ನವದೆಹಲಿ: Agumbe Ghat ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ–169ಎ ರಸ್ತೆಯನ್ನು ಎರಡು ಲೇನ್ ರಸ್ತೆ ಹಾಗೂ ಪಾದಚಾರಿ ಮಾರ್ಗ ಸಹಿತ ವಿಸ್ತರಿಸುವ ಉದ್ದೇಶದಿಂದ ಕೇಂದ್ರ ಭೂಸಾರಿಗೆ ಇಲಾಖೆ ಕಾರ್ಯಸಾಧ್ಯತಾ ಅಧ್ಯಯನ ಮತ್ತು ವಿವರವಾದ ಯೋಜನಾ ವರದಿ (ಡಿಪಿಆರ್) ತಯಾರಿಸಲು ಟೆಂಡರ್ ಆಹ್ವಾನಿಸಿದೆ.
ಡಿಪಿಆರ್ ವ್ಯಾಪ್ತಿಯಲ್ಲಿ ಸುರಂಗ ವಿನ್ಯಾಸ ತಜ್ಞರು ಮತ್ತು ಹಿರಿಯ ಭೂ-ಭೌತಶಾಸ್ತ್ರಜ್ಞರ ತೊಡಗಿಸಿಕೊಳ್ಳುವಿಕೆ ಕಡ್ಡಾಯವಾಗಿದ್ದು, ಆಗುಂಬೆ ಘಾಟ್ನಲ್ಲಿ ಸುರಂಗ ಮಾರ್ಗ ನಿರ್ಮಾಣದ ಆಯ್ಕೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ವಿಶೇಷ ಆದ್ಯತೆ ನೀಡಲಾಗಿದೆ. ಭೂ-ತಾಂತ್ರಿಕ ಪರಿಶೀಲನೆಗೆ ಪ್ರತ್ಯೇಕ ಬಜೆಟ್ ನಿಬಂಧನೆ ಕೂಡ ಒಳಗೊಂಡಿದೆ.
ಸಂಸದ B. Y. Raghavendra ಅವರು ಪ್ರತಿಕ್ರಿಯಿಸಿ, “ದಶಕಗಳಿಂದ ಬಾಕಿ ಉಳಿದಿದ್ದ ಆಗುಂಬೆ ಘಾಟ್ ಮೇಲ್ದರ್ಜೆಗೇರಿಸುವ ಜನರ ಬೇಡಿಕೆಗೆ ಇದು ಮಹತ್ವದ ಹೆಜ್ಜೆ” ಎಂದಿದ್ದಾರೆ.
ಪರಿಸರ ಸೂಕ್ಷ್ಮ ಪ್ರದೇಶವಾಗಿರುವ ಆಗುಂಬೆ ಘಾಟ್ನಲ್ಲಿ ಸುರಕ್ಷತೆ ಹೆಚ್ಚಿಸುವುದರ ಜೊತೆಗೆ ಪಶ್ಚಿಮ ಘಟ್ಟದ ಪ್ರಕೃತಿ ಸಂವೇದನಾಶೀಲತೆಗೆ ಗೌರವ ನೀಡಿ ವೈಜ್ಞಾನಿಕ ರೀತಿಯಲ್ಲಿ ರಸ್ತೆ ಅಭಿವೃದ್ಧಿ ಕೈಗೊಳ್ಳುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಈ ಯೋಜನೆ ಜಾರಿಗೆ ಬಂದರೆ ಮಲೆನಾಡು–ಕರಾವಳಿ ಸಂಪರ್ಕ ಸುಧಾರಿಸಿ, ಸ್ಥಳೀಯ ನಿವಾಸಿಗಳು, ರೈತರು, ಪ್ರವಾಸೋದ್ಯಮ ಹಾಗೂ ತುರ್ತು ಸೇವೆಗಳಿಗೆ ಗಣನೀಯ ಲಾಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಮುಂದಿನ ಹಂತಗಳಲ್ಲಿ ಯೋಜನೆ ಸುಗಮವಾಗಿ ಸಾಗಲು ಕೇಂದ್ರದೊಂದಿಗೆ ಸಮನ್ವಯ ಮುಂದುವರಿಸಲಾಗುವುದು. ಭೂಸ್ವಾಧೀನ ಮತ್ತು ಕಾನೂನು ಪ್ರಕ್ರಿಯೆಗಳಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.







