Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶಿರೂರು ಪರ್ಯಾಯ 2026: ನಾಳೆ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪುರಪ್ರವೇಶ ಮತ್ತು ಪೌರ ಸಮ್ಮಾನ

Dhrishya News by Dhrishya News
08/01/2026
in ಸುದ್ದಿಗಳು
0
ಶಿರೂರು ಪರ್ಯಾಯ 2026: ನಾಳೆ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪುರಪ್ರವೇಶ ಮತ್ತು ಪೌರ ಸಮ್ಮಾನ
0
SHARES
50
VIEWS
Share on FacebookShare on Twitter

ಉಡುಪಿ:ಜನವರಿ 08: ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ತಮ್ಮ ಪ್ರಥಮ ಪರ್ಯಾಯೋತ್ಸವಕ್ಕೆ ಪೂರ್ವಭಾವಿಯಾಗಿ ಪುಣ್ಯ ಕ್ಷೇತ್ರಗಳ ಸಂದರ್ಶನ ನಡೆಸುತ್ತಿದ್ದು, ಜ. 9 ರಂದು ನಾಳೆ ಉಡುಪಿಗೆ ಹಿಂತಿರುಗಲಿದ್ದು, ಅವರನ್ನು ಅದ್ಧೂರಿಯ ಮೆರವಣಿಗೆಯಲ್ಲಿ ಬರ ಮಾಡಿಕೊಳ್ಳಲಾಗುವುದು 

 ಶ್ರೀಗಳು ಶಿರೂರು ಗ್ರಾಮದಲ್ಲಿರುವ ಮೂಲಮಠಕ್ಕೆ ಆಗಮಿಸುತ್ತಾರೆ, ಅಲ್ಲಿ ಮುಖ್ಯಪ್ರಾಣ ದೇವರಿಗೆ ಪೂಜೆ ಸಲ್ಲಿಸಿ, ಮಧ್ಯಾಹ್ನ 3 ಗಂಟೆಗೆ ಉಡುಪಿ ನಗರದ ಕಡಿಯಾಳಿಗೆ ಆಗಮಿಸಿ ಅಲ್ಲಿ ಮಹಿಷಮರ್ಧಿನಿ ದೇವಾಲಯದಲ್ಲಿ ದೇವಿ ದರ್ಶನ ಪಡೆಯುತ್ತಾರೆ. ನಂತರ 3.30ರ ಮುಹೂರ್ತದಲ್ಲಿ ಶ್ರೀ ಮಠದ ಶ್ರೀ ವಿಠ್ಠಲ ದೇವರಿಗೆ ಪೂಜೆ ಸಲ್ಲಿಸಿ ಪುರಪ್ರವೇಶ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ 

 ಶ್ರೀಗಳನ್ನು ಸಾಂಪ್ರದಾಯಿಕ, ವೈಭವದ ಶೋಭಾಯಾತ್ರೆಯಲ್ಲಿ ತೆರೆದ ವಾಹನದಲ್ಲಿ ಉಡುಪಿ ನಗರಕ್ಕೆ ಕರೆ ತರಲಾಗುತ್ತದೆ. ಈ ಮೆರ‍ವಣಿಗೆಯಲ್ಲಿ ಶ್ರೀಮಠದ ಸಾಂಪ್ರಾದಾಯಿಕ ಬಿರುದಾ‍ವಳಿಗಳು, ಮಂಗಳ ವಾದ್ಯ ಘೋಷಗಳು, ವೈವಿಧ್ಯಮಯ ಸಾಂಸ್ಕೃತಿಕ ವೇಷಭೂಷಣಗಳು, ನೃತ್ಯ ತಂಡಗಳು, ಸಾವಿರಕ್ಕೂ ಹೆಚ್ಚು ಮಂದಿ ಭಜನೆಕಾರರು, ಸಾಮಾಜಿಕ, ಧಾರ್ಮಿಕ, ರಾಜಕೀಯ ಗಣ್ಯರು ಭಾಗವಹಿಸಲಿದ್ದಾರೆ

ಪುರಪ್ರವೇಶ ಮೆರವಣಿಗೆಯು ಕಡಿಯಾಳಿಯಿಂದ ಕಲ್ಸಂಕ, ಸಿಟಿ ಬಸ್ ನಿಲ್ದಾಣ, ಸರ್ವೀಸ್ ಬಸ್ ನಿಲ್ದಾಣ, ತ್ರಿವೇಣಿ ವೃತ್ತಗಳ ಮೂಲಕ ಕನಕದಾಸ ರಸ್ತೆಯಾಗಿ ರಥಬೀದಿ ಪ್ರವೇಶಿಸಲಿದೆ.

ಅಲ್ಲಿ ಶ್ರೀಗಳು ಕನಕನ ಕಿಂಡಿಯಿಂದ ಕೃಷ್ಣನ ದರ್ಶನ, ಮುಖ್ಯಪ್ರಾಣ ದೇವರ ದರ್ಶನ ಪಡೆದು, ಚಂದ್ರಮೌಳೀಶ್ವರ, ಅನಂತೇಶ್ವರ ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಬಳಿಕ ಶ್ರೀಗಳಿಗೆ ಉಡುಪಿ ನಗರಸಭೆ ವತಿಯಿಂದ ರಥಬೀದಿಯಲ್ಲಿ ಪೌರ ಸನ್ಮಾನ ನಡೆಯಲಿದೆ. ಈ ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಲಿದ್ದು, ನಗರಸಭಾ ಆಡಳಿತಾಧಿಕಾರಿಯಾಗಿರುವ ಡಿಸಿ ಸ್ವರೂಪ ಟಿ.ಕೆ., ಶಾಸಕ ಯಶ್‌ಪಾಲ್‌ ಸುವರ್ಣ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಶ್ರೀಗಳನ್ನು ಸನ್ಮಾನಿಸಲಿದ್ದಾರೆ.

ಬೆಂಗಳೂರು ಪೂರ್ಣಪ್ರಜ್ಞಾ ವಿದ್ಯಾಪೀಠದ ಪ್ರಾಂಶುಪಾಲ ಡಾ. ಸತ್ಯನಾರಾಯಣ ಆಚಾರ್ಯರು ಅಭಿನಂದನಾ ಭಾಷಣ ಮಾಡಲಿದ್ದಾರೆ 

Previous Post

ನೀಲಾವರದಲ್ಲಿ ಬಾರೀ ಅಗ್ನಿ ದುರಂತ : ನೂರಾರು ಮರಗಳು ಬೆಂಕಿಯ ಕೆನ್ನಾಲಿಗೆಗೆ ಆಹುತಿ :ಲಕ್ಷಾಂತರ ರೂಪಾಯಿ ನಷ್ಟ.!

Next Post

ಉಡುಪಿ : ಸುವರ್ಣ ಗೀತಾ ಸಮರ್ಪಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ : ಸುವರ್ಣ ಗೀತಾ ಸಮರ್ಪಣೆ..!!

ಉಡುಪಿ : ಸುವರ್ಣ ಗೀತಾ ಸಮರ್ಪಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026
imunify-bot-check