ಉಡುಪಿ, ಫೆ. 07:ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮೇ 3ರಂದು ಉಡುಪಿಯ ಯಕ್ಷಗಾನ ಕಲಾರಂಗದ ಹವಾ ನಿಯಂತ್ರಿತ ಸಭಾಂಗಣದಲ್ಲಿ ನಡೆಯಲಿದ್ದು, ಸಮ್ಮೇಳನಾಧ್ಯಕ್ಷರಾಗಿ ನಾಟಕಕಾರ, ಯಕ್ಷಗಾನ ಕಲಾವಿದ, ವೈದ್ಯ ಹಾಗೂ ಸಾಹಿತಿ ಡಾ. ಭಾಸ್ಕರಾನಂದ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.