Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ:ಜ. 25 ರಿಂದ ಜ. 29 ರವರೆಗೆ ಅತ್ತೂರು ಸಂತ ಲೋರೆನ್ಸ್ ಬಸಲಿಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ..!

Dhrishya News by Dhrishya News
16/01/2026
in ಸುದ್ದಿಗಳು
0
ಕಾರ್ಕಳ:ಜ. 25 ರಿಂದ ಜ. 29 ರವರೆಗೆ ಅತ್ತೂರು ಸಂತ ಲೋರೆನ್ಸ್ ಬಸಲಿಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ..!
0
SHARES
2
VIEWS
Share on FacebookShare on Twitter

 ಕಾರ್ಕಳ : ಜನವರಿ 16:ಇತಿಹಾಸ ಪ್ರಸಿದ್ಧ ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ 2026ರ ಜಾತ್ರಾ ಮಹೋತ್ಸವವು ಜ. 25ರಿಂದ 29ರವರೆಗೆ ನಡೆಯಲಿದೆ ಎಂದು ಬಸಿಲಿಕಾದ ನಿರ್ದೇಶಕ ಧರ್ಮಗುರು ಅಲ್ಬನ್‌ ಡಿಸೋಜಾ ಹೇಳಿದರು.

 

ಅವರು ಕಾರ್ಕಳದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿಯಾಗಿ ಜ. 16ರಿಂದ 24ರವರೆಗೆ ನವದಿನಗಳ ಪ್ರಾರ್ಥನೆ ಆಯೋಜಿಸಲಾಗಿದೆ.

 

ಜ.24ರಂದು ಅಸ್ವಸ್ಥರಿಗಾಗಿ ವಿಶೇಷ ಬಲಿ ಪೂಜೆ ನೆರವೇರಲಿದೆ.ಈ ವರ್ಷದ ಮಹೋತ್ಸವದ ಧೈಯವಾಕ್ಯವಾಗಿ “ನಾನು ನಿನ್ನನ್ನು ಪ್ರೀತಿಸುತ್ತಿದ್ದೇನೆ” ಎಂಬ ಸಂದೇಶವನ್ನು ಆಯ್ಕೆ ಮಾಡಲಾಗಿದೆ. ಈ ಧೈಯವು ಮಾನವೀಯತೆ, ಪ್ರೀತಿ ಮತ್ತು ಸೇವಾಭಾವನೆಗೆ ಪ್ರೇರಣೆ ನೀಡುವ ಉದ್ದೇಶ ಹೊಂದಿದೆ ಎಂದರು.

 

ಮಹೋತ್ಸವದ ಪ್ರಮುಖ ದಿನಗಳಲ್ಲಿ ವಿವಿಧ ಧರ್ಮಾಧ್ಯಕ್ಷರು ಹಾಗೂ ಧರ್ಮಗುರುಗಳು ಭಾಗವಹಿಸಲಿದ್ದಾರೆ. ಜನವರಿ 25ರಂದು ಉಡುಪಿ ಧರ್ಮಪ್ರಾಂತ್ಯದ ಜೆರಾಲ್ಡ್ ಐಸಾಕ್ ಲೋಬೊ ಧರ್ಮಾಧ್ಯಕ್ಷರು ಹಾಗೂ ಮಂಗಳೂರು ನಿವೃತ್ತ ಧರ್ಮಾಧ್ಯಕ್ಷರಾದ ಪರಮಪೂಜ್ಯ ಲುವಿಸ್‌ ಪಾಮ್ಲ ಡಿ’ಸೋಜಾ ಅವರ ಉಪಸ್ಥಿತಿಯಲ್ಲಿ ಬಲಿಪೂಜೆ ನಡೆಯಲಿದೆ. ಜನವರಿ 26ರಂದು ಕಾರವಾರದ ಪರಮಪೂಜ್ಯ ದುಮಿಂಗ್ ಡಾಯಸ್‌ ಧರ್ಮಾಧ್ಯಕ್ಷರು, ಜನವರಿ 27ರಂದು ಅಲ್ಲಾಹಾಬಾದ್‌ನ ಪರಮಪೂಜ್ಯ ಲುವಿಸ್ ಮಸ್ಕರೇನಸ್ ಧರ್ಮಾಧ್ಯಕ್ಷರು, ಜನವರಿ 28ರಂದು ಉಡುಪಿ ಧರ್ಮಾಧ್ಯಕ್ಷರಾದ ಜೆರಾಲ್ಡ್ ಐಸಾಕ್ ಲೋಬೊ ಹಾಗೂ ಅಜೀರ್‌ನ ಜೋನ್ ಕರ್ವಾಲ್ಲೊ ಧರ್ಮಾಧ್ಯಕ್ಷರು, ಜನವರಿ 29ರಂದು ಮಂಗಳೂರು ಧರ್ಮಾಧ್ಯಕ್ಷರಾದ ಪೀಟ‌ರ್ ಪಾವ್ಕ್ ಸಲ್ದಾನ್ಹಾ ಅವರು ಬಲಿಪೂಜೆ ಕಾರ್ಯ ಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಜಾತ್ರಾ ಮಹೋತ್ಸವದ ಅಂಗವಾಗಿ ಜ. 29ರಂದು ಚರ್ಚ್ ಅವರಣದಲ್ಲಿ ಸತ್ಯದರ್ಶನ ಎಂಬ ಯಕ್ಷಗಾನ ಬಯಲಾಟವನ್ನು ಆಯೋಜಿಸಲಾಗಿದೆ. ಭಕ್ತರ ಸುರಕ್ಷತೆ ದೃಷ್ಟಿಯಿಂದ ಈ ಬಾರಿ ಚರ್ಚ್ ಆವರಣದಲ್ಲಿ ನಲವತ್ತಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

 

ಇದೇ ಸಂದರ್ಭದಲ್ಲಿ ಸಾಮಾಜಿಕ ಸೇವೆಯ ಭಾಗವಾಗಿ ಬಡವರಿಗಾಗಿ ಐದಕ್ಕಿಂತ ಹೆಚ್ಚು ಮನೆಗಳನ್ನು ನಿರ್ಮಿಸಿ ಕೊಡಲಾಗುತ್ತಿದೆ. ಪ್ರತಿಯೊಂದು ಮನೆಗೆ ಸುಮಾರು ಅಂದಾಜು 10 ಲಕ್ಷ ರೂ.ಗೂ ಹೆಚ್ಚು ಮಾಡಲಾಗುತ್ತಿದೆ ಎಂದರು.

 

ಸುದ್ದಿಗೋಷ್ಠಿಯಲ್ಲಿ ಸಹಾಯಕ ಧರ್ಮಗುರು ವಂದನೀಯ ರೊಬಿನ್ ಸಾಂತ್ ಮಾಯೆರ್, ಉಪಾಧ್ಯಕ್ಷ ಸಂತೋಷ್ ಡಿಸಿಲ್ವ, ಕಾರ್ಯದರ್ಶಿ ರೊನಾಲ್ಡ್‌ ನೊರೊನ್ಹಾ ಸದಸ್ಯರಾದ ವಂದೀಶ್ ಮತಾಯಸ್‌, ವಲೇರಿಯನ್ ಪ್ಯಾಸ್, ಮೆಲ್ವಿನ್ ಕ್ಯಾಸ್ತಲಿನೊ, ಜಾನ್ಸನ್ ಡಿಸಿಲ್ವಾ ಉಪಸ್ಥಿತರಿದ್ದರು.

Previous Post

ಉಡುಪಿ : ಪರ್ಯಾಯದ ಪ್ರಯುಕ್ತ ಮದ್ಯ ಮಾರಾಟ ನಿಷೇಧ..!!

Next Post

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಉಡುಪಿ ಪ್ರವಾಸ ರದ್ದು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಉಡುಪಿ ಪ್ರವಾಸ ರದ್ದು..!!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಉಡುಪಿ ಪ್ರವಾಸ ರದ್ದು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೋಣಿ ದುರಂತದ ಬಳಿಕ ಎಚ್ಚರಿಕೆ: ಅಕ್ರಮ ಪ್ರವಾಸೋದ್ಯಮಕ್ಕೆ ಬ್ರೇಕ್‌, 45 ದಿನಗಳಲ್ಲಿ ನೋಂದಣಿ ಕಡ್ಡಾಯ…!!

ದೋಣಿ ದುರಂತದ ಬಳಿಕ ಎಚ್ಚರಿಕೆ: ಅಕ್ರಮ ಪ್ರವಾಸೋದ್ಯಮಕ್ಕೆ ಬ್ರೇಕ್‌, 45 ದಿನಗಳಲ್ಲಿ ನೋಂದಣಿ ಕಡ್ಡಾಯ…!!

29/01/2026
ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿದ ನಟ ಮಯೂರ್ ಪಟೇಲ್ – ನಾಲ್ಕು ವಾಹನಗಳಿಗೆ ಹಾನಿ..!!

ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿದ ನಟ ಮಯೂರ್ ಪಟೇಲ್ – ನಾಲ್ಕು ವಾಹನಗಳಿಗೆ ಹಾನಿ..!!

29/01/2026
ಆರು ವರ್ಷಗಳ ಹೋರಾಟಕ್ಕೆ ಸುವರ್ಣ ಫಲ: ಯುಪಿಎಸ್‌ಸಿಯಲ್ಲಿ 11ನೇ ರ‍್ಯಾಂಕ್ – ಐಎಎಸ್ ಆಗಿ ಮೆರೆದ ನೂಪುರ್ ಗೋಯೆಲ್..!!

ಆರು ವರ್ಷಗಳ ಹೋರಾಟಕ್ಕೆ ಸುವರ್ಣ ಫಲ: ಯುಪಿಎಸ್‌ಸಿಯಲ್ಲಿ 11ನೇ ರ‍್ಯಾಂಕ್ – ಐಎಎಸ್ ಆಗಿ ಮೆರೆದ ನೂಪುರ್ ಗೋಯೆಲ್..!!

29/01/2026
ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

28/01/2026

Recent News

ದೋಣಿ ದುರಂತದ ಬಳಿಕ ಎಚ್ಚರಿಕೆ: ಅಕ್ರಮ ಪ್ರವಾಸೋದ್ಯಮಕ್ಕೆ ಬ್ರೇಕ್‌, 45 ದಿನಗಳಲ್ಲಿ ನೋಂದಣಿ ಕಡ್ಡಾಯ…!!

ದೋಣಿ ದುರಂತದ ಬಳಿಕ ಎಚ್ಚರಿಕೆ: ಅಕ್ರಮ ಪ್ರವಾಸೋದ್ಯಮಕ್ಕೆ ಬ್ರೇಕ್‌, 45 ದಿನಗಳಲ್ಲಿ ನೋಂದಣಿ ಕಡ್ಡಾಯ…!!

29/01/2026
ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿದ ನಟ ಮಯೂರ್ ಪಟೇಲ್ – ನಾಲ್ಕು ವಾಹನಗಳಿಗೆ ಹಾನಿ..!!

ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿದ ನಟ ಮಯೂರ್ ಪಟೇಲ್ – ನಾಲ್ಕು ವಾಹನಗಳಿಗೆ ಹಾನಿ..!!

29/01/2026
ಆರು ವರ್ಷಗಳ ಹೋರಾಟಕ್ಕೆ ಸುವರ್ಣ ಫಲ: ಯುಪಿಎಸ್‌ಸಿಯಲ್ಲಿ 11ನೇ ರ‍್ಯಾಂಕ್ – ಐಎಎಸ್ ಆಗಿ ಮೆರೆದ ನೂಪುರ್ ಗೋಯೆಲ್..!!

ಆರು ವರ್ಷಗಳ ಹೋರಾಟಕ್ಕೆ ಸುವರ್ಣ ಫಲ: ಯುಪಿಎಸ್‌ಸಿಯಲ್ಲಿ 11ನೇ ರ‍್ಯಾಂಕ್ – ಐಎಎಸ್ ಆಗಿ ಮೆರೆದ ನೂಪುರ್ ಗೋಯೆಲ್..!!

29/01/2026
ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

28/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved