Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ವಿಶ್ವ ಕ್ಯಾನ್ಸರ್ ದಿನ 2026: ಕ್ಯಾನ್ಸರ್ ಜಾಗೃತಿಗಾಗಿ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ ವತಿಯಿಂದ ಬೈಕ್ ಜಾಥಾ..!!

Dhrishya News by Dhrishya News
05/02/2026
in ಆರೋಗ್ಯ, ಮುಖಪುಟ
0
ವಿಶ್ವ ಕ್ಯಾನ್ಸರ್ ದಿನ 2026: ಕ್ಯಾನ್ಸರ್ ಜಾಗೃತಿಗಾಗಿ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ ವತಿಯಿಂದ ಬೈಕ್ ಜಾಥಾ..!!
0
SHARES
10
VIEWS
Share on FacebookShare on Twitter

ಮಣಿಪಾಲ, 04 ಫೆಬ್ರವರಿ 2026:ಪ್ರತಿ ವರ್ಷ ಫೆಬ್ರವರಿ 4ರಂದು ಆಚರಿಸಲ್ಪಡುವ ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ, ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು, ಮಣಿಪಾಲ ಆಟೋ ಕ್ಲಬ್, ಉಡುಪಿ ಜಾವಾ–ಯೆಜ್ಡಿ ಮೋಟಾರ್‌ಸೈಕಲ್ ಕ್ಲಬ್, ರಾಯಲ್ ಎನ್‌ಫೀಲ್ಡ್ ರೈಡರ್ಸ್ ಉಡುಪಿ ಹಾಗೂ ಆಭರಣ ಮೋಟಾರ್ಸ್, ಉಡುಪಿ ಇವರ ಸಹಯೋಗದೊಂದಿಗೆ “ನಾವು ಒಟ್ಟಾಗಿ ಕ್ಯಾನ್ಸರ್ ವಿರುದ್ಧ ಜೀವನಕ್ಕಾಗಿ ಸವಾರಿ ಮಾಡುತ್ತೇವೆ” ಎಂಬ ದ್ಯೇಯದೊಂದಿಗೆ ಬೈಕ್ ರಾಲಿ ಯನ್ನು ಆಯೋಜಿಸಿತು. ಈ ಕಾರ್ಯಕ್ರಮದ ಉದ್ದೇಶ ಕ್ಯಾನ್ಸರ್ ತಡೆಗಟ್ಟುವಿಕೆ, ಆರಂಭಿಕ ಪತ್ತೆ ಹಾಗೂ ಕ್ಯಾನ್ಸರ್ ವಿರುದ್ಧ ಹೋರಾಟದಲ್ಲಿ ಸಾರ್ವಜನಿಕರ ಒಗ್ಗಟ್ಟಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದಾಗಿತ್ತು.

 

ಕ್ಯಾನ್ಸರ್ ಎನ್ನುವುದು ದೇಹದ ಕೆಲವು ಕೋಶಗಳು ನಿಯಂತ್ರಣವಿಲ್ಲದೆ ಬೆಳೆಯುತ್ತಾ ದೇಹದ ಇತರ ಭಾಗಗಳಿಗೆ ಹರಡುವ ಸ್ಥಿತಿಯಾಗಿದೆ. ಜಾಗತಿಕವಾಗಿ ಕ್ಯಾನ್ಸರ್ ಮರಣದ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ತಂಬಾಕು ಸೇವನೆ, ದೀರ್ಘಕಾಲ ಮದ್ಯಪಾನ, ಅನಾರೋಗ್ಯಕರ ಆಹಾರ ಪದ್ಧತಿ, ದೈಹಿಕ ಚಟುವಟಿಕೆಯ ಕೊರತೆ ಹಾಗೂ ವಾಯುಮಾಲಿನ್ಯಕ್ಕೆ ತುತ್ತಾಗುವುದು ಕ್ಯಾನ್ಸರ್‌ಗೆ ಪ್ರಮುಖ ಅಪಾಯಕಾರಕ ಅಂಶಗಳಾಗಿವೆ. ಜಾಗೃತಿ ಕೊರತೆ, ತಡವಾದ ರೋಗನಿರ್ಣಯ ಹಾಗೂ ಕೈಗೆಟುಕುವ ಚಿಕಿತ್ಸೆಗೆ ಕಡಿಮೆ ಪ್ರವೇಶ ಇರುವುದರಿಂದ ಅನೇಕ ಕಡೆಗಳಲ್ಲಿ ಕ್ಯಾನ್ಸರ್‌ನ ಪರಿಣಾಮ ಗಂಭೀರವಾಗುತ್ತಿದೆ. ವಿಶ್ವ ಕ್ಯಾನ್ಸರ್ ದಿನವನ್ನು ಪ್ರತಿವರ್ಷ ಫೆಬ್ರವರಿ 4ರಂದು ಆಚರಿಸುವ ಮೂಲಕ ಕ್ಯಾನ್ಸರ್ ತಡೆಗಟ್ಟುವಿಕೆ, ಆರಂಭಿಕ ಪತ್ತೆ ಮತ್ತು ಸಮಯೋಚಿತ ಚಿಕಿತ್ಸೆಯ ಮಹತ್ವವನ್ನು ಒತ್ತಿ ಹೇಳಲಾಗುತ್ತದೆ.

 

ಈ ಬೈಕ್ ರಾಲಿಯಲ್ಲಿ 100ಕ್ಕೂ ಹೆಚ್ಚು ಬೈಕ್ ಸವಾರರು ಉತ್ಸಾಹದಿಂದ ಭಾಗವಹಿಸಿದ್ದು, ಕ್ಯಾನ್ಸರ್ ರಹಿತ ಭವಿಷ್ಯದತ್ತ ಏಕತೆ, ಶಕ್ತಿ ಮತ್ತು ಬದ್ಧತೆಯ ಸಂಕೇತವಾಯಿತು. ಜಾಥವು ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದಿಂದ ಹೊರಟು ಉಡುಪಿ ಮುಖ್ಯ ರಸ್ತೆಯ ಮೂಲಕ ಕಿನ್ನಿಮುಲ್ಕಿ ಸ್ವಾಗತ ಗೋಪುರದವರೆಗೆ ಹಾಗೂ ಮರುಕಳಿಸಿ ಕಸ್ತೂರ್ಬಾ ಆಸ್ಪತ್ರೆಗೆ ಸಾಗಿದ್ದು, ಕ್ಯಾನ್ಸರ್ ಜಾಗೃತಿ ಮತ್ತು ಸಮಯೋಚಿತ ವೈದ್ಯಕೀಯ ಚಿಕಿತ್ಸೆಯ ಮೂಲಕ ಜೀವ ಉಳಿಸಬಹುದೆಂಬ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸಿತು.

 

ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಹರಿರಾಮ್ ಶಂಕರ್, ಐಪಿಎಸ್ ಮುಖ್ಯ ಅತಿಥಿಯಾಗಿ ಹಾಗೂ ಮಣಿಪಾಲ ಹೆಲ್ತ್ ಎಂಟರ್‌ಪ್ರೈಸಸ್ ಪ್ರೈವೇಟ್ ಲಿಮಿಟೆಡ್ (MHEPL) ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ದಿಲೀಪ್ ಜೋಸ್ ಗೌರವ ಅತಿಥಿಯಾಗಿ ಆಗಮಿಸಿ ಬೈಕ್ ರಾಲಿಗೆ ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಡಾ. ಸುಧಾಕರ್ ಕಂಟಿಪುಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಮಣಿಪಾಲ ಕ್ಲಸ್ಟರ್), ಡಾ. ಅವಿನಾಶ್ ಶೆಟ್ಟಿ, ವೈದ್ಯಕೀಯ ಅಧೀಕ್ಷಕರು, ಹಾಗೂ ಮಣಿಪಾಲ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರ (MCCCC)ದ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

 

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಾ. ಸುಧಾಕರ್ ಕಂಟಿಪುಡಿ, ಕ್ಯಾನ್ಸರ್ ಪ್ರಕರಣಗಳ ಹೆಚ್ಚಳದ ಬಗ್ಗೆ ಆತಂಕ ವ್ಯಕ್ತಪಡಿಸಿ, ಜಾಗೃತಿ, ನಿಯಮಿತ ತಪಾಸಣೆ ಹಾಗೂ ಜೀವನಶೈಲಿ ಬದಲಾವಣೆಯ ಅಗತ್ಯವನ್ನು ಒತ್ತಿ ಹೇಳಿದರು. ಇಂತಹ ಜಾಥಾಗಳ ಮೂಲಕ ಆಸ್ಪತ್ರೆಯ ಮಿತಿಯನ್ನು ಮೀರಿ ಸಮಾಜದೊಳಗೆ ಆರೋಗ್ಯ ಸಂದೇಶವನ್ನು ತಲುಪಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

 

ಮುಖ್ಯ ಅತಿಥಿ ಶ್ರೀ ಹರಿರಾಮ್ ಶಂಕರ್, ಐಪಿಎಸ್, ಈ ಜಾಗೃತಿ ಕಾರ್ಯಕ್ರಮವನ್ನು ಶ್ಲಾಘಿಸಿ, ಬೈಕ್ ಸವಾರರು ಹಾಗೂ ಆರೋಗ್ಯ ವೃತ್ತಿಪರರ ಸಕ್ರಿಯ ಭಾಗವಹಿಸುವಿಕೆಯನ್ನು ಪ್ರಶಂಸಿಸಿದರು. ಸಾರ್ವಜನಿಕ ಆರೋಗ್ಯ ಕಾರ್ಯಕ್ರಮಗಳಲ್ಲಿ ಶಿಸ್ತು, ಸುರಕ್ಷಿತ ವಾಹನ ಚಾಲನೆ ಹಾಗೂ ಸಮುದಾಯದ ಸಹಕಾರ ಅತ್ಯಂತ ಮಹತ್ವದ್ದೆಂದು ಅವರು ಹೇಳಿದರು. ಸಮಾಜಮುಖಿ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿರುವುದಕ್ಕಾಗಿ ಕಸ್ತೂರ್ಬಾ ಆಸ್ಪತ್ರೆಯನ್ನು ಅವರು ಅಭಿನಂದಿಸಿದರು.

 

ಗೌರವ ಅತಿಥಿ ಶ್ರೀ ದಿಲೀಪ್ ಜೋಸ್ , ಕ್ಯಾನ್ಸರ್ ಚಿಕಿತ್ಸೆ, ತಡೆಗಟ್ಟುವಿಕೆ ಹಾಗೂ ಸಮುದಾಯದೊಂದಿಗೆ ಸಂಪರ್ಕ ಕಾರ್ಯಕ್ರಮಗಳಿಗೆ ಮಣಿಪಾಲ ಹೆಲ್ತ್ ಎಂಟರ್‌ಪ್ರೈಸಸ್ ಸಂಸ್ಥೆಯ ಬದ್ಧತೆಯನ್ನು ಪುನರುಚ್ಚರಿಸಿದರು. ಶಿಕ್ಷಣ ಮತ್ತು ಆರಂಭಿಕ ಪತ್ತೆಯ ಮೂಲಕ ಕ್ಯಾನ್ಸರ್‌ನ ಭಾರವನ್ನು ಕಡಿಮೆ ಮಾಡುವಲ್ಲಿ ಆರೋಗ್ಯ ಸಂಸ್ಥೆಗಳು, ಆಡಳಿತ ವ್ಯವಸ್ಥೆ ಹಾಗೂ ಸಾರ್ವಜನಿಕರು ಒಟ್ಟಾಗಿ ಕಾರ್ಯನಿರ್ವಹಿಸಬೇಕೆಂದು ಅವರು ಹೇಳಿದರು.

 

ಈ ಸಂದರ್ಭದಲ್ಲಿ ವೈದ್ಯಕೀಯ ಆಂಕಾಲಜಿ ವಿಭಾಗದ ಮುಖ್ಯಸ್ಥರಾದ ಡಾ. ಅನಂತ್ ಪೈ ಅವರು ವಿಶ್ವ ಕ್ಯಾನ್ಸರ್ ದಿನದ ಮಹತ್ವದ ಕುರಿತು ಮಾಹಿತಿ ನೀಡಿ, ಜಾಗೃತಿ, ಆರಂಭಿಕ ಪತ್ತೆ ಮತ್ತು ಕ್ಯಾನ್ಸರ್ ಚಿಕಿತ್ಸೆಯ ಇತ್ತೀಚಿನ ಪ್ರಗತಿಗಳ ಬಗ್ಗೆ ವಿವರಿಸಿದರು.

Previous Post

ಗೂಡ್ಸ್ ವಾಹನ – ಪ್ಯಾಸೆಂಜರ್ ಕ್ರೂಸರ್ ನಡುವೆ ಭೀಕರ ಅಪಘಾತ – ಮೂವರು ಮಹಿಳೆಯರು ಸ್ಥಳದಲ್ಲೇ ಸಾವು.!!

Next Post

ಭಾರತ ಯಾವ ದೇಶದಿಂದ ಬೇಕಾದರೂ ಕಚ್ಚಾ ತೈಲ ಖರೀದಿಸುವ ಪೂರ್ಣ ಸ್ವತಂತ್ರ್ಯ ಹೊಂದಿದೆ :ರಷ್ಯಾ ಸ್ಪಷ್ಟನೆ….!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಭಾರತ ಯಾವ ದೇಶದಿಂದ ಬೇಕಾದರೂ ಕಚ್ಚಾ ತೈಲ ಖರೀದಿಸುವ ಪೂರ್ಣ ಸ್ವತಂತ್ರ್ಯ ಹೊಂದಿದೆ :ರಷ್ಯಾ ಸ್ಪಷ್ಟನೆ….!!

ಭಾರತ ಯಾವ ದೇಶದಿಂದ ಬೇಕಾದರೂ ಕಚ್ಚಾ ತೈಲ ಖರೀದಿಸುವ ಪೂರ್ಣ ಸ್ವತಂತ್ರ್ಯ ಹೊಂದಿದೆ :ರಷ್ಯಾ ಸ್ಪಷ್ಟನೆ....!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

24/03/2026
ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

24/03/2026
ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

24/03/2026
ಧರ್ಮಾಂತರಗೊಂಡವರಿಗೆ ಎಸ್‌ಸಿ, ಎಸ್ಟಿ ಸ್ಥಾನಮಾನ ಅನ್ವಯಿಸುವುದಿಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ

ಧರ್ಮಾಂತರಗೊಂಡವರಿಗೆ ಎಸ್‌ಸಿ, ಎಸ್ಟಿ ಸ್ಥಾನಮಾನ ಅನ್ವಯಿಸುವುದಿಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ

24/03/2026

Recent News

ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

24/03/2026
ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

ರಘುಪತಿ ಭಟ್ ಧರಣಿಗೆ ಒಂದೇ ದಿನದಲ್ಲಿ ಯಶಸ್ಸು: ರೆಸಾರ್ಟ್ ಏಕವಿನ್ಯಾಸ ನಕ್ಷೆ ಮಂಜೂರು

24/03/2026
ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

ಆರೋಗ್ಯ ಕೇಂದ್ರದಲ್ಲಿ ತೆರಿಗೆ ಪಾವತಿ ಕೇಂದ್ರ ಕಾಮಗಾರಿ: ಆರೋಗ್ಯ ಇಲಾಖೆ ಆಕ್ಷೇಪ – ಕಾಮಗಾರಿ ಸ್ಥಗಿತಕ್ಕೆ ಸೂಚನೆ

24/03/2026
ಧರ್ಮಾಂತರಗೊಂಡವರಿಗೆ ಎಸ್‌ಸಿ, ಎಸ್ಟಿ ಸ್ಥಾನಮಾನ ಅನ್ವಯಿಸುವುದಿಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ

ಧರ್ಮಾಂತರಗೊಂಡವರಿಗೆ ಎಸ್‌ಸಿ, ಎಸ್ಟಿ ಸ್ಥಾನಮಾನ ಅನ್ವಯಿಸುವುದಿಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ

24/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved