ಉಡುಪಿ, ಫೆ. 12 : ಮಾನವ ಹಕ್ಕುಗಳ ಉಲ್ಲಂಘನೆ ಸಂಬಂಧಿತ ಪ್ರಕರಣಗಳಲ್ಲಿ ಪೀಡಿತರಿಗೆ ತ್ವರಿತ ನೆರವು ನೀಡುವ ಉದ್ದೇಶದಿಂದ ರಾಜ್ಯ ಮಾನವ ಹಕ್ಕುಗಳ ಆಯೋಗವು ಫೆಬ್ರವರಿ 18ರಿಂದ 20ರವರೆಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಭೆಗಳನ್ನು ನಡೆಸಲು ನಿರ್ಧರಿಸಿದೆ.
ಈ ಅವಧಿಯಲ್ಲಿ ಸಂಬಂಧಿತ ಜಿಲ್ಲೆಗಳ ಆಯೋಗದಲ್ಲಿ ನೋಂದಾಯಿತ ಪ್ರಕರಣಗಳನ್ನು ಪರಿಶೀಲಿಸಿ, ವಿಚಾರಣೆ ನಡೆಸಿ, ಅಗತ್ಯ ಕ್ರಮ ಕೈಗೊಂಡು ವಿಲೇವಾರಿ ಮಾಡಲಾಗುವುದು.
ದೂರುದಾರರು ಹಾಗೂ ಪ್ರತಿವಾದಿ ಅಧಿಕಾರಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಆಯೋಗ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.







