ಬೈಂದೂರು, ಮಾ. 3: ಬೆಳಗಿನ ವಾಕಿಂಗ್ಗೆ ತೆರಳಿದ್ದ ವ್ಯಕ್ತಿಯೊಬ್ಬರು ದಾರಿಯಲ್ಲಿ ಅಸ್ವಸ್ಥಗೊಂಡು ಕುಸಿದು ಬಿದ್ದ ಬಳಿಕ ಚೇತರಿಸಿಕೊಂಡು ಮನೆಗೆ ಬಂದರೂ, ಸ್ವಲ್ಪ ಸಮಯದಲ್ಲೇ ಮತ್ತೊಮ್ಮೆ ಕುಸಿದು ಬಿದ್ದು ಮೃತಪಟ್ಟ ಘಟನೆ ಉಪ್ಪುಂದ ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ.
ಉಪ್ಪುಂದ ಜನತಾ ಕಾಲನಿಯ ಪುಟ್ಟಮನೆ ನಿವಾಸಿ ಸೀತಾರಾಮ ಖಾರ್ವಿ (52) ಮೃತರು.
ಮಾ.2ರಂದು ಬೆಳಗ್ಗೆ ಎಂದಿನಂತೆ ವಾಕಿಂಗ್ಗೆ ತೆರಳಿದ್ದ ಅವರು ದಾರಿಮಧ್ಯೆ ಏಕಾಏಕಿ ಕುಸಿದು ಬಿದ್ದಿದ್ದು, ಕೆಲವೇ ಕ್ಷಣಗಳಲ್ಲಿ ಚೇತರಿಸಿಕೊಂಡು ಮನೆಗೆ ವಾಪಸ್ಸಾಗಿದ್ದರು ಎನ್ನಲಾಗಿದೆ. ಮನೆಗೆ ಬಂದ ಬಳಿಕ ಕುಟುಂಬದವರಿಗೆ ನಡೆದ ವಿಚಾರವನ್ನು ತಿಳಿಸಿ ಮಾತನಾಡುತ್ತಿದ್ದ ವೇಳೆ ಮತ್ತೆ ಅಸ್ವಸ್ಥಗೊಂಡು ನೆಲಕ್ಕುರುಳಿದರು.
ತಕ್ಷಣವೇ ಅವರನ್ನು ಬೈಂದೂರು ಸಮುದಾಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರು ಪರಿಶೀಲಿಸಿ ಮೃತಪಟ್ಟಿರುವುದಾಗಿ ದೃಢಪಡಿಸಿದರು. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.







