ಬೆಂಗಳೂರು, ಫೆ. 18: ಸಾಮಾಜಿಕ ಜಾಲತಾಣಗಳಲ್ಲಿ ನಂದಿನಿ ಉತ್ಪನ್ನ ಬಳಕೆ ಕ್ಯಾನ್ಸರ್ಗೆ ಕಾರಣವಾಗುತ್ತದೆ ಎಂಬ ಅಪಪ್ರಚಾರ ನಡೆಯುತ್ತಿರುವ ಕುರಿತು ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ನಂದಿನಿ ಸಂಸ್ಥೆ ಗುಣಮಟ್ಟಕ್ಕೆ ಹೆಸರುವಾಸಿಯಾಗಿದ್ದು, ಉತ್ಪಾದನಾ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಕಲಬೆರಕೆ ನಡೆಯುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಕೆಲವು ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ ಹಬ್ಬಿಸುತ್ತಿದ್ದಾರೆ.
ಈ ವಿಚಾರವನ್ನು ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.ಖಾಸಗಿ ಕಂಪನಿಗಳ ಪಾತ್ರದ ಕುರಿತು ಪ್ರಶ್ನಿಸಿದಾಗ, ಸ್ಪರ್ಧಾತ್ಮಕ ವಾತಾವರಣದಲ್ಲಿ ಇಂತಹ ಅಪಪ್ರಚಾರ ನಡೆಯುವುದು ಅಸಾಮಾನ್ಯವಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ಗ್ರಾಹಕರಿಗೂ ರೈತರಿಗೆ ನ್ಯಾಯ ಮಾಡುವ ಬದ್ಧತೆಯೊಂದಿಗೆ ನಂದಿನಿ ಮುಂದುವರಿಯಲಿದೆ ಎಂದು ಭರವಸೆ ನೀಡಿದರು.







