Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ವಿಜ್ಞಾನ ಮತ್ತು ತಂತ್ರಜ್ಞಾನ

2025ರಲ್ಲಿ ಬಿಸಿನೆಸ್ ಮತ್ತು ವಿರಾಮ ಪ್ರವಾಸಿ ಸ್ಥಳಗಳಲ್ಲಿ ಅಗ್ರ ಸ್ಥಾನ ಪಡೆದ ಬೆಂಗಳೂರು..!!

Dhrishya News by Dhrishya News
18/12/2025
in ವಿಜ್ಞಾನ ಮತ್ತು ತಂತ್ರಜ್ಞಾನ
0
2025ರಲ್ಲಿ ಬಿಸಿನೆಸ್ ಮತ್ತು ವಿರಾಮ ಪ್ರವಾಸಿ ಸ್ಥಳಗಳಲ್ಲಿ ಅಗ್ರ ಸ್ಥಾನ ಪಡೆದ ಬೆಂಗಳೂರು..!!
0
SHARES
10
VIEWS
Share on FacebookShare on Twitter

 

● 2025ರಲ್ಲಿ ಕ್ಲಿಯರ್‌ಟ್ರಿಪ್‌ನಲ್ಲಿ ಬುಕ್ ಆದ ಅತಿ ದೀರ್ಘ ಹೋಟೆಲ್ ವಾಸ್ತವ್ಯ ಬೆಂಗಳೂರಿನದ್ದಾಗಿದೆ.

● ಭಾರತದಲ್ಲಿ ಅತಿ ಹೆಚ್ಚು ಹುಡುಕಲಾದ ತಾಣಗಳಲ್ಲಿ ಮೂರನೇ ಸ್ಥಾನದಲ್ಲಿದೆ.

● ಗಾಜಿಯಾಬಾದ್‌ನಿಂದ ಬೆಂಗಳೂರಿಗೆ ವಿಮಾನ ಪ್ರಯಾಣ ಮಾಡಿದ ಒಬ್ಬ ಪ್ರಯಾಣಿಕ ಹೆಚ್ಚುವರಿ ಬ್ಯಾಗೇಜ್ ಶುಲ್ಕವಾಗಿ ₹65,000 ಖರ್ಚು ಮಾಡಿದ್ದಾರೆ.

● ಎರಡನೇ ಅತಿ ಜನಪ್ರಿಯ ಸೋಲೋ ಟ್ರಾವೆಲ್ ತಾಣವಾಗಿ ಮೂಡಿಬಂದಿದೆ.

 

ಕ್ಲಿಯರ್‌ಟ್ರಿಪ್ ಸಂಸ್ಥೆಯು ಕ್ಲಿಯರ್‌ಟ್ರಿಪ್ ಅನ್‌ಪ್ಯಾಕ್ಡ್ 2025 ವರ್ಷಾಂತ್ಯ ಪ್ರವಾಸ ವರದಿ ಬಿಡುಗಡೆ ಮಾಡಿದ್ದು, ಆ ವರದಿಯು ಬೆಂಗಳೂರು ಬಿಸಿನೆಸ್ ಹಬ್ ಆಗಿ ಹೆಚ್ಚು ಆಕರ್ಷಣೆ ಗಳಿಸುತ್ತಿರುವುದನ್ನು ಸಾರಿದೆ. ಅಕ್ಟೋಬರ್‌ನಲ್ಲಿ ನಗರದಲ್ಲಿ 30 ದಿನಗಳ ದೀರ್ಘ ಬುಕಿಂಗ್ ಆಗಿದ್ದಾಗಿ ಕ್ಲಿಯರ್ ಟ್ರಿಪ್ ವರದಿ ತಿಳಿಸಿದ್ದು, ಈ ಮೂಲಕ ಬೆಂಗಳೂರು ಈ ವರ್ಷದ ಅತಿ ದೀರ್ಘ ಹೋಟೆಲ್ ವಾಸ್ತವ್ಯ ಹೊಂದಿದ ದಾಖಲೆ ಮಾಡಿದೆ. ಅದೇ ತಿಂಗಳಲ್ಲಿ ಪ್ಲಾಟ್‌ಫಾರ್ಮ್‌ನಲ್ಲಿ 5ನೇ ಅತಿ ದೀರ್ಘ ವಾಸ್ತವ್ಯದ ದಾಖಲೆ ಕೂಡ ಬೆಂಗಳೂರಿನದ್ದಾಗಿದೆ.

