ಫೆ. 13: ರಾಯಚೂರು-ಮಂತ್ರಾಲಯ ನಡುವೆ ರಾತ್ರಿ ಗಂಟೆಯ ಬಳಿಕ ಸರ್ಕಾರಿ ಬಸ್ ಸೇವೆ ಇಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ನಡೆಯುತ್ತಿದ್ದವು. ಈ ಕುರಿತು ಚರ್ಚೆಗೆ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಹಾಕಲಾಗಿದ್ದು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಪರವಾಗಿ ಹೊರಡಿಸಿರುವ ಪ್ರಕಟಣೆಯನ್ನು ಲಗತ್ತಿಸಿದ್ದಾರೆ.
ರಾಯಚೂರು-ಮಂತ್ರಾಲಯ ಮಾರ್ಗದಲ್ಲಿ ರಾತ್ರಿ ವೇಳೆ ಸರ್ಕಾರಿ ಬಸ್ ಸಂಚಾರ ಇಲ್ಲ ಎಂಬ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನೆಲೆ ವಿಷಯಕ್ಕೆ ಸಂಬಂಧಿಸಿ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಪರವಾಗಿ ಹೊರಡಿಸಲಾದ ಅಧಿಕೃತ ಪ್ರಕಟಣೆಯನ್ನು ಸಹ ಲಗತ್ತಿಸಲಾಗಿದೆ.
ಈ ಪ್ರಕಟಣೆ ರಾತ್ರಿ 9 ಗಂಟೆಯ ನಂತರ ರಾಯಚೂರಿನಿಂದ ಮಂತ್ರಾಲಯಕ್ಕೆ ಬಸ್ ಸೇವೆ ಇಲ್ಲ ಎಂದು ಸಾಮಾಜಿಕ ಜಾಲತಾಣ ಎಕ್ಸ್- ಖಾತೆಯಲ್ಲಿ ಪ್ರಕಟವಾದ ಸುದ್ದಿಯ ಬಗ್ಗೆ ಎಂಬ ವಿಷಯ ಒಳಗೊಂಡಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ರಾತ್ರಿ ಗಂಟೆಯ ನಂತರ ರಾಯಚೂರಿನಿಂದ ಮಂತ್ರಾಲಯಕ್ಕೆ ಬಸ್ ಸೇವೆ ಇಲ್ಲ ಎಂದು ಸಾಮಾಜಿಕ ಜಾಲತಾಣ ಎಕ್ಸ್- ಖಾತೆಯಲ್ಲಿ ಪ್ರಕಟವಾದ ಸುದ್ದಿಯನ್ನು ಪರಿಶೀಲಿಸಲಾಯಿತು ಎಂದು ಹೇಳಿದ್ದಾರೆ.
ಪ್ರಸ್ತುತ ರಾಯಚೂರು-ಮಂತ್ರಾಲಯಕ್ಕೆ ರಾಯಚೂರು ಬಸ್ ನಿಲ್ದಾಣದಿಂದ ಬೆಳಗಿನ ಜಾವ 3:15 ರಿಂದ ರಾತ್ರಿ 23:30 ಗಂಟೆಯ ವರೆಗೆ ವೇಗದೂತ ಮತ್ತು ಪ್ರತಿಷ್ಠಿತ ಸಾರಿಗೆಗಳು ಸೇರಿದಂತೆ ಒಟ್ಟು 122 ಸುತ್ತುವಳಿಗಳು ಕಾರ್ಯಾಚರಣೆಯಲ್ಲಿರುತ್ತವೆ.
ಸದರಿ ಸಾರಿಗೆಗಳ ಪ್ರಯೋಜನವನ್ನು ಭಕ್ತಾಧಿಗಳು ಹಾಗೂ ಸಾರ್ವಜನಿಕ ಪ್ರಯಾಣಿಕರು ಪಡೆದುಕೊಳ್ಳುತ್ತಿರುತ್ತಾರೆ ಎಂದು ಹೇಳಿದ್ದಾರೆ. ಪ್ರಸ್ತುತ ಗಂಟೆಯ ನಂತರ ರಾಯಚೂರು ಬಸ್ ನಿಲ್ದಾಣದಿಂದ ಕಾರ್ಯಾಚರಣೆಯಲ್ಲಿರುವ ಬಸ್ಗಳ ವಿವರ ಇಲ್ಲಿದೆ.
122/ 123. ನಾನ್ ಎಸಿ ಸ್ವೀಪರ್. ರಾಯಚೂರಿನಿಂದ ಹೊರಡುವ ಸಮಯ
21:21
46/ 47. ವೇಗದೂತ. ರಾಯಚೂರಿನಿಂದ ಹೊರಡುವ ಸಮಯ 21:30
59/ 60. ನಾನ್ ಎಸಿ ಸ್ವೀಪರ್. ರಾಯಚೂರಿನಿಂದ ಹೊರಡುವ ಸಮಯ 21:30
15/ 16. ಅಂಬಾರಿ ಗ್ರೀಮ್ ಕ್ಲಾಸ್. ರಾಯಚೂರಿನಿಂದ ಹೊರಡುವ ಸಮಯ 21:45
98/ 99. ಕಲ್ಯಾಣ ರಥ. ರಾಯಚೂರಿನಿಂದ ಹೊರಡುವ ಸಮಯ 23:30
ಸಾರ್ವಜನಿಕ ಪ್ರಯಾಣಿಕರು ಹಾಗೂ ಭಕ್ತಾಧಿಗಳ ಅನುಕೂಲಕ್ಕಾಗಿ ರಾಯಚೂರು ಘಟಕ-1ರಿಂದ ಅನುಸೂಚಿ ಸಂಖ್ಯೆ:50 ರಲ್ಲಿ ರಾಯಚೂರಿನಿಂದ ಮಂತ್ರಾಲಯಕ್ಕೆ ಬೆಳಗಿನ ಜಾವ 4 ಗಂಟೆಗೆ ಹಾಗೂ ದೇವದುರ್ಗ ಘಟಕದ ಅನುಸೂಚಿ ಸಂಖ್ಯೆ 46/47 ರಲ್ಲಿ ದೇವದುರ್ಗ-ರಾಯಚೂರು-ಮಂತ್ರಾಲಯ ಮಾರ್ಗದಲ್ಲಿ ರಾತ್ರಿ 21:30ಕ್ಕೆ ರಾಯಚೂರು ಬಸ್ ನಿಲ್ದಾಣ ನಿರ್ಗಮಿಸಿ ಮಂತ್ರಾಲಯಕ್ಕೆ ಕಾರ್ಯಾಚರಣೆಯಾಗುವಂತೆ ಹೆಚ್ಚುವರಿ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿರುತ್ತದೆ.
ಸದರಿ ಸಾರಿಗೆಗಳ ಪ್ರಯೋಜನವನ್ನು ಸಾರ್ವಜನಿಕ ಪ್ರಯಾಣಿಕರು ಹಾಗೂ ಭಕ್ತಾಧಿಗಳು ಪಡೆದುಕೊಳ್ಳಬಹುದಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಲಾಗಿದೆ.







