ಉಡುಪಿ, ಫೆ.26: ಉಡುಪಿಯ ಆದಿಮ ಕಲಾ ಟ್ರಸ್ಟ್ ನೀಡುವ ಪ್ರತಿಷ್ಠಿತ ‘ಆದಿಮ ಕಲಾ ರತ್ನ’ ರಾಷ್ಟ್ರೀಯ ಪ್ರಶಸ್ತಿಗೆ ಈ ವರ್ಷ ಪ್ರಸಿದ್ಧ ಭಾರತೀಯ ಪುರಾತತ್ತ್ವ ತಜ್ಞ ಡಾ. ರವೀಂದ್ರ ಕೋರಿಶೆಟ್ಟರ್ ಅವರನ್ನು ಆಯ್ಕೆ ಮಾಡಲಾಗಿದೆ.
ಟ್ರಸ್ಟ್ನ ವಾರ್ಷಿಕೋತ್ಸವದ ಅಂಗವಾಗಿ ನೀಡಲಾಗುವ ಈ ಪ್ರಶಸ್ತಿಯೊಂದಿಗೆ ₹25 ಸಾವಿರ ನಗದು ಬಹುಮಾನವೂ ಒಳಗೊಂಡಿದೆ ಎಂದು ಸಂಸ್ಥೆಯ ಸ್ಥಾಪಕ ಸಂಚಾಲಕ ಪ್ರೊ. ಟಿ.ಮುರುಗೇಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







