ಉಡುಪಿ, ಫೆ. 19: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಶೀರೂರು ಮಠದ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಖ್ಯಾತ ಚಲನಚಿತ್ರ ನಟಿ ಭಾರತಿ ವಿಷ್ಣುವರ್ಧನ್ ಅವರು ಗೌರವಪೂರ್ವಕವಾಗಿ ಭೇಟಿ ಮಾಡಿದರು.

ಸರ್ವಜ್ಞ ಪೀಠದಲ್ಲಿ ಶ್ರೀಗಳ ದರ್ಶನ ಪಡೆದ ನಟಿ, ಆಶೀರ್ವಾದ ಹಾಗೂ ಫಲ-ಮಂತ್ರಾಕ್ಷತೆ ಸ್ವೀಕರಿಸಿದರು. ಬಳಿಕ ಅವರು ಶ್ರೀ ಕೃಷ್ಣ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ದರ್ಶನ ಮಾಡಿದರು.
ಭೇಟಿಯ ವೇಳೆ ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಮತ್ತು ಮಧೂರು ನಾರಾಯಣ ಶರಳಾಯ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು. ಭೇಟಿ ಸೌಹಾರ್ದಯುತ ಹಾಗೂ ಭಕ್ತಿಭಾವದಿಂದ ನೆರವೇರಿತು.







