Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸಾಮಾಜಿಕ ಕಳಕಳಿಯೊಂದಿಗೆ ಯುವ ಪ್ರತಿಭೆಗಳು ಅನಾವರಣ ಗೊಳ್ಳಬೇಕು. ಉದ್ಯಮಿ: ಎಂ ದಿನೇಶ್ ಪೈ

Dhrishya News by Dhrishya News
22/12/2025
in ಸುದ್ದಿಗಳು
0
ಸಾಮಾಜಿಕ ಕಳಕಳಿಯೊಂದಿಗೆ ಯುವ ಪ್ರತಿಭೆಗಳು ಅನಾವರಣ ಗೊಳ್ಳಬೇಕು. ಉದ್ಯಮಿ: ಎಂ ದಿನೇಶ್ ಪೈ
0
SHARES
2
VIEWS
Share on FacebookShare on Twitter

 

ಕಾರ್ಕಳ:ಡಿಸೆಂಬರ್ 22:ಸಮಾಜ ಬೆಳೆಯಬೇಕಾದರೆ ಯುವ ಪ್ರತಿಭೆಗಳು ಮುಂದೆ ಬರಬೇಕು. ಅದರೊಂದಿಗೆ ಸಾಮಾಜಿಕ ಕಳಕಳಿಯೂ ಅವಿಭಾಜ್ಯವಾಗಿರಬೇಕು. ಗ್ರಾಮದ ಸಮಗ್ರ ಬೆಳವಣಿಗೆಯಲ್ಲಿ ಉದ್ಯಮಿಗಳು ಊರಿನ ಆಧಾರ ಸ್ತಂಭಗಳಾಗಿದ್ದಾರೆ ಎಂದು ಉದ್ಯಮಿ ಎಂ. ದಿನೇಶ್ ಪೈ ಹೇಳಿದರು.

ಅವರು ಕಾರ್ಕಳ ತಾಲೂಕಿನ ಅಜೆಕಾರು ಕೆಮ್ಮಂಜ ಮಲ್ಟಿ ಪರ್ಪಸ್ ಹಾಲ್‌ನಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ.) ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಧೀನದ ಕಾರ್ಕಳ ವಲಯದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

 

ಛಾಯಾಗ್ರಾಹಕರ ಕಲೆ ಅವರ ಕೈಯಲ್ಲೇ ಅಡಗಿದ್ದು, ನಿರಂತರವಾಗಿ ಮುಂದುವರಿಯುತ್ತಿರುವ ತಂತ್ರಜ್ಞಾನಕ್ಕೆ ತಕ್ಕಂತೆ ಛಾಯಾಗ್ರಾಹಕರು ಹೆಜ್ಜೆ ಹಾಕಬೇಕು ಎಂದು ಕಿವಿಮಾತು ಹೇಳಿದರು.ಆಧುನಿಕ ಸವಾಲುಗಳೊಂದಿಗೆ ಬದುಕುವುದನ್ನು ಕಲಿಯುವುದು ಛಾಯಾಗ್ರಾಹಕರಿಗೆ ಅನಿವಾರ್ಯವಾಗಿದೆ. ಛಾಯಾಗ್ರಾಹಕರು ಸಮಾಜದ ಕಣ್ಣಿನಂತೆ ಕಾರ್ಯನಿರ್ವಹಿಸಿ, ಸುತ್ತಮುತ್ತಲಿನ ಎಲ್ಲವನ್ನೂ ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದು ಮಾಹಿತಿಯನ್ನು ಜನರಿಗೆ ತಲುಪಿಸುವ ಮಹತ್ವದ ಹೊಣೆಗಾರಿಕೆ ಹೊಂದಿದ್ದಾರೆ. ಅವರಲ್ಲಿ ಸಾಮಾಜಿಕ ಬದ್ಧತೆಯನ್ನು ತೋರಿಸುವ ಮನೋಭಾವ ಸ್ಪಷ್ಟವಾಗಿ ಕಾಣುತ್ತದೆ ಎಂದರು.

ಪದಗ್ರಹಣ ಸ್ವೀಕರಿಸಿದ ಕಾರ್ಕಳದ ಎಸ್‌ಕೆಪಿಎ ಅಧ್ಯಕ್ಷ ಪ್ರಮೋದಚಂದ್ರ ಪೈ ಮಾತನಾಡಿ, 3,500ಕ್ಕೂ ಹೆಚ್ಚು ಸದಸ್ಯರನ್ನು ಒಳಗೊಂಡಿರುವ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ಎಸ್‌ಕೆಪಿಎ) ಒಂದು ಬೃಹತ್ ಸಂಸ್ಥೆಯಾಗಿದ್ದು, ಇದುವರೆಗೆ 19 ಅಧ್ಯಕ್ಷರನ್ನು ಒಳಗೊಂಡ ಪರಂಪರೆಯನ್ನು ಹೊಂದಿದೆ ಎಂದರು.

 

ಸಂಸ್ಥೆಯ ಮೂಲಕ ಆರೋಗ್ಯ ಶಿಬಿರಗಳು, ಕ್ಯಾಮರಾ ಕಾರ್ಯಾಗಾರಗಳು, ಸದಸ್ಯರಿಗಾಗಿ ಆರೋಗ್ಯ ಜಾಗೃತಿ ಹಾಗೂ ಕಲ್ಯಾಣ ಕಾರ್ಯಕ್ರಮಗಳು ಸೇರಿದಂತೆ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಸ್‌ಕೆಪಿಎ ಸಂಘಕ್ಕೆ ಸ್ವಂತ ಕಟ್ಟಡವನ್ನು ಹೊಂದುವ ಸಂಕಲ್ಪವಿದ್ದು, ರಾಜ್ಯಮಟ್ಟದಲ್ಲಿ ಮಾದರಿ ಸಂಘವನ್ನಾಗಿ ರೂಪಿಸುವ ಗುರಿಯೊಂದಿಗೆ ಕಾರ್ಯನಿರ್ವಹಿಸಲಾಗುತ್ತದೆ ಎಂದು ಹೇಳಿದರು.

 

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕ ಹರೀಶ್ ಶೆಟ್ಟಿ, ಪಡುಪರ್ಕಳ ಮಾತನಾಡಿ, ಸಹಕಾರದ ಮನೋಭಾವವನ್ನು ರೂಪಿಸುವ ಎಸ್‌ಕೆಪಿಎ ಸದಸ್ಯರ ಕಾರ್ಯ ಶ್ಲಾಘನೀಯವಾಗಿದೆ. ಸಮಾಜದಲ್ಲಿ ಮಾನವೀಯತೆ ಹಾಗೂ ಸಹೃದಯತೆಯನ್ನು ಬೆಳೆಸಿಕೊಳ್ಳುವಂತೆ ಅವರು ಕರೆ ನೀಡಿದರು

 

 

ಎಸ್‌.ಕೆ.ಪಿ.ಎ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಅಧ್ಯಕ್ಷ ನವೀನ್ ರೈ ಪಂಜಳ ಅಧ್ಯಕ್ಷತೆ ವಹಿಸಿ ಮಾತನಾಡಿದರು

 

 ಎಸ್‌.ಕೆ.ಪಿ.ಎ. ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಇದರ ಅಧ್ಯಕ್ಷ ವಾಸುದೇವ ರಾವ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉದ್ಯಮಿ ಶ್ರೀ ಸುಜಯ್ ಶೆಟ್ಟಿ, ಉದ್ಯಮಿ ಶಂಕರ ಶೆಟ್ಟಿ, ಹಿರಿಯರಾದ ಶ್ರಿಧರ ಪೈ, ಉದ್ಯಮಿ ಶಶಿಕಾಂತ ನಾಯಕ್, ಎಸ್‌.ಕೆ.ಪಿ.ಎ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಯ್ ಕುಮಾರ್, ಕಾರ್ಕಳದ ಎಸ್‌.ಕೆ.ಪಿ.ಎ. ಗೌರವಾಧ್ಯಕ್ಷ ಟಿ.ವಿ. ಸುಶೀಲ್ ಕುಮಾರ್ ಮಾತನಾಡಿದರು.ಜಿಲ್ಲಾ ಉಪಾಧ್ಯಕ್ಷ ದತ್ತಾತ್ರೇಯ, ಹಿರಿಯರಾದ ಗೋಪಾಲ್ ಸುಳ್ಯ ಸೆರಿದಂತೆ ಎಲದಲಾ ವಲಯಗಳ ಅಧ್ಯಕ್ಷರು ಗಳು ಉಪಸ್ಥಿತರಿದ್ದರು.

ನೂತನ ಪದಾಧಿಕಾರಿಗಳಾಗಿ ಕೋಶಾಧಿಕಾರಿ ವಿ.ಆರ್. ಸತೀಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿಯಾಗಿ ಶೇಖರ್ ಕುಕ್ಕುಜೆ, ಉಪಾಧ್ಯಕ್ಷರಾಗಿ ಪ್ರಕಾಶ್ ಪ್ರಭು ಸೇರಿದಂತೆ ಇತರರು ಅಧಿಕಾರ ಸ್ವೀಕರಿಸಿದರು. 

ಇದೇ ಸಂದರ್ಭದಲ್ಲಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್ ಸೇರಿದಂತೆ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಪ್ರಶಾಂತ್ ಕೆರುವಾಶೆ ಸ್ವಾಗತಿಸಿದರು. ಪ್ರಸಾದ್ ಐಸಿರ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಇಂಡಿಯನ್ ಬುಕ್ಸ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದಿರುವ ಮುನಿಯಾಲಿನ ಕು. ಅಪ್ತಿ ಎಸ್. ಆಚಾರ್ಯ ಅವರಿಂದ ಜಿಮ್ನಾಸ್ಟಿಕ್ ಮಾದರಿಯ ನೃತ್ಯ ಪ್ರದರ್ಶನ ನಡೆಯಿತು.

Previous Post

ಮಣಿಪಾಲ್ ಮ್ಯಾರಥಾನ್ 2026: ಹಸಿರುಭರಿತ, ಸುಸ್ಥಿರ ನಾಳಿನ ಭವಿಷ್ಯಕ್ಕಾಗಿ ಓಟ..!!

Next Post

ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ 2025-26..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ 2025-26..!!

ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ 2025-26..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved