Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ವಿಜ್ಞಾನ ಮತ್ತು ತಂತ್ರಜ್ಞಾನ

ಹೈದರಾಬಾದ್‌ನ ಎನ್ಎಸ್ಐಸಿಯಲ್ಲಿ ಎಐ ಮತ್ತು ಕೋಡಿಂಗ್ ತರಬೇತಿ ಪೂರ್ಣಗೊಳಿಸಿದ 450 ಮಂದಿಗೆ ಪ್ರಮಾಣಪತ್ರ ವಿತರಿಸಿದ ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್..!!

ಭವಿಷ್ಯ ತಂತ್ರಜ್ಞಾನದಲ್ಲಿ ಪರಿಣತಿ ಹೊಂದಿರುವ ಪ್ರತಿಭೆಗಳನ್ನು ರೂಪಿಸುವ ಮೂಲಕ ಭಾರತದ ಡಿಜಿಟಲ್ ಕೌಶಲ್ಯಾಭಿವೃದ್ಧಿ ಅಭಿಯಾನಕ್ಕೆ ಸ್ಯಾಮ್‌ಸಂಗ್ ನಿಂದ ಬೆಂಬಲ

Dhrishya News by Dhrishya News
07/01/2026
in ವಿಜ್ಞಾನ ಮತ್ತು ತಂತ್ರಜ್ಞಾನ
0
ಹೈದರಾಬಾದ್‌ನ ಎನ್ಎಸ್ಐಸಿಯಲ್ಲಿ ಎಐ ಮತ್ತು ಕೋಡಿಂಗ್ ತರಬೇತಿ ಪೂರ್ಣಗೊಳಿಸಿದ 450 ಮಂದಿಗೆ ಪ್ರಮಾಣಪತ್ರ ವಿತರಿಸಿದ ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್..!!
0
SHARES
10
VIEWS
Share on FacebookShare on Twitter

ಬೆಂಗಳೂರು, 7 ಜನವರಿ 2026: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರಾಂಡ್ ಆಗಿರುವ ಸ್ಯಾಮ್‌ಸಂಗ್, ಹೈದರಾಬಾದ್‌ನ ಎನ್ಎಸ್ಐಸಿ ತಾಂತ್ರಿಕ ಸೇವಾ ಕೇಂದ್ರದಲ್ಲಿ ತನ್ನ ‘ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್’ (ಎಸ್ಐಸಿ) ಯೋಜನೆಯಡಿ ಕೃತಕ ಬುದ್ಧಿಮತ್ತೆ (ಎಐ) ಮತ್ತು ಕೋಡಿಂಗ್ ಹಾಗೂ ಪ್ರೋಗ್ರಾಮಿಂಗ್‌ನಲ್ಲಿ ತರಬೇತಿ ಪೂರ್ಣಗೊಳಿಸಿದ 450 ಮಂದಿಗೆ ಪ್ರಮಾಣಪತ್ರಗಳನ್ನು ವಿತರಿಸಿದೆ. ಈ ಮೂಲಕ ಸ್ಯಾಮ್‌ಸಂಗ್ ಭಾರತದಲ್ಲಿ ಭವಿಷ್ಯ ಸಿದ್ಧ ಮತ್ತು ಡಿಜಿಟಲ್ ಸಿದ್ಧ ಕಾರ್ಯಪಡೆಯನ್ನು ನಿರ್ಮಿಸುವ ತನ್ನ ಬದ್ಧತೆಯನ್ನು ಸಾರಿದೆ.

 

ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್ ಎಂಬುದು ಯುವಜನತೆಗೆ ಸುಧಾರಿತ ಮತ್ತು ಉದ್ಯಮಕ್ಕೆ ಅಗತ್ಯವಾದ ತಂತ್ರಜ್ಞಾನ ಕೌಶಲಗಳನ್ನು ಕಲಿಸುವ ಜಾಗತಿಕ ಯೋಜನೆಯಾಗಿದ್ದು, ಇದು ವ್ಯವಸ್ಥಿತ ತರಬೇತಿ ಮತ್ತು ಪ್ರಾಯೋಗಿಕ ಕಲಿಕೆಯ ಮೂಲಕ ಯುವಜನತೆಯ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಗುರಿ ಹೊಂದಿದೆ.

 

*ಭವಿಷ್ಯದ ತಂತ್ರಜ್ಞಾನ ಕೌಶಲಗಳ ಕೇಂದ್ರವಾಗಿ ಹೊರಹೊಮ್ಮಿದ ಹೈದರಾಬಾದ್*

ಪ್ರಮಾಣಪತ್ರ ವಿತರಣಾ ಸಮಾರಂಭದಲ್ಲಿ ಹೈದರಾಬಾದ್ ಎನ್ಎಸ್ಐಸಿ ಕೇಂದ್ರದ ಮುಖ್ಯಸ್ಥರಾದ ಶ್ರೀ ರಾಜೀವ್‌ನಾಥ್ ಅವರು ಪಾಲ್ಗೊಂಡು ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಭಾರತದ ಡಿಜಿಟಲ್ ರೂಪಾಂತರಕ್ಕೆ ಯುವಕರ ಕೌಶಲ ಅಭಿವೃದ್ಧಿಗೆ ಹೂಡಿಕೆ ಮಾಡುವುದು ಎಷ್ಟು ಮುಖ್ಯ ಎಂಬುದನ್ನು ಅವರು ಒತ್ತಿಹೇಳಿದರು.

 

ಈ ವರ್ಷ ಹೈದರಾಬಾದ್‌ನಲ್ಲಿ ತರಬೇತಿ ಪಡೆದ 450 ವಿದ್ಯಾರ್ಥಿಗಳಲ್ಲಿ, 100 ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆ (ಎಐ) ವಿಷಯದಲ್ಲಿ ಸುಧಾರಿತ ತರಬೇತಿ ಪಡೆದರೆ, 350 ವಿದ್ಯಾರ್ಥಿಗಳು ಉದ್ಯಮಕ್ಕೆ ಪೂರಕವಾದ ಕೋಡಿಂಗ್ ಮತ್ತು ಪ್ರೋಗ್ರಾಮಿಂಗ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

 

*ಭಾರತದ ಭವಿಷ್ಯದ ಕಾರ್ಯಪಡೆಗೆ ಬಲ*

ಹೈದರಾಬಾದ್‌ನ ಈ ಯೋಜನೆಯು 2025ರ ವೇಳೆಗೆ ಭಾರತದಾದ್ಯಂತ 20,000 ಯುವಕರಿಗೆ ಕೌಶಲ ಒದಗಿಸುವ ಸ್ಯಾಮ್‌ಸಂಗ್‌ನ ಬೃಹತ್ ಯೋಜನೆಯ ಭಾಗವಾಗಿದ್ದು, ಭಾರತ ಸರ್ಕಾರದ ‘ಸ್ಕಿಲ್ ಇಂಡಿಯಾ’ ಮತ್ತು ‘ಡಿಜಿಟಲ್ ಇಂಡಿಯಾ’ ಅಭಿಯಾನಗಳಿಗೆ ಪೂರಕವಾಗಿದೆ. ಈ ಎಸ್ಐಸಿ ಯೋಜನೆಯು ದೇಶದಲ್ಲಿ ತಂತ್ರಜ್ಞಾನ ಆಧಾರಿತ ಆವಿಷ್ಕಾರ ವ್ಯವಸ್ಥೆಯನ್ನು ರೂಪಿಸುವ ಗುರಿ ಹೊಂದಿದೆ.

 

ಈ ಕಾರ್ಯಕ್ರಮವು ಎಲ್ಲರ ಒಳಗೊಳ್ಳುವಿಕೆಗೆ ಹೆಚ್ಚಿನ ಒತ್ತು ನೀಡುತ್ತದೆ. ರಾಷ್ಟ್ರಮಟ್ಟದಲ್ಲಿ ಇದರಲ್ಲಿ ಶೇ. 42 ರಷ್ಟು ಮಹಿಳೆಯರು ಭಾಗವಹಿಸಿದ್ದಾರೆ. ಅಲ್ಲದೆ, 2ನೇ ಮತ್ತು 3ನೇ ಹಂತದ ನಗರಗಳು ಹಾಗೂ ಸಣ್ಣ ನಗರ ಪ್ರದೇಶಗಳಿಗೂ ಈ ಉನ್ನತ ಗುಣಮಟ್ಟದ ತಂತ್ರಜ್ಞಾನ ಶಿಕ್ಷಣ ತಲುಪುವಂತೆ ನೋಡಿಕೊಳ್ಳಲಾಗಿದೆ.

 

ಬೇಡಿಕೆಯಲ್ಲಿರುವ ಡಿಜಿಟಲ್ ಕೌಶಲಗಳನ್ನು ಕಲಿಸುವ ಮೂಲಕ, ಉದ್ಯೋಗ ಸಿದ್ಧ ಪ್ರತಿಭೆಗಳನ್ನು ರೂಪಿಸುವ ಮೂಲಕ ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್ ಭವಿಷ್ಯ ಸಿದ್ಧ ಪ್ರತಿಭಾ ವಲಯವನ್ನು ರೂಪಿಸುವಲ್ಲಿ ಮತ್ತು ಭಾರತವನ್ನು ಡಿಜಿಟಲ್ ಸಬಲ ಆರ್ಥಿಕತೆಯನ್ನಾಗಿ ಮಾಡುವ ಪ್ರಯಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ.

 

 

Previous Post

ಉಡುಪಿ ಪರ್ಯಾಯ: 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಗಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಡಿಯೋ ಸಂವಾದ ..!!

Next Post

ಉಡುಪಿ : ಕಲ್ಲು,ಖನಿಜ ಹೊಯ್ಗೆ ಸಾಗಾಟ ಮಾಡುವಂತಹ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯಗೊಳಿಸಿ ಆದೇಶ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ : ಕಲ್ಲು,ಖನಿಜ ಹೊಯ್ಗೆ ಸಾಗಾಟ ಮಾಡುವಂತಹ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯಗೊಳಿಸಿ ಆದೇಶ..!

ಉಡುಪಿ : ಕಲ್ಲು,ಖನಿಜ ಹೊಯ್ಗೆ ಸಾಗಾಟ ಮಾಡುವಂತಹ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯಗೊಳಿಸಿ ಆದೇಶ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026