ಮಂಗಳೂರು, ಫೆ. 11:ಹಿಂದೂ ಯುವತಿ ಮುಸ್ಲಿಂ ಯುವಕನೊಂದಿಗೆ ರಿಜಿಸ್ಟರ್ ಮದುವೆಯಾಗಿರುವ ಘಟನೆಗೆ ಕರಾವಳಿಯಲ್ಲಿ ವಿರೋಧದ ಸ್ವರ ಕೇಳಿಬಂದಿದ್ದು, ಯುವತಿಯ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕಾಸರಗೋಡಿನ ಮೀಪುಗುರಿ ಪ್ರದೇಶದ ನಿವಾಸಿಯಾಗಿರುವ ಹಿಂದೂ ಯುವತಿ ಹಾಗೂ ವಯನಾಡು ಮೂಲದ ಮಹಮ್ಮದ್ ಮಿಲ್ದಾಜ್ ಇಬ್ಬರೂ ಪರಸ್ಪರ ಪ್ರೀತಿಸಿ ಓಡಿ ಹೋಗಿ ರಿಜಿಸ್ಟರ್ ಮದುವೆಯಾಗಿದ್ದು ಕರಾವಳಿ ಜಿಲ್ಲೆಯಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಸುರತ್ಕಲ್ನ ಚಿನ್ನಾಭರಣ ಮಳಿಗೆಯೊಂದರಲ್ಲಿ ಕೆಲಸಕ್ಕಿದ್ದ ಮಹಮ್ಮದ್ ಮಿಲ್ದಾಜ್, ಸುರತ್ಕಲ್ನ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ 23 ವರ್ಷದ ಹಿಂದೂ ಯುವತಿಯನ್ನು ಪ್ರೀತಿಸಿದ್ದ ಎನ್ನಲಾಗಿದೆ.ಈಕೆ ಸುರತ್ಕಲ್ನ ಪಿಜಿಯೊಂದರಲ್ಲಿ ವಾಸವಿದ್ದು ಜನವರಿ 1ರಂದೇ ಇವರಿಬ್ಬರು ವಯನಾಡಿಗೆ ತೆರಳಿ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡಿದ್ದಾರೆ. ಮದುವೆಯ ಬಳಿಕ ಯುವತಿಯು ಪೋಷಕರ ಸಂಪರ್ಕಕ್ಕೆ ಸಿಗದೇ ಹೋದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.
ಯುವತಿ ವಾಸವಿದ್ದ ಪಿಜಿಗೆ ಆಗಮಿಸಿದ ಪೋಷಕರು ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಆಕೆ ಫೆಭ್ರವರಿ 5ರಂದು ಪಿಜಿಯಿಂದ ಹೊರಟಿರುವ ವಿಡಿಯೋ ಸೆರೆಯಾಗಿದೆ. ಇದಾದ ಬಳಿಕ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಹಿಂದೂ ಯುವತಿಯ ಪೋಷಕರು ದೂರು ದಾಖಲಿಸಿದ್ದಾರೆ.
ಈ ಘಟನೆ ಸಂಬಂಧ ಹಿಂದೂಪರ ಸಂಘಟನೆಗಳು ಆಕ್ರೋಶ ಹೊರಹಾಕಿದ್ದು ಕೂಡಲೇ ಇಬ್ಬರನ್ನೂ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ







