ಮಂಗಳೂರು ಫೆಬ್ರವರಿ 13: ನೆರೆಹೊರೆಯವರ ವಿರುದ್ಧ ಸಣ್ಣ ವಿಷಯಕ್ಕೆ ದೂರು ನೀಡಲು ಠಾಣೆಗೆ ತೆರಳಿದ್ದ ವ್ಯಕ್ತಿಯೇ ಕೊನೆಗೆ ಜೈಲು ಪಾಲಾದ ಅಪರೂಪದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಬಂಧಿತನನ್ನು ಮಂಗಳೂರಿನ ಲ್ಯಾಂಡ್ ಲಿಂಕ್ಸ್ ನಿವಾಸಿ ಮಂಜಪ್ಪ ಸುರೇಂದ್ರನ್ ಎಂದು ಗುರುತಿಸಲಾಗಿದೆ.
ಮನೆಯ ಅಂಗಳದಲ್ಲಿ ಶಟಲ್ ಆಡುತ್ತಿದ್ದ ಯುವಕರ ಬಗ್ಗೆ ಮಂಜಪ್ಪ ಸುರೇಂದ್ರ ಕಾವೂರು ಪೊಲೀಸರಿಗೆ ದೂರವಾಣಿ ಮೂಲಕ ಪದೇ ಪದೇ ಫೋನ್ ಮಾಡಿ ದೂರು ನೀಡಿದ್ದರು. ಮತ್ತೆ ದೂರು ದಾಖಲಿಸಲು ಕುಡಿದ ಮತ್ತಿನಲ್ಲಿ ಕಾವೂರು ಪೊಲೀಸ್ ಠಾಣೆಗೆ ಹೋದವರು ಅಲ್ಲಿ ಪೊಲೀಸರಿಗೆ ನಿಂಧಿಸಿದ್ದಾನೆ. ಈ ಹಿನ್ನಲೆ ಮಂಜಪ್ಪ ಸುರೇಂದ್ರನ್ ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗೆ ಮಂಗಳೂರಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಈ ಘಟನೆ ನಡೆದಿರುವುದು ಮಂಗಳೂರಿನ ಲ್ಯಾಂಡ್ ಲಿಂಕ್ಸ್ ಗ್ರೀನ್ ಪಾರ್ಕ್ನಲ್ಲಿ. ಸಂಜೆ ಹೊತ್ತು ಯುವಕರು ತಮ್ಮ ಪಾಡಿಗೆ ಶಟಲ್ ಆಡುತ್ತಿದ್ದಾಗ, ತನಗೆ ನಿದ್ರೆ ಮಾಡಲು ತೊಂದರೆ ಆಗುತ್ತಿದೆ ಎಂದು ಬೊಬ್ಬೆ ಹಾಕಿ ಪತ್ನಿಯ ಜೊತೆಗೆ ಕಾವೂರು ಪೊಲೀಸ್ ಠಾಣೆಗೆ ಧಾವಿಸಿದ್ದರು. ಅಲ್ಲಿ ತನ್ನ ದೂರನ್ನು ದಾಖಲಿಸಬೇಕು, ದೂರನ್ನು ಸ್ವೀಕರಿಸದಿದ್ದರೆ ಪೊಲೀಸ್ ಕಮಿಷನರ್ ಅವರ ಬಳಿ ಹೋಗುವೆ ಎಂದು ಪೊಲೀಸ್ ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾನೆ. ಆತನ ಕುಡಿತದ ಮತ್ತಿನಲ್ಲಿ ಇರುವುದನ್ನು ಪೊಲೀಸರು ಗಮನಿಸಿದ್ದಾರೆ.
ಪೊಲೀಸರು ಬಳಿಕ ಮಂಜಪ್ಪ ಅವರನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಆತನ ಪತ್ನಿಯನ್ನು ಪೊಲೀಸ್ ಜೀಪಿನಲ್ಲಿ ಮನೆಗೆ ಸುರಕ್ಷಿತವಾಗಿ ಮನೆಗೆ ಬಿಟ್ಟಿರುತ್ತಾರೆ. ಈ ಮಧ್ಯೆ, ವಶದಲ್ಲಿ ಇದ್ದ ಆರೋಪಿ ಮಂಜಪ್ಪ ಸುರೇಂದ್ರನ್ ಪೊಲೀಸರಿಗೇ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. “ನೀವು ಹಣ ಕೊಟ್ಟು ಪೊಲೀಸ್ ಇಲಾಖೆಗೆ ಸೇರಿದ್ದೀರಿ, ನಿಮ್ಮನ್ನು ಇಲಾಖೆಯಲ್ಲಿ ಇಲ್ಲದಂತೆ ಮಾಡುವೆ” ಎಂದು ಸಿಬ್ಬಂದಿಯನ್ನೇ ನಿಂದಿಸಿದ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ನೆರಕರೆಯವರ ಮೇಲೆ ಕ್ಷುಲ್ಲಕ ವಿಚಾರಕ್ಕೆ ದೂರು ನೀಡಲು ಪೊಲೀಸ್ ಠಾಣೆಗೆ ಹೋದಾತ ಜೈಲು ಪಾಲಾಗಿದ್ದಾನೆ.