 

ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲ್ಪಡುವ ಬೆಂಗಳೂರು, 2,500ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳ ಮನೆಯಾಗಿದ್ದು, ಜನಪ್ರಿಯ ರಜಾ ತಾಣಗಳಿಗೆ ಉತ್ತಮ ರಸ್ತೆ ಸಂಪರ್ಕ ಹೊಂದಿದೆ. ಆದ್ದರಿಂದ ಬಿಸಿನೆಸ್ ಮತ್ತು ವಿರಾಮ ಪ್ರವಾಸಿ ಕೇಂದ್ರವಾಗಿ ಅದರ ಬೆಳವಣಿಗೆಯು ಆಶ್ಚರ್ಯವೇನಲ್ಲ. ನಗರದಲ್ಲಿ ಕೆಲಸ ಸಂಬಂಧಿತ ಪ್ರವಾಸಗಳ ಹೋಟೆಲ್ ಬುಕಿಂಗ್‌ಗಳು 54.74% ಹೆಚ್ಚಾಗಿವೆ ಮತ್ತು ಅತಿ ಹೆಚ್ಚು ಹುಡುಕಲಾದ ಮೂರು ತಾಣಗಳಲ್ಲಿ ಒಂದಾಗಿದೆ. ಕೊಡಗು, ಊಟಿ ಮತ್ತು ಕೊಡೈಕೆನಾಲ್‌ಗಳಿಗೆ ಹಾಗೂ ಅಲ್ಲಿಂದ ಇಲ್ಲಿಗೆ ಅತಿ ಹೆಚ್ಚು ಪ್ರಯಾಣಗಳು ದಾಖಲಾಗಿವೆ.

 

ವರದಿಯು ಕರ್ನಾಟಕಕ್ಕೆ ಸಂಬಂಧಿಸಿದ ವರ್ಷದ ಕೆಲವು ಅಸಾಮಾನ್ಯ ಪ್ರವಾಸ ಕ್ಷಣಗಳನ್ನೂ ತಿಳಿಸಿದೆ. 2025ರಲ್ಲಿ ಚಿಕ್ಕಮಗಳೂರಿನ ಒಂದು ಪ್ರಾಪರ್ಟಿಗೆ ಬಹಳ ಮೊದಲೇ ಹೋಟೆಲ್ ಬುಕಿಂಗ್ ಅಂದರೆ 361 ದಿನಗಳ ಮುಂಚಿತವಾಗಿ ಬುಕಿಂಗ್ ಮಾಡಲಾಗಿದೆ. ಜುಲೈಯಲ್ಲಿಯೇ ಬುಕ್ ಮಾಡಲಾಗಿದೆ. ಜನಪ್ರಿಯ ಹಿಲ್ ಸ್ಟೇಷನ್ ಗಳ ಮೇಲಿನ ಪ್ರೀಮಿಯಂ ವಾಸ್ತವ್ಯ ಸೌಲಭ್ಯಕ್ಕೆ ಪ್ರಯಾಣಿಕರು ಬಹಳ ಮುಂಚಿತವಾಗಿ ಯೋಜನೆ ಮಾಡುತ್ತಿರುವುದನ್ನು ಇದು ತೋರಿಸುತ್ತದೆ.

 

ವಿಶೇಷವೆಂದರೆ ಗಾಜಿಯಾಬಾದ್‌ನಿಂದ ಬೆಂಗಳೂರಿಗೆ ವಿಮಾನ ಪ್ರಯಾಣ ಮಾಡಿದ ಒಬ್ಬ ಪ್ರಯಾಣಿಕ ಹೆಚ್ಚುವರಿ ಬ್ಯಾಗೇಜ್ ಶುಲ್ಕವಾಗಿ ₹65,000 ಪಾವತಿಸಿದ್ದಾರೆ, ಇದು ಪ್ಲಾಟ್‌ಫಾರ್ಮ್‌ನಲ್ಲಿ ದಾಖಲಾದ ಅತಿ ದುಬಾರಿ ಶುಲ್ಕ ಪಾವತಿಗಳಲ್ಲಿ ಒಂದು.

 

ನಗರದ ಸಾಂಸ್ಕೃತಿಕ ಆಕರ್ಷಣೆಯೂ ತೀವ್ರಗೊಳ್ಳುತ್ತಿದ್ದು, ಬೆಂಗಳೂರು ಎರಡನೇ ಅತಿ ಜನಪ್ರಿಯ ಸೋಲೋ ಟ್ರಾವೆಲ್ ತಾಣವಾಗಿ ಹೊರಹೊಮ್ಮಿದೆ. ಇದು ಅದರ ಸ್ವಾಗತಾರ್ಹ ವಾತಾವರಣ, ನಗರ ಜೀವನಶೈಲಿ ಮತ್ತು ಪ್ರಕೃತಿ ಸ್ನೇಹಿ ತಾಣಗಳಿಗೆ ಸುಲಭ ಸಂಪರ್ಕ ಇತ್ಯಾದಿ ಕಾರಣದಿಂದ ಸಾಧ್ಯವಾಗಿದೆ.

Previous Post

ಮಂಗಳೂರು ವಿವಿ: ವಾಣಿಜ್ಯ ವಿಭಾಗದ ಹಳೆ ವಿದ್ಯಾರ್ಥಿಗಳ ಅಲೂಮ್ನಿ ಮೀಟ್ – ಸಮನ್ವಿತ..!!

Next Post

ಮೂವ್‌ವರ್ಕ್ಸ್ ಅನ್ನು ಸ್ವಾಧೀನ ಪಡಿಸಿಕೊಂಡ ಸರ್ವೀಸ್‌ನೌ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮೂವ್‌ವರ್ಕ್ಸ್ ಅನ್ನು ಸ್ವಾಧೀನ ಪಡಿಸಿಕೊಂಡ ಸರ್ವೀಸ್‌ನೌ..!!

ಮೂವ್‌ವರ್ಕ್ಸ್ ಅನ್ನು ಸ್ವಾಧೀನ ಪಡಿಸಿಕೊಂಡ ಸರ್ವೀಸ್‌ನೌ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

28/01/2026
ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಮತಾ ಅಂಚನ್ ಆಯ್ಕೆ

ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಮತಾ ಅಂಚನ್ ಆಯ್ಕೆ

28/01/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

28/01/2026
ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ‌ ಸಾಧನೆ: ಸಂಜೀವ ಬಳ್ಕೂರ್ ಅವರಿಗೆ ಅಭಿನಂದನೆ…!

ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ‌ ಸಾಧನೆ: ಸಂಜೀವ ಬಳ್ಕೂರ್ ಅವರಿಗೆ ಅಭಿನಂದನೆ…!

28/01/2026

Recent News

ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

28/01/2026
ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಮತಾ ಅಂಚನ್ ಆಯ್ಕೆ

ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಮತಾ ಅಂಚನ್ ಆಯ್ಕೆ

28/01/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

28/01/2026
ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ‌ ಸಾಧನೆ: ಸಂಜೀವ ಬಳ್ಕೂರ್ ಅವರಿಗೆ ಅಭಿನಂದನೆ…!

ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ‌ ಸಾಧನೆ: ಸಂಜೀವ ಬಳ್ಕೂರ್ ಅವರಿಗೆ ಅಭಿನಂದನೆ…!

28/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved