ಬಂಟ್ವಾಳ, ಫೆ. 13: ಬಂಟ್ವಾಳ ಪುರಸಭೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಇಂದು ಸಾರ್ವಜನಿಕರು ಕಚೇರಿಗೆ ಬೀಗ ಹಾಕಿ ಪ್ರತಿಭತಿಸುತಿದ್ದರೆ.ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್, ಬಿಜೆಪಿ ಹಾಗೂ ಎಸ್ಡಿಪಿಐ ಕಾರ್ಯಕರ್ತರು ಪಕ್ಷಾತೀತವಾಗಿ ಒಂದಾಗಿ ನೀರಿಗಾಗಿ ಒತ್ತಾಯ ವ್ಯಕ್ತಪಡಿಸಿದರು.
ಪುರಸಭೆಯ ಸಿಬ್ಬಂದಿಗಳನ್ನು ಅನಧಿಕೃತವಾಗಿ ನೇಮಕ ಮಾಡಿದ್ದಾರೆ ಎಂದು ಆರೋಪಿಸಿ, ಹೊಸದಾಗಿ ಬಂದ ಮುಖ್ಯಾಧಿಕಾರಿ ಸಿಬ್ಬಂದಿಯನ್ನು ತೆಗೆದು ಹಾಕಿದ್ದಾರೆ. ಹೀಗಾಗಿ ನೀರು ಬಿಡುವುದಕ್ಕೆ ಜನವಿಲ್ಲ. ಕಳೆದ ಹಲವು ಸಮಯಗಳಿಂದ ನೀರು ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗಿದ್ದು, ಶುಕ್ರವಾರ ರೊಚ್ಚಿಗೆದ್ದ ನಾಗರೀಕರು ಕಚೇರಿಗೆ ಬೀಗ ಹಾಕಿದ್ದಾರೆ.
ಪುರಸಭೆಯ ಸಿಬ್ಬಂದಿ ಕಚೇರಿಯೊಳಗಿದ್ದು, ಹೊರಭಾಗದಲ್ಲಿ ದೊಡ್ಡ ಸಂಖ್ಯೆಯಲ್ಲಿ ನಾಗರಿಕರು ಸೇರಿದ್ದಾರೆ. ಈ ನಡುವೆ ಪೊಲೀಸರು ಮತ್ತು ನಾಗರಿಕರಿಗೆ ಮಾತಿನ ಚಕಮಕಿ ನಡೆದಿದ್ದು, ಸಂಬಂಧಿಸಿದ ಅಧಿಕಾರಿಗಳು ಕಾಣಿಸುತ್ತಿಲ್ಲ.







