಕೊಡುಗೆ ನೀಡಲು ಮಾಹೆಯ ನಿರಂತರ ಪ್ರಯತ್ನಗಳನ್ನು ಬಲಪಡಿಸುತ್ತದೆ.

Previous Post

ಕಾರ್ಕಳ, ನೀಚ ಬೊಬ್ಬರ್ಯ ದೈವಸ್ಥಾನ ಗುಡ್ಡೆಯಂಗಡಿ , ವರ್ಷಂಪ್ರತಿ ನಡೆಯುವ ಕಾಲಾವಧಿ ನೇಮೋತ್ಸವ..!!

Next Post

EXCON 2025 ರಲ್ಲಿ ಟಾಟಾ ಮೋಟಾರ್ಸ್ ನವೀನ, ಸುಸ್ಥಿರ ಮತ್ತು ಬುದ್ಧಿವಂತ ಚಲನಶೀಲತೆ ಪರಿಹಾರಗಳೊಂದಿಗೆ ಮುಂಚೂಣಿಯಲ್ಲಿದೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
EXCON 2025 ರಲ್ಲಿ ಟಾಟಾ ಮೋಟಾರ್ಸ್ ನವೀನ, ಸುಸ್ಥಿರ ಮತ್ತು ಬುದ್ಧಿವಂತ ಚಲನಶೀಲತೆ ಪರಿಹಾರಗಳೊಂದಿಗೆ ಮುಂಚೂಣಿಯಲ್ಲಿದೆ..!!

EXCON 2025 ರಲ್ಲಿ ಟಾಟಾ ಮೋಟಾರ್ಸ್ ನವೀನ, ಸುಸ್ಥಿರ ಮತ್ತು ಬುದ್ಧಿವಂತ ಚಲನಶೀಲತೆ ಪರಿಹಾರಗಳೊಂದಿಗೆ ಮುಂಚೂಣಿಯಲ್ಲಿದೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved