Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ‌ ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್..!!

Dhrishya News by Dhrishya News
10/12/2025
in ಸುದ್ದಿಗಳು
0
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ‌ ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್..!!
0
SHARES
3
VIEWS
Share on FacebookShare on Twitter

ಬೆಳಗಾವಿ, ಡಿ.10:ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಕೆಎಸ್ ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ತಮ್ಮನ್ನು ಭೇಟಿ ಮಾಡಿದ ನಂತರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.

“ನಮಗೆ ಕ್ರಿಕೆಟ್ ಪಂದ್ಯಾವಳಿ ನಿಲ್ಲಿಸಬೇಕು ಎನ್ನುವ ಯಾವುದೇ ಉದ್ದೇಶವಿಲ್ಲ. ಆದರೆ ಜನಜಂಗುಳಿಯ ನಿಯಂತ್ರಣ ಕ್ರಮಗಳ ಬಗ್ಗೆ ಆಲೋಚಿಸಬೇಕು. ಜೊತೆಗೆ ಮೈಕಲ್ ಡಿ ಕುನ್ಹಾ ಸಮಿತಿ ನೀಡಿರುವ ಸಲಹೆಗಳನ್ನು ಹಂತ, ಹಂತವಾಗಿ ಪಾಲನೆ ಮಾಡುವುದು ನಮ್ಮ ಆಲೋಚನೆ. ಇದನ್ನು ವೆಂಕಟೇಶ್ ಪ್ರಸಾದ್ ಅವರು ಕೂಡ ಒಪ್ಪಿಕೊಂಡಿದ್ದಾರೆ ಎಂದರು. “ನಮ್ಮ ರಾಜ್ಯದ ಗೌರವ, ಸ್ವಾಭಿಮಾನಕ್ಕೆ ಯಾವುದೇ ಧಕ್ಕೆ ಆಗದ ರೀತಿಯಲ್ಲಿ ಕ್ರಿಕೆಟ್ ಅಭಿಮಾನಿಗಳ ಭಾವನೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಬದ್ದವಾಗಿದೆ” ಎಂದರು.

“ಐಪಿಎಲ್ ಸೇರಿದಂತೆ ಯಾವುದೇ ಪಂದ್ಯಗಳು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ. ಒಗ್ಗೂಡಿ ‌ಕೆಲಸ ಮಾಡೋಣ ಎಂದು ತಿಳಿಸಿದ್ದೇನೆ. ನೂತನ ಸ್ಟೇಡಿಯಂಗಳ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಇದರ ಬಗ್ಗೆಯೂ ಚರ್ಚೆ ನಡೆಸಲಾಗುವುದು” ಎಂದರು.

“ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂದೆ ನಡೆಯುವ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಬೇಕು ಎಂದು ನೂತನವಾಗಿ ಕೆಎಸ್ ಸಿಎ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಮತ್ತು ತಂಡದವರು ಮುಖ್ಯಮಂತ್ರಿಯವರು ಹಾಗೂ ನನ್ನನ್ನು ಭೇಟಿ ಮಾಡಿ ಸರ್ಕಾರದ ಸಹಕಾರ ಕೋರಿದ್ದಾರೆ” ಎಂದರು.

“ಮಾಜಿ ಕ್ರಿಕೆಟಿಗರಾದ ಜಾವಗಲ್ ಶ್ರೀನಾಥ್, ಅನಿಲ್ ಕುಂಬ್ಳೆ ಅವರ ಬೆಂಬಲ ಹೊಂದಿರುವ ಹಾಗೂ ನೂತನ ಜವಾಬ್ದಾರಿ ಹೊತ್ತಿರುವ ವೆಂಕಟೇಶ್ ಪ್ರಸಾದ್ ಅವರ ತಂಡ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಲಿ ಎಂದು ಆಶಿಸುತ್ತೇನೆ.‌ ಇವರಿಗೆ ಸರ್ಕಾರದ ಪರವಾಗಿ ಅಭಿನಂದನೆಗಳನ್ನು ತಿಳಿಸಿದ್ದೇನೆ” ಎಂದರು.

Previous Post

ಡಾ ಶಿರನ್ ಶೆಟ್ಟಿ ಜಪಾನ್‌ನ ಒಸಾಕಾ ಕ್ಯಾನ್ಸರ್ ಕೇಂದ್ರದಲ್ಲಿ ಪ್ರತಿಷ್ಠಿತ ಸುಧಾರಿತ ಎಂಡೋಸ್ಕೋಪಿ ಕಾರ್ಯಾಗಾರವನ್ನು ಪೂರ್ಣಗೊಳಿಸಿದ್ದಾರೆ ಈ ಮೂಲಕ ಎಂಡೋಸ್ಕೋಪಿ ಮಾನದಂಡಗಳನ್ನು ಹೆಚ್ಚಿಸಿದ್ದಾರೆ.!!

Next Post

ವಿಶ್ವಬ್ರಾಹ್ಮಣ ಯುವಸಂಘಟನೆ ಕಾಪು:ಚತುರ್ಥ ಬಾರಿಯ ಸಾಮೂಹಿಕ ವಿವಾಹ ಸಮಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ವಿಶ್ವಬ್ರಾಹ್ಮಣ ಯುವಸಂಘಟನೆ ಕಾಪು:ಚತುರ್ಥ ಬಾರಿಯ ಸಾಮೂಹಿಕ ವಿವಾಹ ಸಮಾರಂಭ..!!

ವಿಶ್ವಬ್ರಾಹ್ಮಣ ಯುವಸಂಘಟನೆ ಕಾಪು:ಚತುರ್ಥ ಬಾರಿಯ ಸಾಮೂಹಿಕ ವಿವಾಹ ಸಮಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿಶ್ವಬ್ರಾಹ್ಮಣ ಯುವಸಂಘಟನೆ ಕಾಪು:ಚತುರ್ಥ ಬಾರಿಯ ಸಾಮೂಹಿಕ ವಿವಾಹ ಸಮಾರಂಭ..!!

ವಿಶ್ವಬ್ರಾಹ್ಮಣ ಯುವಸಂಘಟನೆ ಕಾಪು:ಚತುರ್ಥ ಬಾರಿಯ ಸಾಮೂಹಿಕ ವಿವಾಹ ಸಮಾರಂಭ..!!

10/12/2025
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ‌ ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್..!!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ‌ ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್..!!

10/12/2025
ಡಾ ಶಿರನ್ ಶೆಟ್ಟಿ ಜಪಾನ್‌ನ ಒಸಾಕಾ ಕ್ಯಾನ್ಸರ್ ಕೇಂದ್ರದಲ್ಲಿ ಪ್ರತಿಷ್ಠಿತ ಸುಧಾರಿತ ಎಂಡೋಸ್ಕೋಪಿ ಕಾರ್ಯಾಗಾರವನ್ನು ಪೂರ್ಣಗೊಳಿಸಿದ್ದಾರೆ ಈ ಮೂಲಕ ಎಂಡೋಸ್ಕೋಪಿ ಮಾನದಂಡಗಳನ್ನು ಹೆಚ್ಚಿಸಿದ್ದಾರೆ.!!

ಡಾ ಶಿರನ್ ಶೆಟ್ಟಿ ಜಪಾನ್‌ನ ಒಸಾಕಾ ಕ್ಯಾನ್ಸರ್ ಕೇಂದ್ರದಲ್ಲಿ ಪ್ರತಿಷ್ಠಿತ ಸುಧಾರಿತ ಎಂಡೋಸ್ಕೋಪಿ ಕಾರ್ಯಾಗಾರವನ್ನು ಪೂರ್ಣಗೊಳಿಸಿದ್ದಾರೆ ಈ ಮೂಲಕ ಎಂಡೋಸ್ಕೋಪಿ ಮಾನದಂಡಗಳನ್ನು ಹೆಚ್ಚಿಸಿದ್ದಾರೆ.!!

10/12/2025
ಪಡುಬಿದ್ರಿ : ಭೀಕರ ರಸ್ತೆ ಅಪಘಾತ- ಗೌಜಿ ಇವೆಂಟ್‌ ಮಾಲೀಕ ಸಾವು..!!

ಪಡುಬಿದ್ರಿ : ಭೀಕರ ರಸ್ತೆ ಅಪಘಾತ- ಗೌಜಿ ಇವೆಂಟ್‌ ಮಾಲೀಕ ಸಾವು..!!

10/12/2025

Recent News

ವಿಶ್ವಬ್ರಾಹ್ಮಣ ಯುವಸಂಘಟನೆ ಕಾಪು:ಚತುರ್ಥ ಬಾರಿಯ ಸಾಮೂಹಿಕ ವಿವಾಹ ಸಮಾರಂಭ..!!

ವಿಶ್ವಬ್ರಾಹ್ಮಣ ಯುವಸಂಘಟನೆ ಕಾಪು:ಚತುರ್ಥ ಬಾರಿಯ ಸಾಮೂಹಿಕ ವಿವಾಹ ಸಮಾರಂಭ..!!

10/12/2025
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ‌ ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್..!!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ‌ ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್..!!

10/12/2025
ಡಾ ಶಿರನ್ ಶೆಟ್ಟಿ ಜಪಾನ್‌ನ ಒಸಾಕಾ ಕ್ಯಾನ್ಸರ್ ಕೇಂದ್ರದಲ್ಲಿ ಪ್ರತಿಷ್ಠಿತ ಸುಧಾರಿತ ಎಂಡೋಸ್ಕೋಪಿ ಕಾರ್ಯಾಗಾರವನ್ನು ಪೂರ್ಣಗೊಳಿಸಿದ್ದಾರೆ ಈ ಮೂಲಕ ಎಂಡೋಸ್ಕೋಪಿ ಮಾನದಂಡಗಳನ್ನು ಹೆಚ್ಚಿಸಿದ್ದಾರೆ.!!

ಡಾ ಶಿರನ್ ಶೆಟ್ಟಿ ಜಪಾನ್‌ನ ಒಸಾಕಾ ಕ್ಯಾನ್ಸರ್ ಕೇಂದ್ರದಲ್ಲಿ ಪ್ರತಿಷ್ಠಿತ ಸುಧಾರಿತ ಎಂಡೋಸ್ಕೋಪಿ ಕಾರ್ಯಾಗಾರವನ್ನು ಪೂರ್ಣಗೊಳಿಸಿದ್ದಾರೆ ಈ ಮೂಲಕ ಎಂಡೋಸ್ಕೋಪಿ ಮಾನದಂಡಗಳನ್ನು ಹೆಚ್ಚಿಸಿದ್ದಾರೆ.!!

10/12/2025
ಪಡುಬಿದ್ರಿ : ಭೀಕರ ರಸ್ತೆ ಅಪಘಾತ- ಗೌಜಿ ಇವೆಂಟ್‌ ಮಾಲೀಕ ಸಾವು..!!

ಪಡುಬಿದ್ರಿ : ಭೀಕರ ರಸ್ತೆ ಅಪಘಾತ- ಗೌಜಿ ಇವೆಂಟ್‌ ಮಾಲೀಕ ಸಾವು..!!

10/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved