Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದಿಂದ ಡಾ. ತಲ್ಲೂರು ಅವರಿಗೆ ರಂಗಮಹೋತ್ಸವ ಗೌರವ

Dhrishya News by Dhrishya News
21/02/2026
in ಮುಖಪುಟ
0
ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದಿಂದ ಡಾ. ತಲ್ಲೂರು ಅವರಿಗೆ ರಂಗಮಹೋತ್ಸವ ಗೌರವ
0
SHARES
8
VIEWS
Share on FacebookShare on Twitter

ಉಡುಪಿ : ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ರಾಷ್ಟ್ರೀಯ ನಾಟಕ ಶಾಲೆ ನವದೆಹಲಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇವರ ಸಂಯುಕ್ತ ಸಹಕಾರದಲ್ಲಿ ಬೆಂಗಳೂರಿನ ಕಲಾಗ್ರಾಮದಲ್ಲಿ ಫೆ.1ರಿಂದ 6ರವರೆಗೆ ನಡೆದ ‘ಭಾರತ ರಂಗ ಮಹೋತ್ಸವ -2026 ಹಾಗೂ ರಂಗ ಪರಿಷೆ ‘ ಕಾರ್ಯಕ್ರಮದಲ್ಲಿ ರಂಗಭೂಮಿ ಉಡುಪಿ ಸಂಸ್ಥೆಯ ಅಧ್ಯಕ್ಷರು ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿರುವ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಸಮಾಜ ಸೇವೆ, ಯಕ್ಷಗಾನ, ಜಾನಪದ, ಧಾರ್ಮಿಕ ಮೊದಲಾದ ರಂಗಗಳಲ್ಲಿ ನೀಡಿದ ಅನುಪಮ ಸೇವೆಯನ್ನು ಗುರುತಿಸಿ, ಪ್ರಶಸ್ತಿ ನೀಡಿ ಗೌರವಿಸಲಾಯಿತು.

 

ಈ ಸಂದರ್ಭದಲ್ಲಿ ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಡಾ. ಕೆ. ವಿ ನಾಗರಾಜ ಮೂರ್ತಿ, ಕಲಾವಿದರಾದ ಸಿಹಿಕಹಿ ಚಂದ್ರು, ಸಿಹಿಕಹಿ ಗೀತಾ, ಚಲನಚಿತ್ರ ನಿರ್ದೇಶಕ ಕೆ.ಶಿವರುದ್ರಯ್ಯ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಸಂಚಾಲಕರಾದ ರವೀಂದ್ರ ನಾಥ್ ಸಿರಿವರ, ಡಾ. ಟಿ. ಎಚ್. ಲವ ಕುಮಾರ್, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾದ ಶಿವನಾಯಕ ದೊರೆ, ಕರ್ನಾಟಕ ನಾಟಕ ಅಕಾಡೆಮಿಯ ರಿಜಿಸ್ಟ್ರಾರ್ ಬಿ. ನೀಲಮ್ಮ, ಚಾಂದ್‌ಪಾಷಾ, ಭಾರತ ರಂಗ ಮಹೋತ್ಸವದ ಸಂಚಾಲಕಿ ಡಾ. ವೀಣಾ ಶರ್ಮ ಭೂಸನೂರಮಠ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

 

ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಲಯನ್ಸ್ ಸಂಸ್ಥೆಯಲ್ಲಿ 35 ವರ್ಷಗಳಿಂದ ವಿವಿಧ ಹುದ್ದೆಗಳನ್ನು ಅಲಂಕರಿಸಿ 2018ರಲ್ಲಿ ಅಂತರಾಷ್ಟ್ರೀಯ ಲಯನ್ಸ್ ಜಿಲ್ಲೆ 317ಸಿಯ ಗವರ್ನರ್ ಆಗಿ ಲಯನ್‌ಗಳಿಗೆ ಮಾದರಿಯಾಗಿದ್ದಾರೆ. ಯಕ್ಷಗಾನ ಕಲಾರಂಗದ ಅಧ್ಯಕ್ಷರಾಗಿ 7 ವರ್ಷಗಳ ಕಾಲ ಮುನ್ನಡೆಸಿ ವಿದ್ಯಾಪೋಷಕ್‌ನಂತಹ ಸಾಮಾಜಿಕ ಕಾರ್ಯಗಳನ್ನು ನಿಭಾಯಿಸಿದರು. ಕರ್ನಾಟಕ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷರಾಗಿ ಜಾನಪದ ಕಲೆ, ಕಲಾವಿದರನ್ನು ಗುರುತಿಸುವ ಕಾರ್ಯ ಮಾಡಿದ್ದಾರೆ. 15 ವರ್ಷಗಳಿಂದ ರಂಗಭೂಮಿ ಉಡುಪಿ ಸಂಸ್ಥೆಯ ಅಧ್ಯಕ್ಷರಾಗಿ ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಇದೀಗ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ಯಕ್ಷಗಾನ ಕಲೆಯ ಬೆಳವಣಿಗೆಗೆ ವಿಶೇಷ ಕೊಡುಗೆ ನೀಡುತ್ತಿದ್ದಾರೆ. ಮಕ್ಕಳಲ್ಲಿ ನೈತಿಕ ಸಂಸ್ಕಾರವನ್ನು ಬೆಳೆಸುವ ನಿಟ್ಟಿನಲ್ಲಿ 400ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ, 40,000ಕ್ಕೂ ಅಧಿಕ ನೈತಿಕ ಮೌಲ್ಯಗಳನ್ನು ಸಾರುವ ಪುಸ್ತಕಗಳನ್ನು ಹಂಚಿ ಸುಸಂಸ್ಕೃತ ಸಮಾಜ ನಿರ್ಮಾಣದ ಕನಸು ಕಂಡಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಕರ್ನಾಟಕ ಜಾನಪದ ಅಕಾಡೆಮಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

Previous Post

ಬೆಂಗಳೂರಿನ ಪ್ರತಿಷ್ಠಿತ ಇಂಡಸ್ ಬಿಸಿನೆಸ್ ಅಕಾಡೆಮಿಯ ‘ಇಕೋಫ್ಲುಯೆನ್ಸ್ 3.0’ ಅಂತರರಾಷ್ಟ್ರೀಯ ಸಮ್ಮೇಳನ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದಿಂದ ಡಾ. ತಲ್ಲೂರು ಅವರಿಗೆ ರಂಗಮಹೋತ್ಸವ ಗೌರವ

ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದಿಂದ ಡಾ. ತಲ್ಲೂರು ಅವರಿಗೆ ರಂಗಮಹೋತ್ಸವ ಗೌರವ

21/02/2026
ಬೆಂಗಳೂರಿನ ಪ್ರತಿಷ್ಠಿತ ಇಂಡಸ್ ಬಿಸಿನೆಸ್ ಅಕಾಡೆಮಿಯ ‘ಇಕೋಫ್ಲುಯೆನ್ಸ್ 3.0’ ಅಂತರರಾಷ್ಟ್ರೀಯ ಸಮ್ಮೇಳನ….!

ಬೆಂಗಳೂರಿನ ಪ್ರತಿಷ್ಠಿತ ಇಂಡಸ್ ಬಿಸಿನೆಸ್ ಅಕಾಡೆಮಿಯ ‘ಇಕೋಫ್ಲುಯೆನ್ಸ್ 3.0’ ಅಂತರರಾಷ್ಟ್ರೀಯ ಸಮ್ಮೇಳನ….!

21/02/2026
ಏಪ್ರಿಲ್ 1ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಸ್ಥಗಿತ? ಎನ್‌ಎಚ್‌ಎಐ ಡಿಜಿಟಲ್ ವ್ಯವಸ್ಥೆಗೆ ಪೂರ್ಣ ಬದಲಾವಣೆ ಯೋಚನೆ….!

ಏಪ್ರಿಲ್ 1ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಸ್ಥಗಿತ? ಎನ್‌ಎಚ್‌ಎಐ ಡಿಜಿಟಲ್ ವ್ಯವಸ್ಥೆಗೆ ಪೂರ್ಣ ಬದಲಾವಣೆ ಯೋಚನೆ….!

21/02/2026
ರೈಲ್ವೆ ನೇಮಕಾತಿ: 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅವಕಾಶ….!

ರೈಲ್ವೆ ನೇಮಕಾತಿ: 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅವಕಾಶ….!

21/02/2026

Recent News

ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದಿಂದ ಡಾ. ತಲ್ಲೂರು ಅವರಿಗೆ ರಂಗಮಹೋತ್ಸವ ಗೌರವ

ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದಿಂದ ಡಾ. ತಲ್ಲೂರು ಅವರಿಗೆ ರಂಗಮಹೋತ್ಸವ ಗೌರವ

21/02/2026
ಬೆಂಗಳೂರಿನ ಪ್ರತಿಷ್ಠಿತ ಇಂಡಸ್ ಬಿಸಿನೆಸ್ ಅಕಾಡೆಮಿಯ ‘ಇಕೋಫ್ಲುಯೆನ್ಸ್ 3.0’ ಅಂತರರಾಷ್ಟ್ರೀಯ ಸಮ್ಮೇಳನ….!

ಬೆಂಗಳೂರಿನ ಪ್ರತಿಷ್ಠಿತ ಇಂಡಸ್ ಬಿಸಿನೆಸ್ ಅಕಾಡೆಮಿಯ ‘ಇಕೋಫ್ಲುಯೆನ್ಸ್ 3.0’ ಅಂತರರಾಷ್ಟ್ರೀಯ ಸಮ್ಮೇಳನ….!

21/02/2026
ಏಪ್ರಿಲ್ 1ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಸ್ಥಗಿತ? ಎನ್‌ಎಚ್‌ಎಐ ಡಿಜಿಟಲ್ ವ್ಯವಸ್ಥೆಗೆ ಪೂರ್ಣ ಬದಲಾವಣೆ ಯೋಚನೆ….!

ಏಪ್ರಿಲ್ 1ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಸ್ಥಗಿತ? ಎನ್‌ಎಚ್‌ಎಐ ಡಿಜಿಟಲ್ ವ್ಯವಸ್ಥೆಗೆ ಪೂರ್ಣ ಬದಲಾವಣೆ ಯೋಚನೆ….!

21/02/2026
ರೈಲ್ವೆ ನೇಮಕಾತಿ: 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅವಕಾಶ….!

ರೈಲ್ವೆ ನೇಮಕಾತಿ: 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅವಕಾಶ….!

21/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved