Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೆಂಗಳೂರಿನಲ್ಲಿ ಲಿವ್‌ಪ್ಯೂರ್‌ನ ನೂತನ ಎಕ್ಸ್‌ ಕ್ಲೂಸಿವ್ ಬ್ರ್ಯಾಂಡ್ ಔಟ್‌ ಲೆಟ್ ಉದ್ಘಾಟನೆ..!!

Dhrishya News by Dhrishya News
27/01/2026
in ಸುದ್ದಿಗಳು
0
ಬೆಂಗಳೂರಿನಲ್ಲಿ ಲಿವ್‌ಪ್ಯೂರ್‌ನ ನೂತನ ಎಕ್ಸ್‌ ಕ್ಲೂಸಿವ್ ಬ್ರ್ಯಾಂಡ್ ಔಟ್‌ ಲೆಟ್ ಉದ್ಘಾಟನೆ..!!

*Photo Caption - (From L to R):* Sachin Tandon, Chief Sales Officer, Livpure; Rakesh Kaul, MD & CEO, Livpure; Srinivas, Partner – SRM

0
SHARES
3
VIEWS
Share on FacebookShare on Twitter

*ಲಿವ್‌ಪ್ಯೂರ್‌ನ ಭೌತಿಕ ರೀಟೇಲ್ ಮಾರುಕಟ್ಟೆ ವಿಸ್ತರಣೆ; ಸ್ಮಾರ್ಟ್ ಹೋಮ್ ಉತ್ಪನ್ನಗಳ ಲಭ್ಯತೆ ಹೆಚ್ಚಳ* 

 

• ಈ ಹೊಸ ಮಳಿಗೆಯು ಗ್ರಾಹಕರಿಗೆ ಲಿವ್‌ಪ್ಯೂರ್‌ನ ನೀರು, ಗಾಳಿ ಮತ್ತು ಅಡುಗೆಮನೆ ವಿಭಾಗಗಳ ನವೀನ ಉತ್ಪನ್ನಗಳನ್ನು ನೇರವಾಗಿ ನೋಡಿ, ತಿಳಿದು ಖರೀದಿಸಲು ಅವಕಾಶ ನೀಡುತ್ತದೆ.

• ಈ ಹೊಸ ಮಳಿಗೆ ಉದ್ಘಾಟನೆ ಮೂಲಕ ಲಿವ್‌ಪ್ಯೂರ್ ಸಂಸ್ಥೆಯು ಗ್ರಾಹಕರ ನಂಬಿಕೆ ಗಳಿಕೆ ಮತ್ತು ನೇರ ಅನುಭವ ಆಧಾರಿತ ವ್ಯಾಪಾರವು ಪ್ರಮುಖ ಪಾತ್ರ ವಹಿಸುವ ಅಗಾಧ ಸಾಮರ್ಥ್ಯವಿರುವ ಮಾರುಕಟ್ಟೆಯಲ್ಲಿ ತನ್ನ ಅಸ್ತಿತ್ವವನ್ನು ಗಟ್ಟಿಗೊಳಿಸುತ್ತಿದೆ.

 

ಬೆಂಗಳೂರು, ಕರ್ನಾಟಕ, 27 ಜನವರಿ 2026: ಭಾರತದ ಪ್ರಮುಖ ಮತ್ತು ಅತ್ಯಂತ ವಿಶ್ವಾಸಾರ್ಹ ಬ್ರ್ಯಾಂಡ್‌ ಗಳಲ್ಲಿ ಒಂದಾದ ಲಿವ್‌ಪ್ಯೂರ್, ಇಂದು ಕರ್ನಾಟಕದ ಬೆಂಗಳೂರಿನಲ್ಲಿ ತನ್ನ ಹೊಸ ಎಕ್ಸ್‌ ಕ್ಲೂಸಿವ್ ಬ್ರ್ಯಾಂಡ್ ಔಟ್‌ಲೆಟ್ ಅನ್ನು ಉದ್ಘಾಟಿಸಿದೆ. ಈ ಹೊಸ ಮಳಿಗೆಯು ಲಿವ್‌ಪ್ಯೂರ್‌ನ ಸ್ಮಾರ್ಟ್, ಅನುಕೂಲಕರ ಮತ್ತು ಆರೋಗ್ಯ ಕೇಂದ್ರಿತ ಗೃಹೋತ್ಪನ್ನಗಳನ್ನು ಗ್ರಾಹಕರಿಗೆ ಇನ್ನಷ್ಟು ಸುಲಭವಾಗಿ ಲಭ್ಯವಾಗಿಸಲಿದೆ. ಅಲ್ಲದೆ, ಕುಟುಂಬಗಳು ಮಳಿಗೆಗೆ ಭೇಟಿ ನೀಡಿ ಉತ್ಪನ್ನಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು, ಆತ್ಮವಿಶ್ವಾಸದಿಂದ ಸೂಕ್ತ ಆಯ್ಕೆ ಮಾಡಲು ಇಲ್ಲಿ ಅವಕಾಶ ಕಲ್ಪಿಸಲಾಗಿದೆ.

 

ಬೆಂಗಳೂರು ನಗರವು ತಂತ್ರಜ್ಞಾನ ಆಧಾರಿತ ಜೀವನಶೈಲಿ ಮತ್ತು ಆರೋಗ್ಯ ಪ್ರಜ್ಞೆಯುಳ್ಳ ಗ್ರಾಹಕರ ಪ್ರಮುಖ ಕೇಂದ್ರವಾಗಿ ಹೊರಹೊಮ್ಮುತ್ತಿದ್ದು, ಈ ಹಿನ್ನೆಲೆಯಲ್ಲಿ, ಪ್ರಮುಖ ಮಹಾನಗರಗಳಲ್ಲಿ ತನ್ನ ಮಾರುಕಟ್ಟೆಯನ್ನು ಬಲಪಡಿಸುವ ಲಿವ್‌ಪ್ಯೂರ್‌ನ ಉದ್ದೇಶಕ್ಕೆ ಈ ಹೊಸ ಮಳಿಗೆ ಹೆಚ್ಚಿನ ಶಕ್ತಿ ನೀಡಿದೆ. ಈಗಾಗಲೇ 6 ಎಕ್ಸ್‌ ಕ್ಲೂಸಿವ್ ಬ್ರ್ಯಾಂಡ್ ಔಟ್‌ಲೆಟ್‌ ಗಳನ್ನು ಯಶಸ್ವಿಯಾಗಿ ಪ್ರಾರಂಭಿಸಿರುವ ಸಂಸ್ಥೆಯು, ಈ ಹೊಸ ಮಳಿಗೆಯ ಮೂಲಕ ತನ್ನ ರೀಟೇಲ್ ವಿಸ್ತರಣಾ ಕಾರ್ಯತಂತ್ರದಲ್ಲಿ ಮತ್ತೊಂದು ಮೈಲಿಗಲ್ಲನ್ನು ಸ್ಥಾಪಿಸಿದೆ. ಗ್ರಾಹಕರು ಉತ್ಪನ್ನಗಳನ್ನು ನೇರವಾಗಿ ನೋಡಿ ಮಾಹಿತಿ ಪಡೆಯುವುದು, ಪಾರದರ್ಶಕ ಸಂವಹನ ಮತ್ತು ಮೌಲ್ಯಯುತ ಖರೀದಿಗೆ ಈ ಮಳಿಗೆ ಸಹಕಾರಿಯಾಗಲಿದೆ.

 

*ಈ ಸಂದರ್ಭದಲ್ಲಿ ಮಾತನಾಡಿದ ಲಿವ್‌ಪ್ಯೂರ್‌ನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಕೇಶ್ ಕೌಲ್ ಅವರು* , “ಬೆಂಗಳೂರಿನಲ್ಲಿ ನಮ್ಮ ಎಕ್ಸ್‌ ಕ್ಲೂಸಿವ್ ಬ್ರ್ಯಾಂಡ್ ಔಟ್‌ಲೆಟ್ ಪ್ರಾರಂಭಿಸಿರುವುದು ಭಾರತದ ಅತ್ಯಂತ ಕ್ರಿಯಾಶೀಲ ಮತ್ತು ಆವಿಷ್ಕಾರದಲ್ಲಿ ಮುಂಚೂಣಿಯಲ್ಲಿರುವ ನಗರ ಮಾರುಕಟ್ಟೆಗಳಲ್ಲಿ ನಮ್ಮ ಅಸ್ತಿತ್ವವನ್ನು ಬಲಪಡಿಸುವ ಬದ್ಧತೆಯನ್ನು ತೋರಿಸುತ್ತದೆ. ಬೆಂಗಳೂರಿನ ಗ್ರಾಹಕರು ತಂತ್ರಜ್ಞಾನ, ಕ್ಷೇಮ ಮತ್ತು ವಿವೇಕಯುಕ್ತ ನಿರ್ಧಾರಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ನಮ್ಮ ಈ ಮಳಿಗೆಯು ಗ್ರಾಹಕರಿಗೆ ಒಂದು ವಿಶಿಷ್ಟ ಅನುಭವವನ್ನು ನೀಡುವಂತೆ ವಿನ್ಯಾಸಗೊಳಿಸಲಾಗಿದ್ದು, ಇಲ್ಲಿ ಅವರು ನಮ್ಮ ಸಂಪೂರ್ಣ ಉತ್ಪನ್ನ ಶ್ರೇಣಿಯನ್ನು ವೀಕ್ಷಿಸಬಹುದು, ಸ್ಮಾರ್ಟ್ ಉತ್ಪನ್ನಗಳ ಮೌಲ್ಯವನ್ನು ಅರ್ಥಮಾಡಿಕೊಳ್ಳಬಹುದು ಮತ್ತು ದೈನಂದಿನ ಜೀವನವನ್ನು ಉತ್ತಮಗೊಳಿಸುವ ಉತ್ತಮ ಆಯ್ಕೆಗಳನ್ನು ಮಾಡಬಹುದು” ಎಂದು ಹೇಳಿದರು.

 

‘ತಂತ್ರಜ್ಞಾನದ ಮೂಲಕ ಯೋಗಕ್ಷೇಮ’ ಎಂಬ ತನ್ನ ತತ್ವಕ್ಕೆ ಬದ್ಧವಾಗಿರುವ ಲಿವ್‌ಪ್ಯೂರ್, ಬೆಂಗಳೂರಿನ ಈ ಹೊಸ ಮಳಿಗೆಯಲ್ಲಿ ಎಐ ಮತ್ತು ಐಓಟಿ ತಂತ್ರಜ್ಞಾನ ಆಧಾರಿತ ಅತ್ಯುತ್ತಮ ಆವಿಷ್ಕಾರಗಳನ್ನು ಪ್ರದರ್ಶಿಸುತ್ತಿದೆ. ಇದರಲ್ಲಿ ಮುಖ್ಯವಾಗಿ ಬ್ರ್ಯಾಂಡ್‌ನ ‘ಮೇಂಟೆನೆನ್ಸ್ ಫ್ರೀ’ ವಾಟರ್ ಪ್ಯೂರಿಫೈಯರ್ ಶ್ರೇಣಿ, ಧ್ವನಿ ಆಧಾರಿತ ಚಿಮಣಿಗಳು ಮತ್ತು ಸುಸ್ಥಿರ ಜೀವನಶೈಲಿಗೆ ಪೂರಕವಾದ ಇಂಧನ ದಕ್ಷತೆಯ ಸ್ಮಾರ್ಟ್ ಉಪಕರಣಗಳು ಸೇರಿವೆ. ಭೇಟಿ ನೀಡುವ ಗ್ರಾಹಕರು ಉತ್ಪನ್ನಗಳ ನೇರ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಬಹುದು ಮತ್ತು ತರಬೇತಿ ಪಡೆದ ತಜ್ಞರಿಂದ ವೈಯಕ್ತಿಕ ಮಾರ್ಗದರ್ಶನವನ್ನು ಪಡೆಯಬಹುದು.

 

ಭಾರತೀಯ ಮಾರುಕಟ್ಟೆಯಲ್ಲಿ ನಂಬಿಕೆಯನ್ನು ಬೆಳೆಸುವಲ್ಲಿ ಭೌತಿಕ ರೀಟೇಲ್ ಮಳಿಗೆಗಳು ಇಂದಿಗೂ ಪ್ರಮುಖ ಪಾತ್ರ ವಹಿಸುತ್ತಿವೆ. ಈ ಹಿನ್ನೆಲೆಯಲ್ಲಿ, ಲಿವ್‌ಪ್ಯೂರ್ ತನ್ನ ಮಾರುಕಟ್ಟೆ ವಿಸ್ತರಣೆಯನ್ನು ಮತ್ತಷ್ಟು ವೇಗಗೊಳಿಸಲು ಯೋಜಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ ಪ್ರಮುಖ ನಗರಗಳಲ್ಲಿ 30 ಎಕ್ಸ್‌ ಕ್ಲೂಸಿವ್ ಬ್ರ್ಯಾಂಡ್ ಔಟ್‌ ಲೆಟ್‌ ಗಳನ್ನು ತೆರೆಯುವ ಗುರಿಯನ್ನು ಕಂಪನಿ ಹೊಂದಿದ್ದು, ಆ ಮೂಲಕ ತನ್ನ ಆರೋಗ್ಯ ಕೇಂದ್ರಿತ ಉತ್ಪನ್ನಗಳನ್ನು ಹೆಚ್ಚಿನ ಭಾರತೀಯ ಕುಟುಂಬಗಳಿಗೆ ತಲುಪಿಸಲು ನಿರ್ಧರಿಸಿದೆ.

*Photo Caption – (From L to R):* Sachin Tandon, Chief Sales Officer, Livpure; Rakesh Kaul, MD & CEO, Livpure; Srinivas, Partner – SRM
Previous Post

ಚಿನ್ನ ಖರೀದಿ ದುಬಾರಿ: ಬಂಗಾರದ ಬೆಲೆ 2 ಲಕ್ಷ ರೂ. ದಾಟುವ ಸೂಚನೆ…!!

Next Post

ನಿಯಂತ್ರಣ ತಪ್ಪಿದ ಕಾರು ; ಅಂಗಡಿಯಲ್ಲಿದ್ದ ವಸ್ತುಗಳಿಗೆ ಭಾರೀ ಹಾನಿ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಿಯಂತ್ರಣ ತಪ್ಪಿದ ಕಾರು ; ಅಂಗಡಿಯಲ್ಲಿದ್ದ ವಸ್ತುಗಳಿಗೆ ಭಾರೀ ಹಾನಿ…!!

ನಿಯಂತ್ರಣ ತಪ್ಪಿದ ಕಾರು ; ಅಂಗಡಿಯಲ್ಲಿದ್ದ ವಸ್ತುಗಳಿಗೆ ಭಾರೀ ಹಾನಿ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

28/01/2026
ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಮತಾ ಅಂಚನ್ ಆಯ್ಕೆ

ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಮತಾ ಅಂಚನ್ ಆಯ್ಕೆ

28/01/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

28/01/2026
ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ‌ ಸಾಧನೆ: ಸಂಜೀವ ಬಳ್ಕೂರ್ ಅವರಿಗೆ ಅಭಿನಂದನೆ…!

ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ‌ ಸಾಧನೆ: ಸಂಜೀವ ಬಳ್ಕೂರ್ ಅವರಿಗೆ ಅಭಿನಂದನೆ…!

28/01/2026

Recent News

ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

28/01/2026
ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಮತಾ ಅಂಚನ್ ಆಯ್ಕೆ

ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಮಮತಾ ಅಂಚನ್ ಆಯ್ಕೆ

28/01/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3, 2026 ರ ಮಂಗಳವಾರದಂದು ಮುಂದಿನ ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

28/01/2026
ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ‌ ಸಾಧನೆ: ಸಂಜೀವ ಬಳ್ಕೂರ್ ಅವರಿಗೆ ಅಭಿನಂದನೆ…!

ಮುಂಬೈ ಟಾಟಾ ಮ್ಯಾರಥಾನ್ ನಲ್ಲಿ‌ ಸಾಧನೆ: ಸಂಜೀವ ಬಳ್ಕೂರ್ ಅವರಿಗೆ ಅಭಿನಂದನೆ…!

28/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved