ಉಡುಪಿ, ಫೆ. 19: ಉಡುಪಿ ನಗರದ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವದ ಅಂಗವಾಗಿ ರಥಾವರೋಹಣ ಮಹೋತ್ಸವವು ಗುರುವಾರ ಭಕ್ತಿಭಾವ ಹಾಗೂ ಧಾರ್ಮಿಕ ಸಂಭ್ರಮದ ನಡುವೆ ನೆರವೇರಿತು.

ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ದಿವ್ಯ ಸಾನ್ನಿಧ್ಯ ವಹಿಸಿ ಧಾರ್ಮಿಕ ವಿ
ಧಿವಿಧಾನಗಳಿಗೆ ಚಾಲನೆ ನೀಡಿದರು. ವೇದಘೋಷ, ಮಂಗಳವಾದ್ಯಗಳ ನಾದ ಮತ್ತು ಭಕ್ತರ ಜಯಘೋಷಗಳ ನಡುವೆ ರಥಾವರೋಹಣ ಕರ್ಮ ನಡೆಯಿತು.

ರಥೋತ್ಸವದ ಪ್ರಯುಕ್ತ ವಿಶೇಷ ಪೂಜೆಗಳು, ಮಹಾಮಂಗಳಾರತಿ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮಗಳು ಜರುಗಿದವು. ವಿವಿಧ ಭಾಗಗಳಿಂದ ಆಗಮಿಸಿದ ಭಕ್ತರು ದೇವರ ದರ್ಶನ ಪಡೆದು ಆಶೀರ್ವಾದ ಪಡೆದರು. ದೇವಸ್ಥಾನ ಪರಿಸರವು ವಿದ್ಯುತ್ ದೀಪಾಲಂಕಾರದಿಂದ ಅಲಂಕರಿಸಲ್ಪಟ್ಟು ಹಬ್ಬದ ವಾತಾವರಣ ಮೂಡಿಸಿತು.






