Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಮಾಹೆ ಕಾರ್ಪೊರೇಟ್ ಕ್ರಿಕೆಟ್ ಟೂರ್ನಿ: ಕೆಪಿಎಂಜಿ ತಂಡವನ್ನು ಮಣಿಸಿ ಚಾಂಪಿಯನ್‌ ಟ್ರೋಫಿ ಎತ್ತಿದ ಮಣಿಪಾಲ್ ಹಾಸ್ಪಿಟಲ್ಸ್..!!

Dhrishya News by Dhrishya News
18/12/2025
in मौसम
0
0
SHARES
1
VIEWS
Share on FacebookShare on Twitter

ಬೆಂಗಳೂರು, ಡಿಸೆಂಬರ್‌ 19, 2025- ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ವಿಶ್ವವಿದ್ಯಾಲಯ ಎಂದು ಪರಿಗಣಿತವಾದ ಉತ್ಕೃಷ್ಟ ಸಂಸ್ಥೆ ಆಯೋಜಿಸಿದ್ದ ‘ಕಾರ್ಪೊರೇಟ್ ಕ್ರಿಕೆಟ್ ಚಾಂಪಿಯನ್‌ಶಿಪ್-2025’ ಭಾನುವಾರ ಮಾಹೆ ಬೆಂಗಳೂರು ಕ್ಯಾಂಪಸ್‌ನಲ್ಲಿ ನಡೆದ ಅದ್ಧೂರಿ ಫೈನಲ್ ಪಂದ್ಯದೊಂದಿಗೆ ತೆರೆಕಂಡಿತು. ನವೆಂಬರ್ 16ರಂದು ಆರಂಭವಾಗಿದ್ದ ಈ ಒಂದು ತಿಂಗಳ ಟೂರ್ನಮೆಂಟ್‌ನಲ್ಲಿ 12 ಪ್ರಮುಖ ಕಾರ್ಪೊರೇಟ್ ಸಂಸ್ಥೆಗಳ ತಂಡಗಳು ಭಾಗವಹಿಸಿದ್ದವು. ಈ ಟೂರ್ನಮೆಂಟ್‌ನಲ್ಲಿ ಒಟ್ಟು 16 ರೋಚಕ ಟಿ-20 ಪಂದ್ಯಗಳು ನಡೆದವು.

ನಾಲ್ಕು ಗುಂಪು ಹಂತದ ಈ ಟೂರ್ನಿಯಲ್ಲಿ, ಪ್ರತಿ ತಂಡಕ್ಕೆ ತಲಾ ಎರಡು ಲೀಗ್ ಪಂದ್ಯಗಳನ್ನು ಆಡುವ ಅವಕಾಶ ನೀಡಲಾಗಿತ್ತು. ಲೀಗ್ ಹಂತದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ನಾಲ್ಕು ತಂಡಗಳು ಡಿಸೆಂಬರ್ 13 ರಂದು ನಡೆದ ಸೆಮಿಫೈನಲ್‌ಗೆ ಅರ್ಹತೆ ಪಡೆದಿದ್ದವು. ಇಂದು ನಡೆದ ಫೈನಲ್ ಪಂದ್ಯದೊಂದಿಗೆ ಈ ಪಂದ್ಯಾವಳಿ ಮುಕ್ತಾಯವಾಯಿತು.

ರೋಚಕತೆಯಿಂದ ಕೂಡಿದ್ದ ಫೈನಲ್ ಹಣಾಹಣಿಯಲ್ಲಿ ಮಣಿಪಾಲ್ ಹಾಸ್ಪಿಟಲ್ಸ್ ಮತ್ತು ಕೆಪಿಎಂಜಿ ತಂಡಗಳು ಸೆಣಸಾಡಿದವು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಮಣಿಪಾಲ್ ಹಾಸ್ಪಿಟಲ್ಸ್, ಉತ್ತಮವಾಗಿ ಆಟವಾಡುವ ಮೂಲಕ ಮೂಲಕ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 157 ರನ್ ಗಳಿಸಿತು. ಈ ಗುರಿಯನ್ನು ಬೆನ್ನತ್ತಿದ ಕೆಪಿಎಂಜಿ ತಂಡವು 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 133 ರನ್ ಗಳಿಸಲಷ್ಟೇ ಶಕ್ತವಾಯಿತು. ಅಂತಿಮವಾಗಿ ಮಣಿಪಾಲ್ ಹಾಸ್ಪಿಟಲ್ಸ್ ತಂಡವು, 2025ರ ಮಾಹೆ ಕಾರ್ಪೊರೇಟ್ ಕ್ರಿಕೆಟ್ ಚಾಂಪಿಯನ್ ಆಗಿ ಹೊರಹೊಮ್ಮಿತು.

ಪ್ರಶಸ್ತಿ ಪ್ರಧಾನ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾಹೆ ಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ.) ಎಂ.ಡಿ. ವೆಂಕಟೇಶ್ (ನಿವೃತ್ತ) ಅವರು ಭಾಗವಹಿಸಿದ್ದರು. ಮಾಹೆ ಬೆಂಗಳೂರು ಹಾಗೂ ಎಂಎಲ್‌ಎಚ್‌ಎಸ್‌ನ ಸಹ ಕುಲಪತಿ ಪ್ರೊ. ಮಧು ವೀರರಾಘವನ್, ಮಾಹೆ ಮಣಿಪಾಲ್ ಸಿಒಒ ಡಾ. ಆನಂದ್ ವೇಣುಗೋಪಾಲ್, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ, ಮಣಿಪಾಲ್ ಕ್ಲಸ್ಟರ್ ಸಿಒಒ ಡಾ. ಸುಧಾಕರ್ ಕಂಟಿಪುಡಿ, ಮಾಹೆ ಮಣಿಪಾಲ್‌ ಕಾರ್ಪೋರೇಟ್‌ ವಿಭಾಗದ ಮುಖ್ಯಸ್ಥರಾದ ಹರೀಶ್‌ ಕುಮಾರ್‌ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಗಣ್ಯರನ್ನು ಸ್ವಾಗತಿಸಿದ ಮಾಹೆ ಬೆಂಗಳೂರಿನ ಅಡಿಷನಲ್ ರಿಜಿಸ್ಟ್ರಾರ್ ಡಾ. ರಾಘವೇಂದ್ರ ಪ್ರಭು ಅವರು, ಟೂರ್ನಿಯಲ್ಲಿ ಕಂಡುಬಂದ ಕ್ರೀಡಾ ಸ್ಫೂರ್ತಿ ಮತ್ತು ಕಾರ್ಪೊರೇಟ್ ಸಹಭಾಗಿತ್ವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮೊದಲ ಬಾರಿಗೆ ನಡೆದ ಈ ಕಾರ್ಪೋರೇಟ್‌ ಕ್ರಿಕೆಟ್‌ ಟೂರ್ನಿಯ ಯಶಸ್ಸಿನ ಬಗ್ಗೆ ಮಾತನಾಡಿದ ಮಾಹೆ ಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ.) ಎಂ.ಡಿ. ವೆಂಕಟೇಶ್, ‘ಪ್ರತಿ ವರ್ಷವೂ ಮಾಹೆ ಒಂದು ಧ್ಯೇಯವನ್ನು ಅಳವಡಿಸಿಕೊಳ್ಳುತ್ತದೆ. ಅದರಂತೆ 2025ರಲ್ಲಿ ‘ಶ್ರೇಷ್ಠತೆ ಹಾಗೂ ಉದ್ಯಮ-ಶೈಕ್ಷಣಿಕ ಸಹಯೋಗ’ ಎಂಬ ಧ್ಯೇಯವನ್ನು ನಾವು ಹೊಂದಿದ್ದೆವು. ಅದರ ಭಾಗವಾಗಿಯೇ ಈ ಕ್ರಿಕೆಟ್‌ ಪಂದ್ಯವಳಿ ನಡೆದಿದ್ದು, ಅಂದುಕೊಂಡಂತೆಯೇ ಇದು ಅತ್ಯಂತ ಯಶಸ್ವಿಯಾಗಿದೆ. ಇದು ಯಶಸ್ವಿಯಾಗಲು ಶ್ರಮಿಸಿದ ಆಯೋಜಕರಿಗೆ ಅಭಿನಂದನೆಗಳು. ಫೈನಲ್ ಪಂದ್ಯದಲ್ಲಿ ಸೆಣಸಾಡಿದ ಕೆಪಿಎಂಜಿ ಹಾಗೂ ಮಣಿಪಾಲ್ ಹಾಸ್ಪಿಟಲ್ಸ್ ತಂಡಗಳಿಗೆ ವಿಶೇಷ ಧನ್ಯವಾದಗಳು’ ಎಂದು ಹೇಳಿದರು.

ಅಂತಿಮ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಎರಡು ತಂಡಕ್ಕೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಮಾಹೆ ಬೆಂಗಳೂರು ಸಹ ಕುಲಪತಿ ಪ್ರೊ. ಮಧು ವೀರರಾಘವನ್ ಅವರು, ʼಕ್ರಿಕೆಟ್ ರಿಚಿ ಬೆನೋಡ್ ಅವರು ಮಾರ್ಕ್ ನಿಕೋಲಸ್ ಅವರಿಗೆ ಒಮ್ಮೆ ‘ಟೆಸ್ಟ್ ಹಾಗೂ ಟಿ-20 ಕ್ರಿಕೆಟ್‌ಗೆ ಏನು ವ್ಯತ್ಯಾಸ?’ ಎಂದು ಕೇಳಿದ್ದರು. ಅದಕ್ಕೆ ಉತ್ತರಿಸಿದ್ದ ರಿಚಿ ಬೆನೋಡ್, ‘ಟೆಸ್ಟ್ ಪಂದ್ಯ ನೋಡಲು ತಂದೆ ಮಗನನ್ನು ಕರೆದೊಯ್ದರೆ, ಟಿ-20 ಪಂದ್ಯಕ್ಕೆ ಮಗನೇ ತಂದೆಯನ್ನು ಕರೆದುಕೊಂಡು ಹೋಗುತ್ತಾನೆ’ ಎಂದು ಮಾರ್ಮಿಕವಾಗಿ ಹೇಳಿದ್ದರು. ಮುಂದಿನ ವರ್ಷಗಳಲ್ಲಿ ಇಲ್ಲಿಗೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಕುಟುಂಬಗಳು ಬಂದು ಪಂದ್ಯ ವೀಕ್ಷಿಸಲಿʼ ಎಂದು ಆಶಯ ವ್ಯಕ್ತಪಡಿಸಿದರು.

ಮಣಿಪಾಲ್ ಹಾಸ್ಪಿಟಲ್ಸ್ ತಂಡವು ಚಾಂಪಿಯನ್ ಟ್ರೋಫಿಯನ್ನು ಎತ್ತಿ ಹಿಡಿಯುವ ಮೂಲಕ ವಿಜಯೋತ್ಸಾಹ ಆಚರಿಸಿತು. ಇದರೊಂದಿಗೆ ಈ ರೋಚಕ ಟೂರ್ನಿಗೆ ವರ್ಣರಂಜಿತ ತೆರೆಬಿದಿತ್ತು. ಕಾರ್ಪೊರೇಟ್ ವಿಭಾಗದ ಮುಖ್ಯಸ್ಥ ಹರೀಶ್ ಕುಮಾರ್ ವಂದನಾರ್ಪಣೆ ಮಾಡಿದರು. 2025ರ ಈ ಟೂರ್ನಿಯಲ್ಲಿ ಭಾಗವಹಿಸಿದ್ದ ಡೆಲಾಯ್ಟ್, EY, HPE, J. P. ಮಾರ್ಗನ್, KPMG, ಮಣಿಪಾಲ್ ಆಸ್ಪತ್ರೆಗಳು, ಮೈಕ್ರೋಸಾಫ್ಟ್, ಮೈಕ್ರೋಲ್ಯಾಂಡ್, ನೊವೊ ನಾರ್ಡಿಸ್ಕ್, ಸೇಲ್ಸ್‌ಫೋರ್ಸ್, ಥಾಮ್ಸನ್ ರಾಯಿಟರ್ಸ್ ಮತ್ತು ಯೂನಿಸಿಸ್ ತಂಡಗಳಿಗೆ, ಆಯೋಜಕ ಸಮಿತಿ, ಪಂದ್ಯದ ಅಧಿಕಾರಿಗಳು ಹಾಗೂ ಮಾಹೆ ಆಡಳಿತ ಮಂಡಳಿಗೆ ಅವರು ಕೃತಜ್ಞತೆ ಸಲ್ಲಿಸಿದರು.

Previous Post

ಐಸಿಎಸಿಇಎಎ –2025 ಅಂತರರಾಷ್ಟ್ರೀಯ ಸಮ್ಮೇಳನಕ್ಕೆ ಬೆಂಗಳೂರಿನಲ್ಲಿ ಚಾಲನೆ..!!

Next Post

ಕೆಎಂಸಿ ಮಣಿಪಾಲದಲ್ಲಿ ಸ್ಪಾರ್ಕ್ ಸಿ ಎಂ ಇ , ಪ್ರಾಯೋಗಿಕ ಕಾರ್ಯಾಗಾರ ಮತ್ತು ಮೊನೊಗ್ರಾಫ್ ಬಿಡುಗಡೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕೆಎಂಸಿ ಮಣಿಪಾಲದಲ್ಲಿ ಸ್ಪಾರ್ಕ್ ಸಿ ಎಂ ಇ , ಪ್ರಾಯೋಗಿಕ ಕಾರ್ಯಾಗಾರ ಮತ್ತು ಮೊನೊಗ್ರಾಫ್ ಬಿಡುಗಡೆ..!!

ಕೆಎಂಸಿ ಮಣಿಪಾಲದಲ್ಲಿ ಸ್ಪಾರ್ಕ್ ಸಿ ಎಂ ಇ , ಪ್ರಾಯೋಗಿಕ ಕಾರ್ಯಾಗಾರ ಮತ್ತು ಮೊನೊಗ್ರಾಫ್ ಬಿಡುಗಡೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026