ಉಡುಪಿ, ಫೆ. 23:ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಕೃಷಿ ಉದ್ದೇಶಕ್ಕಾಗಿ ಮಣ್ಣು ಸಾಗಾಣಿಕೆ ವೇಳೆ ಟಿಪ್ಪರ್ ವಾಹನಗಳನ್ನು ಆಡ್ಡಗಟ್ಟುತ್ತಿರುವ ಘಟನೆಗಳ ಹಿನ್ನೆಲೆಯಲ್ಲಿ ನೈಜ ರೈತರು ಸಂಕಷ್ಟಕ್ಕೆ ಸಿಲುಕುತ್ತಿರುವ ಬಗ್ಗೆ ಮಹತ್ವದ ಸಭೆ ನಡೆಯಿತು.
ಇಂದು (ಫೆ. 23, 2026) ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ವಿಷಯವನ್ನು ಪ್ರಸ್ತಾಪಿಸಿ ಚರ್ಚಿಸಿದರು. ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ಮಣ್ಣು ಸಾಗಾಣಿಕೆಗೆ ಅನಗತ್ಯ ಅಡ್ಡಿ ಉಂಟಾಗದಂತೆ ಕ್ರಮ ಕೈಗೊಳ್ಳಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಅಪರ ಜಿಲ್ಲಾಧಿಕಾರಿ ಅಬಿದ್ ಗಡ್ಯಾಲ್ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ವಿಂಧ್ಯಾ ಸೇರಿದಂತೆ ಸಂಬಂಧಿತ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು ಸಮಸ್ಯೆಗಳ ಕುರಿತು ಚರ್ಚಿಸಿ ಸೂಕ್ತ ಪರಿಹಾರ ಕ್ರಮಗಳ ಬಗ್ಗೆ ಮಾತುಕತೆ ನಡೆಸಿದರು.







