ಕಾರ್ಕಳ, ಫೆ. 26: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಕಾರ್ಕಳ ತಾಲ್ಲೂಕಿಗೆ ಭೇಟಿ ನೀಡಿ, ವಿವಿಧ ಇಲಾಖೆಗಳಡಿ ಪೂರ್ಣಗೊಂಡಿರುವ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಮಧ್ಯಾಹ್ನ 1 ಗಂಟೆಗೆ ಹೆಲಿಕಾಪ್ಟರ್ ಮೂಲಕ ಕಾರ್ಕಳ ತಾಲ್ಲೂಕು ಕ್ರೀಡಾಂಗಣದ ಹೆಲಿಪ್ಯಾಡ್ಗೆ ಸಿಎಂ ಆಗಮಿಸಿದರು. ಈ ವೇಳೆ ಸಚಿವರಾದ ಡಾ. ಎಚ್.ಸಿ. ಮಹಾದೇವಪ್ಪ, ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಮಧು ಬಂಗಾರಪ್ಪ ಅವರು ಸಹ ಉಪಸ್ಥಿತರಿದ್ದರು.
ಭೇಟಿಯ ಅಂಗವಾಗಿ ಕಾಬೆಟ್ಟಿನಲ್ಲಿ ನಿರ್ಮಿತ ‘ಡಾ. ಬಿ.ಆರ್. ಅಂಬೇಡ್ಕರ್ ಭವನ’ವನ್ನು ಮುಖ್ಯಮಂತ್ರಿ ಉದ್ಘಾಟಿಸಿದರು. ಬಳಿಕ ಕುಕ್ಕುಂದೂರಿನ ಕಿಸಾನ್ ಸಭಾ ಟ್ರಸ್ಟ್ ವತಿಯಿಂದ ಸ್ಥಾಪಿತ ಮಹಾತ್ಮಾ ಗಾಂಧಿ ವಸತಿ ಪ್ರೌಢಶಾಲೆಯ ‘ಕಿಸಾನ್ ಸಭಾ ಸಭಾಂಗಣ’ವನ್ನು ಲೋಕಾರ್ಪಣೆಗೊಳಿಸಿ, ಶಾಲೆಯ 35ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಸಾರ್ವಜನಿಕ ಕಾರ್ಯಕ್ರಮಗಳ ನಂತರ ಸಿಎಂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.
ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆ ತಾಲ್ಲೂಕಿನಾದ್ಯಂತ ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
.







