ಉಡುಪಿ, ಫೆ. 12: ಬನ್ನಂಜೆ ಗರಡಿ ಸಂಪರ್ಕಿಸುವ ರಸ್ತೆ ಸಮೀಪ ಬುಧವಾರ ದುರ್ಘಟನೆ ಸಂಭವಿಸಿದೆ. ಬಸ್ ಏಜೆಂಟ್ ಆಗಿದ್ದ ಕೆ. ರಾಜೇಶ್ ಶೆಣೈ ಅವರು ತಮ್ಮ ನಿವಾಸದ ಹತ್ತಿರದ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ಸಮಾಜಸೇವಕ ಈಶ್ವರ್ ಮಲ್ಪೆ ಅವರ ತಂಡ ಸ್ಥಳಕ್ಕಾಗಮಿಸಿ ಕಾರ್ಯಾಚರಣೆ ನಡೆಸಿ ಬಾವಿಯಿಂದ ಶವವನ್ನು ಹೊರತೆಗೆದರು. ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಯ ಮೋರ್ಟ್ಯುರಿಗೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಸಹಕರಿಸಿದರು. ನಗರ ಪೊಲೀಸ್ ಠಾಣೆಯ ಎಸ್.ಐ. ನಾರಾಯಣ ಹಾಗೂ ಹೆಡ್ ಕಾನ್ಸ್ಟೇಬಲ್ ನೇತ್ರಾವತಿ ಸ್ಥಳಕ್ಕೆ ಭೇಟಿ ನೀಡಿ ಕಾನೂನು ಕ್ರಮ ಕೈಗೊಂಡಿದ್ದಾರೆ.







