Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಿಕಸಿತ ಭಾರತ 2047 ಕನಸಿಗೆ ದಿಕ್ಕು ತೋರಿದ ಕೇಂದ್ರ ಬಜೆಟ್: ಕ್ಯಾಪ್ಟನ್ ಗಣೇಶ್ ಕಾರ್ಣಿಕ್….!!

Dhrishya News by Dhrishya News
02/02/2026
in ಸುದ್ದಿಗಳು
0
ವಿಕಸಿತ ಭಾರತ 2047 ಕನಸಿಗೆ ದಿಕ್ಕು ತೋರಿದ ಕೇಂದ್ರ ಬಜೆಟ್: ಕ್ಯಾಪ್ಟನ್ ಗಣೇಶ್ ಕಾರ್ಣಿಕ್….!!
0
SHARES
0
VIEWS
Share on FacebookShare on Twitter

ಉಡುಪಿ ಫೆ. 02: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ರೂ.53.5 ಲಕ್ಷ ಕೋಟಿ ಮೊತ್ತದ ಒಂಬತ್ತನೇ ಕೇಂದ್ರ ಬಜೆಟ್, ಪ್ರಧಾನಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ ಕನಸನ್ನು ಸಾಕಾರಗೊಳಿಸುವ ದಿಕ್ಕಿನಲ್ಲಿ ಮತ್ತೊಂದು ಗಟ್ಟಿಯಾದ ಹೆಜ್ಜೆಯಾಗಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.

 

ಕೇಂದ್ರ ಬಜೆಟ್–2026 ಕುರಿತು ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.

 

ಜಗತ್ತು ಆರ್ಥಿಕ ಅನಿಶ್ಚಿತತೆಯ ತಲ್ಲಣಗಳಲ್ಲಿ ಮುಳುಗಿರುವ ಈ ಸಂದರ್ಭದಲ್ಲಿ ದೇಶದ ಜನತೆಯ ಮನಸ್ಸಿನಲ್ಲಿ ಆರ್ಥಿಕ ವಿಶ್ವಾಸ ತುಂಬಿರುವ ಸ್ವಾಗತಾರ್ಹ ಬಜೆಟ್ ಇದಾಗಿದೆ. ದೀರ್ಘ ಕಾಲೀನ ಆರ್ಥಿಕ ಗುರಿಯನ್ನು ಮುಟ್ಟಲು ಅಗತ್ಯವಿರುವ ಅಲ್ಪ ಕಾಲೀನ ಯೋಜನೆಗಳೊಂದಿಗೆ ಸಮದೃಷ್ಟಿಯ ಸಂತುಲಿತ ಬಜೆಟ್. 

 

ಯಾವುದೇ ಸಮುದಾಯವನ್ನಾಗಲಿ, ಸಾರ್ವಜನಿಕ ಸಂಸ್ಥೆಯನ್ನಾಗಲಿ, ಸಾಮಾಜಿಕ ವರ್ಗಗಳನ್ನಾಗಲಿ ತುಷ್ಟೀಕರಿಸುವ ಯೋಚನೆಗಳಿಗೆ ವಿರುದ್ಧವಾಗಿ, ಜಾಗತಿಕ ಆರ್ಥಿಕ ತಲ್ಲಣವನ್ನು ಗಮನದಲ್ಲಿರಿಸಿಕೊಂಡು ದೇಶದ ಜನತೆಯ ಭವಿಷ್ಯದ ಹಿತವನ್ನು ಕಾಪಾಡಲು ಅಗತ್ಯವಿರುವ ಯೋಚನೆ ಮತ್ತು ಯೋಜನೆಗಳನ್ನು ಹೊಂದಿರುವ ಬಜೆಟ್ ಇದಾಗಿದೆ. ಜನತೆಯ ಆಶೋತ್ತರಗಳನ್ನು ಸಾಧಿಸಬಲ್ಲ ಯೋಜನೆಗಳು ಮತ್ತು ತುಷ್ಟೀಕರಣದ ಮಾನಸಿಕತೆಯಿಂದ ಹೊರ ಬಂದು ಜನಸಾಮಾನ್ಯರನ್ನು ಕೇಂದ್ರವಾಗಿರಿಸಿರುವ ಜನಪರ ಬಜೆಟ್ ಅಭಿನಂದನೀಯ.

 

ಮೂಲಭೂತ ಸೌಕರ್ಯಗಳು, ಕೃಷಿ, ಉದ್ಯೋಗ, ಸೆಮಿ ಕಂಡಕ್ಟರ್, ಅಪರೂಪದ ಖನಿಜಗಳು, ಡೇಟಾ ಸೆಂಟರ್ ಮುಂತಾದ ಕ್ಷೇತ್ರಗಳಲ್ಲಿ ಸ್ವಾವಲಂಬನೆಯ ಯೋಜನೆಗಳ ಅಭಿವೃದ್ಧಿಗೆ ಪೂರಕವಾಗಿರುವ ಉತ್ತಮ ಬಜೆಟ್. ಉತ್ಪಾದನೆ, ಉದ್ಯೋಗ ಮತ್ತು ಸೇವಾ ಕ್ಷೇತ್ರಗಳಿಗೆ ಆದ್ಯತೆ ನೀಡಿದ ಬಜೆಟ್ ಇದಾಗಿದೆ.

ಬಜೆಟ್ ಮಂಡನೆ ಕೇವಲ ವಾರ್ಷಿಕ ಆಯ-ವ್ಯಯದ ಅಂಕೆ ಸಂಖ್ಯೆಗಳನ್ನು ಮೀರಿ ಒಂದು ಆದ್ಯ ಕರ್ತವ್ಯವನ್ನಾಗಿಸಿದ ಬಜೆಟ್. ಸುಸ್ಥಿರ ಆರ್ಥಿಕ ಪ್ರಗತಿಯೊಂದಿಗೆ ಉತ್ಪದನಾ ಸಾಮರ್ಥ್ಯ ಹೆಚ್ಚಿಸುವುದು, ಜನತೆಯ ಆಶೋತ್ತರಗಳ ಪೂರೈಕೆ ಹಾಗೂ ಅವರ ಸಾಮರ್ಥ್ಯದಲ್ಲಿ ಹೆಚ್ಚಳದೊಂದಿಗೆ ‘ಸಬ್ ಕಾ ಸಾತ್ ಸಬ್ ಕಾ ವಿಕಾಸ್’ ತತ್ವಕ್ಕೆ ಅಗತ್ಯವಿರುವ ಸಂಪನ್ಮೂಲ, ಸೌಲಭ್ಯ ಮತ್ತು ಅವಕಾಶಗಳನ್ನು ಒದಗಿಸಲು ಯೋಜಿಸಿರುವ ಬಜೆಟ್. ಅತೀ ವೇಗದ 7 ರೈಲ್ವೆ ಕಾರಿಡಾರ್ ಗಳ ಮೂಲಕ ವೇಗದ ಆರ್ಥಿಕ ಪ್ರಗತಿಯನ್ನು ಸಾಧಿಸುವ ಗುರಿ ಹೊಂದಿರುವ ಗತಿ ಶಕ್ತಿಯ ಬಜೆಟ್ ಇದಾಗಿದೆ.

ರಕ್ಷಣಾ ಕ್ಷೇತ್ರಕ್ಕೆ ಆದ್ಯತೆ ನೀಡಿ ದಾಖಲೆಯ ರೂ.7.84 ಲಕ್ಷ ಕೋಟಿ ಅನುದಾನದ ಮೂಲಕ ದೇಶದ ಭದ್ರತೆಯ ದೂರಾಲೋಚನೆಯ ದೂರದರ್ಶಿತ್ವದ ಬಜೆಟ್. ಪ್ರಾದೇಶಿಕ ಮೆಡಿಕಲ್ ಹಬ್ ಗಳ ಮೂಲಕ ಮೆಡಿಕಲ್, ಪ್ರವಾಸೋದ್ಯಮ, ನಿಮ್ಹಾನ್ಸ್ ಆಸ್ಪತ್ರೆಗಳು, ಮೈನಿಂಗ್ ಕಾರಿಡಾರ್, ಬಯೋ ಫಾರ್ಮ, ಎ.ಐ. ಮಿಶನ್ ಮೂಲಕ ಎ.ಐ. ತಂತ್ರಜ್ಞಾನ ಅಭಿವೃದ್ಧಿ ಹಾಗೂ ಇನ್ನಿತರ ಆಧುನಿಕ ತಂತ್ರಜ್ಞಾನಗಳ ಬೆಳವಣಿಗೆಗೆ ಆದ್ಯತೆ ನೀಡಿರುವ ಸ್ವಾಗತಾರ್ಹ ಬಜೆಟ್. 

ಪ್ರಧಾನ ಮಂತ್ರಿಗಳು ಹೇಳಿರುವಂತೆ ಈ ಬಜೆಟ್ ದೇಶದ 140+ ಕೋಟಿ ಭಾರತೀಯರ ಆಶೋತ್ತರಗಳನ್ನು ಪ್ರತಿಬಿಂಬಿಸುವ ಐತಿಹಾಸಿಕ ಬಜೆಟ್ ಆಗಿದೆ. ಸುಧಾರಣೆಯ ಪಯಣದ ದಿಕ್ಕು ಬದಲಿಸಿದ್ದು 2047ರ ಒಳಗೆ ‘ವಿಕಸಿತ ಭಾರತ’ದ ಕನಸು ಸಾಕಾರಗೊಳಿಸುವ ನೀಲಿ ನಕ್ಷೆಯ ಬಜೆಟ್ ಇದಾಗಿದೆ. ದೇಶಕ್ಕೆ ಹೊಸ ಶಕ್ತಿ ಮತ್ತು ವೇಗ ನೀಡುವ ಬಜೆಟ್ ಇದಾಗಿದೆ. ವಿಶ್ವ ಭೂಪಟದಲ್ಲಿ ಭಾರತದ ಜಾಗತಿಕ ಪಾತ್ರವನ್ನು ಇನ್ನಷ್ಟು ಸ್ಪಷ್ಟಗೊಳಿಸಿದ ಬಜೆಟ್ ಇದಾಗಿದೆ. ವಿಶ್ವದ 3ನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುವಲ್ಲಿ ಸ್ಪಷ್ಟ ಗುರಿ ಹೊಂದಿರುವ ಬಜೆಟ್ ಇದಾಗಿದೆ ಎಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ವಕ್ತಾರ ದಿವಾಕರ ಶೆಟ್ಟಿ ಕಾಪು, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಉಪಸ್ಥಿತರಿದ್ದರು.

Previous Post

ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿರುವ 20 ತಂಡಗಳು ಪ್ರಕಟ

Next Post

ಕಲ್ಸಂಕ ಸೇತುವೆ ಫ್ರೀ ಲೆಫ್ಟ್ ಅಗಲೀಕರಣ ಕಾಮಗಾರಿಗೆ ₹49 ಲಕ್ಷ ಅನುದಾನ – ಶಾಸಕ ಯಶ್ ಪಾಲ್ ಸುವರ್ಣ ಚಾಲನೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಲ್ಸಂಕ ಸೇತುವೆ ಫ್ರೀ ಲೆಫ್ಟ್ ಅಗಲೀಕರಣ ಕಾಮಗಾರಿಗೆ ₹49 ಲಕ್ಷ ಅನುದಾನ – ಶಾಸಕ ಯಶ್ ಪಾಲ್ ಸುವರ್ಣ ಚಾಲನೆ…!!

ಕಲ್ಸಂಕ ಸೇತುವೆ ಫ್ರೀ ಲೆಫ್ಟ್ ಅಗಲೀಕರಣ ಕಾಮಗಾರಿಗೆ ₹49 ಲಕ್ಷ ಅನುದಾನ – ಶಾಸಕ ಯಶ್ ಪಾಲ್ ಸುವರ್ಣ ಚಾಲನೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಲ್ಸಂಕ ಸೇತುವೆ ಫ್ರೀ ಲೆಫ್ಟ್ ಅಗಲೀಕರಣ ಕಾಮಗಾರಿಗೆ ₹49 ಲಕ್ಷ ಅನುದಾನ – ಶಾಸಕ ಯಶ್ ಪಾಲ್ ಸುವರ್ಣ ಚಾಲನೆ…!!

ಕಲ್ಸಂಕ ಸೇತುವೆ ಫ್ರೀ ಲೆಫ್ಟ್ ಅಗಲೀಕರಣ ಕಾಮಗಾರಿಗೆ ₹49 ಲಕ್ಷ ಅನುದಾನ – ಶಾಸಕ ಯಶ್ ಪಾಲ್ ಸುವರ್ಣ ಚಾಲನೆ…!!

02/02/2026
ವಿಕಸಿತ ಭಾರತ 2047 ಕನಸಿಗೆ ದಿಕ್ಕು ತೋರಿದ ಕೇಂದ್ರ ಬಜೆಟ್: ಕ್ಯಾಪ್ಟನ್ ಗಣೇಶ್ ಕಾರ್ಣಿಕ್….!!

ವಿಕಸಿತ ಭಾರತ 2047 ಕನಸಿಗೆ ದಿಕ್ಕು ತೋರಿದ ಕೇಂದ್ರ ಬಜೆಟ್: ಕ್ಯಾಪ್ಟನ್ ಗಣೇಶ್ ಕಾರ್ಣಿಕ್….!!

02/02/2026
ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿರುವ 20 ತಂಡಗಳು ಪ್ರಕಟ

ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿರುವ 20 ತಂಡಗಳು ಪ್ರಕಟ

02/02/2026
ರಾ.ಹೆ.66 ತೆಕ್ಕಟ್ಟೆ ಬಳಿ ಕಾರುಗಳ ನಡುವೆ ಅಪಘಾತ; ತಪ್ಪಿದ ಪ್ರಾಣಾಪಾಯ..!!

ರಾ.ಹೆ.66 ತೆಕ್ಕಟ್ಟೆ ಬಳಿ ಕಾರುಗಳ ನಡುವೆ ಅಪಘಾತ; ತಪ್ಪಿದ ಪ್ರಾಣಾಪಾಯ..!!

02/02/2026

Recent News

ಕಲ್ಸಂಕ ಸೇತುವೆ ಫ್ರೀ ಲೆಫ್ಟ್ ಅಗಲೀಕರಣ ಕಾಮಗಾರಿಗೆ ₹49 ಲಕ್ಷ ಅನುದಾನ – ಶಾಸಕ ಯಶ್ ಪಾಲ್ ಸುವರ್ಣ ಚಾಲನೆ…!!

ಕಲ್ಸಂಕ ಸೇತುವೆ ಫ್ರೀ ಲೆಫ್ಟ್ ಅಗಲೀಕರಣ ಕಾಮಗಾರಿಗೆ ₹49 ಲಕ್ಷ ಅನುದಾನ – ಶಾಸಕ ಯಶ್ ಪಾಲ್ ಸುವರ್ಣ ಚಾಲನೆ…!!

02/02/2026
ವಿಕಸಿತ ಭಾರತ 2047 ಕನಸಿಗೆ ದಿಕ್ಕು ತೋರಿದ ಕೇಂದ್ರ ಬಜೆಟ್: ಕ್ಯಾಪ್ಟನ್ ಗಣೇಶ್ ಕಾರ್ಣಿಕ್….!!

ವಿಕಸಿತ ಭಾರತ 2047 ಕನಸಿಗೆ ದಿಕ್ಕು ತೋರಿದ ಕೇಂದ್ರ ಬಜೆಟ್: ಕ್ಯಾಪ್ಟನ್ ಗಣೇಶ್ ಕಾರ್ಣಿಕ್….!!

02/02/2026
ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿರುವ 20 ತಂಡಗಳು ಪ್ರಕಟ

ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿರುವ 20 ತಂಡಗಳು ಪ್ರಕಟ

02/02/2026
ರಾ.ಹೆ.66 ತೆಕ್ಕಟ್ಟೆ ಬಳಿ ಕಾರುಗಳ ನಡುವೆ ಅಪಘಾತ; ತಪ್ಪಿದ ಪ್ರಾಣಾಪಾಯ..!!

ರಾ.ಹೆ.66 ತೆಕ್ಕಟ್ಟೆ ಬಳಿ ಕಾರುಗಳ ನಡುವೆ ಅಪಘಾತ; ತಪ್ಪಿದ ಪ್ರಾಣಾಪಾಯ..!!

02/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved