ಉಡುಪಿ :ಫೆಬ್ರವರಿ 10:ಶ್ರೀ ಕೃಷ್ಣ ಮಠದ ಪರ್ಯಾಯ ಶ್ರೀ ಶೀರೂರು ಮಠದ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು, ತಮ್ಮ ಪರ್ಯಾಯ ಅವಧಿಯಲ್ಲಿ ಸಹಕರಿಸಿದ ಕೆನರಾ ಬ್ಯಾಂಕ್ನ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಫೆಬ್ರವರಿ 09 ರಂದು ಫಲ-ಮಂತ್ರಾಕ್ಷತೆ ನೀಡಿ ಅನುಗ್ರಹಿಸಿದರು.
ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ನ ಜನರಲ್ ಮ್ಯಾನೇಜರ್ ಹೆಚ್.ಕೆ. ಗಂಗಾಧರ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಪಬಿತ್ರ ಕುಮಾರ್ ದಾಸ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಸಂಜೀವ ಕುಮಾರ್, ಸಂಜಯ್ ಖಾತ್ರಿ, ಸಂದೀಪ್ ಕುಮಾರ್ ಅಗರವಾಲ್, ಡೆಪ್ಯುಟಿ ಜನರಲ್ ಮ್ಯಾನೇಜರ್ (ಉಡುಪಿ RO-1) ಮಹಾಮಾಯಾ ಪ್ರಸಾದ್ ರಾಯ್ ಉಪಸ್ಥಿತರಿದ್ದರು.
ಹಾಗೂ ಶೀರೂರು ಮಠದ ದಿವಾನರಾದ ಡಾ. ಉದಯ ಕುಮಾರ್ ಸರಳತ್ತಾಯ ಮತ್ತು ಶೀರೂರು ಪರ್ಯಾಯ ಸ್ವಾಗತ ಸಮಿತಿಯ ಮೋಹನ್ ಭಟ್ ಮಧುಕರ್ ಮುದ್ರಾಡಿ ಉಪಸ್ಥಿತರಿದ್ದರು.







