Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ ಜಿಲ್ಲೆಯಲ್ಲಿ 700ಕ್ಕೂ ಹೆಚ್ಚು ಸಹಕಾರಿ ಸಂಸ್ಥೆಗಳಲ್ಲಿ ಸಂವಿಧಾನ ಪೀಠಿಕೆ ಅಳವಡಿಕೆಗೆ ಚಾಲನೆ….!

Dhrishya News by Dhrishya News
13/02/2026
in ಕರಾವಳಿ, ಸುದ್ದಿಗಳು
0
ಉಡುಪಿ ಜಿಲ್ಲೆಯಲ್ಲಿ 700ಕ್ಕೂ ಹೆಚ್ಚು ಸಹಕಾರಿ ಸಂಸ್ಥೆಗಳಲ್ಲಿ ಸಂವಿಧಾನ ಪೀಠಿಕೆ ಅಳವಡಿಕೆಗೆ ಚಾಲನೆ….!
0
SHARES
9
VIEWS
Share on FacebookShare on Twitter

ಉಡುಪಿ, ಫೆ. 13: ಜಿಲ್ಲೆಯಲ್ಲಿರುವ ಸುಮಾರು 700 ಸಹಕಾರಿ ಸೊಸೈಟಿ, ಬ್ಯಾಂಕ್‌ಗಳು ಹಾಗೂ ಹಾಲು ಉತ್ಪಾದಕರ ಸಂಘಗಳ ಕಚೇರಿಗಳಲ್ಲಿ ಸರ್ಕಾರದ ಆದೇಶದಂತೆ ಸಂವಿಧಾನದ ಪೀಠಿಕೆಯನ್ನು ಅಳವಡಿಸುವ ಕಾರ್ಯ ಆರಂಭಗೊಂಡಿದೆ ಎಂದು ನೇತಾಜಿ ಸುಭಾಸ್ ಚಂದ್ರ ಬೋಸ್ ಗ್ರಾಮೀಣ ಸೇವಾ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಸಂಗೊಳ್ಳಿ ಸೋಮಣ್ಣ ತಿಳಿಸಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರಕಾರದ ನಿರ್ದೇಶನದಂತೆ ಎಲ್ಲ ಜಿಲ್ಲೆಗಳ ಸರಕಾರಿ ಸಂಸ್ಥೆ ಹಾಗೂ ಸರಕಾರಿ ಸಂಸ್ಥೆಗಳಲ್ಲಿ ಸಂವಿಧಾನ ಪೀಠಿಕೆ ಅಳವಡಿಸುವ ಗುತ್ತಿಗೆಯನ್ನು ಸರಕಾರ ನಮ್ಮ ಎನ್‌ಜಿಒಗೆ ನೀಡಿದೆ. ಅದರಂತೆ ಈಗಾಗಲೇ 24 ಜಿಲ್ಲೆಗಳಲ್ಲಿ ಸಂವಿಧಾನದ ಪೀಠಿಕೆ ಅಳವಡಿಸುವ ಪ್ರಕ್ರಿಯೆ ಪೂರ್ಣಗೊಳಿಸಿದ್ದೇವೆ. ಇದೀಗ ಉಡುಪಿ ಜಿಲ್ಲೆಯಲ್ಲಿ ಸಹಕಾರಿ ಸಂಸ್ಥೆಗಳು ಹಾಗೂ ಹಾಲು ಉತ್ಪಾದಕರ ಸಂಘಗಳ ಕಚೇರಿಯಲ್ಲಿ ಸಂವಿಧಾನ ಪೀಠಿಕೆ ಅಳವಡಿಸುವ ಪ್ರಕ್ರಿಯೆ ಶುರು ಮಾಡಲಿದ್ದೇವೆ. ಈಗಾಗಲೇ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.ಅವರು ಈ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಜಿಲ್ಲಾಡಳಿತ ನೀಡಿದ ಪಟ್ಟಿಯಂತೆ ನಾವು ಪೀಠಿಕೆ ಪೂರೈಕೆ ಮಾಡಲಿದ್ದೇವೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪೀಠಿಕೆ ಯಾವ ಅಳತೆಯಲ್ಲಿ ಇರಬೇಕು ಮತ್ತು ಎಷ್ಟು ಶುಲ್ಕ ನಿಗದಿ ಮಾಡಬೇಕು ಎಂಬುದು ಸರಕಾರವೇ ನಿರ್ಧರಿಸಿದೆ. ಅದರಂತೆ ಸಂಸ್ಥೆಗಳಿಗೆ ಭೇಟಿ ನೀಡಿ, ಮಾಹಿತಿ ಒದಗಿಸಿ ಪೀಠಿಕೆ ಅಳವಡಿಸಲು ಮನವಿ ಮಾಡಲಿದ್ದೇವೆ. ಮುಂದಿನ ನಾಲೈದು ತಿಂಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಶೀಘ್ರವೇ ದ.ಕ. ಜಿಲ್ಲೆಯಲ್ಲೂ ಈ ಪ್ರಕ್ರಿಯೆ ಆರಂಭಿಸಲಿದ್ದೇವೆ ಎಂದರು.

ಜಿಲ್ಲಾ ಸಂಯೋಜಕರಾದ ವಿದ್ಯಾಲಕ್ಷ್ಮೀ, ಪಾರ್ಥಸಾರಥಿ, ಅಶ್ವಿನಿ, ವನಿತಾ ಹಾಗೂ ಸುಮಾ ಆಚಾರ್ಯ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Previous Post

ನಕಲಿ ಬ್ಯಾಂಕ್ ಸೀಲ್ ಬಳಸಿ ಆಸ್ತಿ ತೆರಿಗೆ ವಂಚನೆ: ನಗರಸಭೆ ಪೌರಾಯುಕ್ತರಿಂದ ದೂರು….!

Next Post

ಪಿಕಪ್ ವಾಹನ ಡಿಕ್ಕಿ: ಸ್ಕೂಟರ್ ಸವಾರ ಮೃತ್ಯು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪಿಕಪ್ ವಾಹನ ಡಿಕ್ಕಿ: ಸ್ಕೂಟರ್ ಸವಾರ ಮೃತ್ಯು..!

ಪಿಕಪ್ ವಾಹನ ಡಿಕ್ಕಿ: ಸ್ಕೂಟರ್ ಸವಾರ ಮೃತ್ಯು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026