Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ

Dhrishya News by Dhrishya News
30/01/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ
0
SHARES
75
VIEWS
Share on FacebookShare on Twitter

ಬೆಂಗಳೂರು, ಜನವರಿ 30:ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಅವರು ಬೆಂಗಳೂರಿನ ಹೊಸೂರು ರಸ್ತೆಯ ಲ್ಯಾಂಗ್‌ಫೋರ್ಡ್ ಟೌನ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ.

ಘಟನಾ ಸ್ಥಳಕ್ಕೆ ಅಶೋಕನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಆನೇಕಲ್‌ನ ನಾರಾಯಣ ಆಸ್ಪತ್ರೆಗೆ ರವಾನಿಸಲಾಗಿದೆ. ಡಿಸಿಪಿ ಅಕ್ಷಯ್ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

ಪೊಲೀಸ್ ಮೂಲಗಳ ಪ್ರಕಾರ, ಇಂದು ಬೆಳಿಗ್ಗೆ ಕಾನ್ಫಿಡೆಂಟ್ ಗ್ರೂಪ್ ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಮಧ್ಯಾಹ್ನ ಕಚೇರಿಗೆ ಬಂದ ಸಿ.ಜೆ. ರಾಯ್ ಅವರು ಸುಮಾರು ಒಂದು ಗಂಟೆ ಕಾಲ ಐಟಿ ಅಧಿಕಾರಿಗಳ ವಿಚಾರಣೆಗೆ ಒಳಗಾಗಿದ್ದರು. ಕೆಲ ದಾಖಲೆಗಳನ್ನು ಅಧಿಕಾರಿಗಳಿಗೆ ಒಪ್ಪಿಸಿದ ಬಳಿಕ, ಮತ್ತಷ್ಟು ದಾಖಲೆ ತರಲು ಕೊಠಡಿಗೆ ತೆರಳಿದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಸಿ.ಜೆ. ರಾಯ್ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಸ್ಥಳದಿಂದ ಬಳಸಿದ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದ್ದು, ಕಚೇರಿಯ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಡೆತ್ ನೋಟ್, ಮೊಬೈಲ್ ಸಂದೇಶಗಳು ಅಥವಾ ಇತರ ಯಾವುದೇ ಸುಳಿವುಗಳಿರುವ ಕುರಿತು ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಕೇರಳ ಮೂಲದ ಸಿ.ಜೆ. ರಾಯ್ ಅವರು 1997ರಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗ ಆರಂಭಿಸಿ, ನಂತರ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಪ್ರವೇಶಿಸಿದ್ದರು. ಸಣ್ಣ ಮಟ್ಟದಲ್ಲಿ ಆರಂಭವಾದ ಅವರ ಉದ್ಯಮ, ಕಾಲಕ್ರಮೇಣ ಕಾನ್ಫಿಡೆಂಟ್ ಗ್ರೂಪ್ ಎಂಬ ದೊಡ್ಡ ಸಂಸ್ಥೆಯಾಗಿ ಬೆಳೆಯಿತು. ಸದ್ಯ ಕಂಪನಿಗೆ ಸುಮಾರು ಸಾವಿರ ಎಕರೆಗೂ ಅಧಿಕ ಭೂಸ್ವತ್ತು ಇದ್ದುದಾಗಿ ತಿಳಿದುಬಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ತನಿಖೆಯ ನಂತರ ತಿಳಿದುಬರಬೇಕಿದೆ.

Previous Post

ಅಗ್ನಿಪಥ್ ನೇಮಕಾತಿ ರ‍್ಯಾಲಿ: ಸ್ವರಾಜ್ಯ ಮೈದಾನದಲ್ಲಿ ಜ.30ರಿಂದ ಆರಂಭ, 15,000 ಅಭ್ಯರ್ಥಿಗಳು ಪಾಲು…!!

Next Post

ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ಶ್ರೀಕರ ಹಾಗೂ ಭೂತರಾಜರ ಪೂಜೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ಶ್ರೀಕರ ಹಾಗೂ ಭೂತರಾಜರ ಪೂಜೆ..!

ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ಶ್ರೀಕರ ಹಾಗೂ ಭೂತರಾಜರ ಪೂಜೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!

ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!

20/03/2026
ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

20/03/2026
ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

20/03/2026
ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

20/03/2026

Recent News

ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!

ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!

20/03/2026
ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

20/03/2026
ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

20/03/2026
ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved