Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ವಿಧಾನಸಭಾ ಚುನಾವಣೆಗೂ ಮುನ್ನ ಉಸ್ತುವಾರಿ ಸ್ಥಾನ ತ್ಯಜಿಸಿದ ಅಣ್ಣಾಮಲೈ….!!

Dhrishya News by Dhrishya News
05/02/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ವಿಧಾನಸಭಾ ಚುನಾವಣೆಗೂ ಮುನ್ನ ಉಸ್ತುವಾರಿ ಸ್ಥಾನ ತ್ಯಜಿಸಿದ ಅಣ್ಣಾಮಲೈ….!!
0
SHARES
33
VIEWS
Share on FacebookShare on Twitter

ಕೊಯಮತ್ತೂರು ಫೆ. 05: ವಿಧಾನಸಭಾ ಚುನಾವಣೆ ಆರಂಭಕ್ಕೂ ಮುನ್ನ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಕೊಯಮತ್ತೂರಿನ ಸಿಂಗನಲ್ಲೂರು ಸೇರಿ ಆರು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಉಸ್ತುವಾರಿ ಜವಾಬ್ದಾರಿಯಿಂದ ಹೊರಬಂದಿದ್ದಾರೆ. ತಂದೆಯ ಆರೋಗ್ಯ ಸಮಸ್ಯೆಯಿಂದ ವ್ಯಾಪಕ ಪ್ರವಾಸ ಸಾಧ್ಯವಾಗದ ಕಾರಣ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ. ಸಿಂಗನಲ್ಲೂರಿನಿಂದಲೇ ಅವರು ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ವಿಧಾನ ಸಭಾ ಚುನಾವಣೆಯ ತಯಾರಿಯಲ್ಲಿರುವ ತಮಿಳುನಾಡಿನ ಕೊಯಮತ್ತೂರು, ಸಿಂಗನಲ್ಲೂರು ಸೇರಿದಂತೆ ಆರು ವಿಧಾನ ಸಭಾ ಕ್ಷೇತ್ರಗಳ ಚುನಾವಣಾ ಪ್ರವಾಸದ ಉಸ್ತುವಾರಿ ವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಅಲ್ಲಿನ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರೀಕ್ಷೆಯಿದ್ದು, ಉಸ್ತುವಾರಿ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿರುವುದಾಗಿ ಘೋಷಿಸಿದ್ದಾರೆ.

ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಬಂಗಾಳ; ತಾವೇ ವಾದ ಮಂಡಿಸಲಿರುವ ಮಮತಾ!

ತಮಿಳುನಾಡಿನಲ್ಲಿ ಎಐಎಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯು 41 ಕ್ಷೇತ್ರಗಳಲ್ಲಿ ಹಿರಿಯ ಬಿಜೆಪಿ ನಾಯಕರನ್ನು ಉಸ್ತುವಾರಿಗಳಾಗಿ ನೇಮಿಸಿದೆ. ಇವರಲ್ಲಿ ಅಣ್ಣಾಮಲೈ ಅವರನ್ನು ಸಿಂಗನಲ್ಲೂರು, ಮಧುರೈ ದಕ್ಷಿಣ, ವಿರುಗಂಪಕ್ಕಂ, ಕಾರೈಕುಡಿ, ಶ್ರೀವೈಕುಂಡಂ, ಪದ್ಮನಾಭಪುರಂಗಳಿಗೆ ಉಸ್ತುವಾರಿಯನ್ನಾಗಿ ಮಾಡಲಾಗಿದೆ.

ಈ ಕುರಿತು ಕೊಯಮತ್ತೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಂದೆಯ ಅನಾರೋಗ್ಯದ ಕಾರಣದಿಂದ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

ತಂದೆಯವರ ಆರೋಗ್ಯ ಸರಿಯಿಲ್ಲ. ಹೀಗಾಗಿ ಅವರನ್ನು ನೋಡಿಕೊಳ್ಳಲು ನಾನು ಕೊಯಮತ್ತೂರಿನಲ್ಲಿ ಉಳಿದುಕೊಳ್ಳಬೇಕಿದೆ. ಇದು ನನ್ನ ಮೊದಲ ಕರ್ತವ್ಯ. ಆದ್ದರಿಂದ ನನಗೆ ಪಕ್ಷದ ಪರವಾಗಿ ಪ್ರಚಾರಕ್ಕೆ ಹೆಚ್ಚು ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂತಿರನ್ ಅವರಿಗೆ ತಿಳಿಸಿದ್ದೇನೆ. ಪಕ್ಷವು ಬೇರೆ ಉಸ್ತುವಾರಿಯನ್ನು ನಿಯೋಜಿಸುತ್ತದೆ. ಪ್ರಚಾರದಲ್ಲಿ ನಾನು ಕೆಲಸ ಮಾಡುತ್ತೇನೆ. ಈ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.

ಲೋಕಸಭೆಯಿಂದ 8 ವಿಪಕ್ಷ ಸಂಸದರ ಅಮಾನತು; ಸದನದಲ್ಲಿ ಅಂತದ್ದೇನಾಯ್ತು?

2026ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಮಾತನಾಡಿದ ಅವರು, ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು. 2024ರ ಸಂಸತ್ ಚುನಾವಣೆಗೆ ಸ್ಪರ್ಧಿಸಿದಾಗಿನಿಂದ ಜನರನ್ನು ಭೇಟಿ ಮಾಡುವ ಸಲುವಾಗಿ ಪ್ರತ್ಯೇಕ ಮನೆಯನ್ನು ಬಾಡಿಗೆಗೆ ಪಡೆದಿದ್ದೇನೆ. ಬಿಜೆಪಿಯಲ್ಲಿ ಕೊಯಮತ್ತೂರಿನಲ್ಲಿ ಶಾಸಕಿ ವನತಿ ಶ್ರೀನಿವಾಸನ್ ಇದ್ದಾರೆ. ಅವರು ಟಿಕೆಟ್ ಪಡೆದ ಅನಂತರ 2026 ರ ಚುನಾವಣೆಯಲ್ಲಿ ಬಹುಮತದ ಮತಗಳೊಂದಿಗೆ ಗೆಲ್ಲಬೇಕು ಎಂಬುದಾಗಿ ತಿಳಿಸಿದರು.

ಯಾವುದೇ ವೈಯಕ್ತಿಕ ಚಿಂತನೆ ಇಲ್ಲ. ರಾಷ್ಟ್ರೀಯ ನಾಯಕರು ಏನು ಸೂಚಿಸಿದ್ದಾರೆ ಎಂಬುದರ ಕುರಿತು ಸ್ಪಷ್ಟವಾಗಿದೆ. ಆ ಕಾರ್ಯಗಳ ಮೇಲೆ ಗಮನ ಕೇಂದ್ರೀಕರಿಸಿದ್ದೇವೆ. ಒಂದು ತಿಂಗಳೊಳಗೆ ಮುಂದಿನ ಬೆಳವಣಿಗೆಗಳ ಬಗ್ಗೆ ತಿಳಿಯುತ್ತದೆ ಎಂದು ಅವರು ಹೇಳಿದರು.

 

 

Previous Post

ನಿರಂತರ್ ಉದ್ಯಾವರ : ಫೆಬ್ರವರಿ 5 ರಿಂದ 8ರವರೆಗೆ ಬಹುಭಾಷಾ ನಿರಂತರ್ ನಾಟಕೋತ್ಸವ..!!

Next Post

ಗೂಡ್ಸ್ ವಾಹನ – ಪ್ಯಾಸೆಂಜರ್ ಕ್ರೂಸರ್ ನಡುವೆ ಭೀಕರ ಅಪಘಾತ – ಮೂವರು ಮಹಿಳೆಯರು ಸ್ಥಳದಲ್ಲೇ ಸಾವು.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಗೂಡ್ಸ್ ವಾಹನ – ಪ್ಯಾಸೆಂಜರ್ ಕ್ರೂಸರ್ ನಡುವೆ  ಭೀಕರ ಅಪಘಾತ – ಮೂವರು ಮಹಿಳೆಯರು ಸ್ಥಳದಲ್ಲೇ ಸಾವು.!!

ಗೂಡ್ಸ್ ವಾಹನ - ಪ್ಯಾಸೆಂಜರ್ ಕ್ರೂಸರ್ ನಡುವೆ ಭೀಕರ ಅಪಘಾತ - ಮೂವರು ಮಹಿಳೆಯರು ಸ್ಥಳದಲ್ಲೇ ಸಾವು.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

19/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

19/09/2026
NCAP 2026 ವಿಜ್ಞಾನ ಮೇಳ: ರಾಜೇಶ್ವರಿ ನ್ಯಾಷನಲ್ ಸಂಸ್ಥೆಗೆ ದ್ವಿತೀಯ ಸ್ಥಾನ

NCAP 2026 ವಿಜ್ಞಾನ ಮೇಳ: ರಾಜೇಶ್ವರಿ ನ್ಯಾಷನಲ್ ಸಂಸ್ಥೆಗೆ ದ್ವಿತೀಯ ಸ್ಥಾನ

19/09/2026
ಪ್ರಧಾನಿ ಮೋದಿ ನಾಯಕತ್ವ ಮೆಚ್ಚಿ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಮುಖಂಡರು

ಪ್ರಧಾನಿ ಮೋದಿ ನಾಯಕತ್ವ ಮೆಚ್ಚಿ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಮುಖಂಡರು

18/09/2026

Recent News

ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

19/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

19/09/2026
NCAP 2026 ವಿಜ್ಞಾನ ಮೇಳ: ರಾಜೇಶ್ವರಿ ನ್ಯಾಷನಲ್ ಸಂಸ್ಥೆಗೆ ದ್ವಿತೀಯ ಸ್ಥಾನ

NCAP 2026 ವಿಜ್ಞಾನ ಮೇಳ: ರಾಜೇಶ್ವರಿ ನ್ಯಾಷನಲ್ ಸಂಸ್ಥೆಗೆ ದ್ವಿತೀಯ ಸ್ಥಾನ

19/09/2026
ಪ್ರಧಾನಿ ಮೋದಿ ನಾಯಕತ್ವ ಮೆಚ್ಚಿ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಮುಖಂಡರು

ಪ್ರಧಾನಿ ಮೋದಿ ನಾಯಕತ್ವ ಮೆಚ್ಚಿ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಮುಖಂಡರು

18/09/2026
imunify-bot-check