ಬೆಂಗಳೂರು, ಫೆ. 25: ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ–2ಎ ಅಡಿಯಲ್ಲಿ ಬರುವ ವಿಶ್ವಕರ್ಮ ಸಮುದಾಯದ (ವಿಶ್ವಕರ್ಮ, ಬಡಿಗೇರ, ಪತ್ತಾರ, ಕಮ್ಮಾರ) ಜನರ ಆರ್ಥಿಕ ಅಭಿವೃದ್ದಿಗಾಗಿ 2025-26ನೇ ಸಾಲಿನ “ಆಹಾರ ವಾಹಿನಿ (ಆಹಾರ ಕಿಯೋಸ್ಕ್)” ಯೋಜನೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿಮಳಿಗೆಗಳನ್ನು ನಾಲ್ಕು ಚಕ್ರಗಳ ಇ-ಗೂಡ್ಸ್ ವಾಹನಗಳಲ್ಲಿ ಅಗತ್ಯ ಬದಲಾವಣೆಗಳೊಂದಿಗೆ ಸಿದ್ಧಪಡಿಸಿ ಫಲಾನುಭವಿಗಳಿಗೆ ವಿತರಿಸಲಾಗುತ್ತದೆ. ವಾಹನ ಖರೀದಿಗೆ ನಿಗಮದಿಂದ ರೂ. 3 ಲಕ್ಷಗಳ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತವನ್ನು ಬ್ಯಾಂಕ್/ಹಣಕಾಸು ಸಂಸ್ಥೆಗಳ ಸಾಲದ ಮೂಲಕ ವ್ಯವಸ್ಥೆ ಮಾಡಿಕೊಳ್ಳಬಹುದು.
ನಗರ ಪ್ರದೇಶದ ಹುಬ್ಬಳ್ಳಿ-ಧಾರವಾಡ ಪೂರ್ವ ಹಾಗೂ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರಗಳ ಅರ್ಹ ವಿಶ್ವಕರ್ಮ ಸಮುದಾಯದವರು ಈ ಯೋಜನೆಯ ಸೌಲಭ್ಯ ಪಡೆಯಬಹುದು.
ಆಸಕ್ತ ಅರ್ಜಿದಾರರು ಮಾರ್ಚ್ 7, 2026ರೊಳಗಾಗಿ ನಿಗಮದ ಅಧಿಕೃತ ಜಾಲತಾಣ https://kmcdc.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ 0836-2957829 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







