Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀಮತಿ ಯಶೋದಾ ಕೇಶವ್ ಇವರ ಮಡಿಲಿಗೆ ವೀರ ರಾಣಿ ಅಬ್ಬಕ್ಕ ಪ್ರಶಸ್ತಿಯ ಗರಿ..!

Dhrishya News by Dhrishya News
16/02/2026
in ಸುದ್ದಿಗಳು
0
ಶ್ರೀಮತಿ ಯಶೋದಾ ಕೇಶವ್ ಇವರ ಮಡಿಲಿಗೆ ವೀರ ರಾಣಿ ಅಬ್ಬಕ್ಕ ಪ್ರಶಸ್ತಿಯ ಗರಿ..!
0
SHARES
37
VIEWS
Share on FacebookShare on Twitter

ಉಡುಪಿ: ಫೆಬ್ರವರಿ 16:ತುಳುನಾಡ ಧ್ವನಿ ಅಂತರ್ಜಾಲ ಪತ್ರಿಕೆಯ ಮುಖ್ಯಸ್ಥೆಯಾದ ಶ್ರೀಮತಿ ಯಶೋದಾ ಕೇಶವ್ ಇವರು ಪ್ರತಿಷ್ಠಿತ ವೀರ ರಾಣಿ ಅಬ್ಬಕ್ಕ ಗೌರವ ಪುರಸ್ಕಾರಕ್ಕೆ ಆಯ್ಕೆ ಆಗಿದ್ದಾರೆ.

ABRSM-KRMSS, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ಮಂಗಳೂರು ವಿಭಾಗ) ಆಯೋಜಿಸಿರುವ “ಅಬ್ಬಕ್ಕ 500 ಪ್ರೇರಣಾದಾಯಿ 100 ಉಪನ್ಯಾಸಗಳ ಸರಣಿ” ಕಾರ್ಯಕ್ರಮದ ಅಂಗವಾಗಿ ಈ ಗೌರವ ಪುರಸ್ಕಾರವನ್ನು ನೀಡಲಾಗುತ್ತಿದೆ. ಸಮಾಜಮುಖಿ ಕಾರ್ಯಗಳು ಹಾಗೂ ಪರಿಸರ ಸಂರಕ್ಷಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಮಹಿಳೆಯರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಶ್ರೀಮತಿ ಯಶೋದಾ ಕೇಶವ್ ಇವರಿಗೆ ತುಳು ಸಾಹಿತ್ಯ ಸಂಘಟನೆಯಲ್ಲಿ ತೊಡಗಿಸಿಕೊಂಡು ಅನನ್ಯ ಸೇವೆ, ಸಾಧನೆಗಾಗಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ.

ಇದೇ ಬರುವ ಫೆಬ್ರವರಿ 16 ತಾರೀಕಿನಂದು ಪುತ್ತೂರು ನೆಹರು ನಗರದ ವಿವೇಕಾನಂದ ಕಾಲೇಜು ಆವರಣದಲ್ಲಿ ನಡೆಯಲಿರುವ ರಾಣಿ ಅಬ್ಬಕ್ಕ 500 ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದ 100 ನೇ ಸಂಭ್ರಮ ಕಾರ್ಯಕ್ರಮದ ಪ್ರಯುಕ್ತ ನಡೆಯಲಿರುವ ಸಾಧಕ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಈ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ..

ಉಡುಪಿ ಜಿಲ್ಲೆಯ ಬಹುಮುಖ ಪ್ರತಿಭೆ 

ಯಶೋದಾ ಕೇಶವ್ ಇವರು ತುಳುನಾಡ ಧ್ವನಿ ಅಂತರ್ಜಾಲ ಪತ್ರಿಕೆ ಹಾಗೂ ಯುಟ್ಯೂಬ್ ಚಾನೆಲ್ ಮೂಲಕ ತುಳು ಭಾಷೆ ಸಂಸ್ಕೃತಿಯ ಬೆಳವಣಿಗೆಗೆ ಶ್ರಮೀಸುತ್ತಿರುವ ಧೀರ ಮಹಿಳೆ.ತುಳು ಭಾಷೆಗೆ ಯಾವುದೇ ರೀತಿಯ ಧ್ವನಿ ಎತ್ತಲು ಹಿಂಜರಿಯದೇ ನೇರವಾಗಿ ಪ್ರಶ್ನಿಸುವ ಸ್ವಭಾವ ಇವರದಾಗಿದೆ.ಯಾವುದೇ ದೊಡ್ಡ ವೇದಿಕೆ ಇರಲಿ ಇವರು ಮೊದಲು ಪ್ರಾಶಸ್ತ್ಯ ಕೊಡುವುದು ತುಳು ಭಾಷೆಗೆ.ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡು, ಸಮಾಜಸೇವೆಗೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದ್ದಾರೆ.. ಸಿರಿ ತುಳುವ ಚಾವಡಿ, ತುಳುಕೂಟ ಉಡುಪಿ, ಟೈಮ್ಸ್ ಆಫ್ ಕುಡ್ಲ ತುಳು ಪತ್ರಿಕೆ,ತುಳು ವರ್ಲ್ಡ್ ಫೌಂಡೇಶನ್, ರೋಟರಿ,ಬಿಎನ್ ಐ, ಸಂಸ್ಥೆ, ಸರ್ವದಾ ಯುವ ಸಂಘ, ಮೊಗವೀರ ಯುವ ಸಂಘಟನೆ, ಗಣೇಶೋತ್ಸವ ಸಮಿತಿ, ಹಾಗೆಯೇ ಹಲವಾರು ಧಾರ್ಮಿಕ ಸಾಮಾಜಿಕ ಕ್ಷೇತ್ರಗಳಲ್ಲಿ ತನ್ನದೇ ಆದ ಸೇವೆಯನ್ನು ಸಲ್ಲಿಸುತ್ತಿದ್ದಾರೆ..ಇವರು ಹಲವಾರು ತುಳು ನಾಟಕಗಳಲ್ಲಿ ಅಭಿನಯಿಸಿ ಜನಮನ ಗೆದ್ದಿದ್ದಾರೆ..ಇವರು ತುಳು ಭಾಷೆಯ ಉತ್ತಮ ನಿರೂಪಕಿ ಕೂಡಾ..ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡು ಉಡುಪಿ ಭಾಗದಲ್ಲಿ ಮಹಿಳೆಯರಿಗೆ ಮಾದರಿಯಾಗಿದ್ದಾರೆ..ಇವರ ಕಾರ್ಯವೈಖರಿಗೆ ವೀರ ರಾಣಿ ಅಬ್ಬಕ್ಕ ಪ್ರಶಸ್ತಿಯ ಗೌರವ ಇನ್ನಷ್ಟು ಉತ್ತುಂಗಕ್ಕೆ ಏರಲು ಅನುವು ಮಾಡಿಕೊಟ್ಟಿದೆ.

Previous Post

ಮೀನು ಸಾಗಾಟದ ಕ್ಯಾಂಟರ್ ಶಾಲಾ ಬಸ್‌ಗೆ ಡಿಕ್ಕಿ: ಏಳು ವಿದ್ಯಾರ್ಥಿಗಳಿಗೆ ಗಾಯ…!

Next Post

ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ 13ನೇ ಪ್ರತಿಷ್ಠಾ ವರ್ಧಂತಿ ಸಂಭ್ರಮ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ 13ನೇ ಪ್ರತಿಷ್ಠಾ ವರ್ಧಂತಿ ಸಂಭ್ರಮ….!

ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ 13ನೇ ಪ್ರತಿಷ್ಠಾ ವರ್ಧಂತಿ ಸಂಭ್ರಮ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026
imunify-bot-check