ಸುಬ್ರಹ್ಮಣ್ಯ, ಫೆ.28:ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ಅವರು ಮಾರ್ಚ್ 1ರಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಸಂಜೆ 5.20ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಬಿಳಿನೆಲೆ ಹೆಲಿಪ್ಯಾಡ್ನಲ್ಲಿ ಇಳಿಯಲಿದ್ದು, ಅಲ್ಲಿಂದ ರಸ್ತೆ ಮಾರ್ಗವಾಗಿ ದೇವಸ್ಥಾನಕ್ಕೆ ತೆರಳಲಿದ್ದಾರೆ. ಸಂಜೆ 6 ಗಂಟೆಗೆ ವಿಶೇಷ ಪೂಜೆಯಲ್ಲಿ ಭಾಗವಹಿಸಲಿದ್ದಾರೆ.
ಅಂದು ರಾತ್ರಿ ಸುಬ್ರಹ್ಮಣ್ಯದ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಲಿದ್ದು, ಮಾರ್ಚ್ 2ರಂದು ಬೆಳಿಗ್ಗೆ 6 ಗಂಟೆಗೆ ಮತ್ತೊಮ್ಮೆ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮಧ್ಯಾಹ್ನ 2.30ಕ್ಕೆ ಬಿಳಿನೆಲೆ ಹೆಲಿಪ್ಯಾಡ್ಗೆ ತೆರಳಿ, 3 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.
ಪ್ರವಾಸದ ಅವಧಿಯಲ್ಲಿ ಅವರಿಗೆ ಝಡ್ ಪ್ಲಸ್ ಭದ್ರತೆ ಕಲ್ಪಿಸಲಾಗುತ್ತದೆ.







