ಉಡುಪಿ:ಮಾರ್ಚ್ 03:ಸಿಐಟಿಯು ನೇತೃತ್ವದಲ್ಲಿ ಇಂದು ರಾಜ್ಯಾದ್ಯಂತ 2026ರ ರಾಜ್ಯ ಕರಡು ಕಾರ್ಮಿಕ ನಿಯಮಗಳ ವಿರುದ್ಧ ಕಾರ್ಮಿಕ ಸಂಘಟನೆಗಳು ಆಕ್ಷೇಪಣೆ ಮತ್ತು ಸಲಹೆಗಳ ಪತ್ರ ಸಲ್ಲಿಸಲು ಕರೆ ನೀಡಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ವಿವಿಧ ಕಾರ್ಮಿಕ ಸಂಘಗಳ ಪ್ರತಿಭಟನೆ ನಡೆಯಿತು.
ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ, Beedi and Tobacco Labour Union ಹಾಗೂ ಜನರಲ್ ವರ್ಕರ್ಸ್ ಯೂನಿಯನ್ ಸದಸ್ಯರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಬಳಿಕ ಕಾರ್ಮಿಕ ಅಧಿಕಾರಿಗಳು ಹಾಗೂ ಅಪಾರ ಜಿಲ್ಲಾಧಿಕಾರಿ ಮುಖಾಂತರ Government of Karnataka ಮುಖ್ಯಮಂತ್ರಿಗೆ ಮತ್ತು ಕಾರ್ಮಿಕ ಕಾರ್ಯದರ್ಶಿ (ವಿಕಾಸಸೌಧ), Bengaluru ಅವರಿಗೆ ಆಕ್ಷೇಪಣೆ ಪತ್ರವನ್ನು ಸಲ್ಲಿಸಿದರು.
ಪ್ರಮುಖ ಆಗ್ರಹಗಳು:
ಹೊಸ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು.
ಸಮವರ್ಧಿ ಪಟ್ಟಿಯ ಕಾರ್ಮಿಕ ವಿಷಯಗಳಲ್ಲಿ ಕೇಂದ್ರ ಸರ್ಕಾರಕ್ಕೆ ಅಧಿಕಾರ ಸೀಮಿತಗೊಳಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ತೀವ್ರವಾಗಿ ವಿರೋಧಿಸಬೇಕು.
ರಾಜ್ಯ ಸರ್ಕಾರ ತನ್ನ ಅಧಿಕಾರ ಬಳಸಿ ಮೂಲ ಸಂಹಿತೆಗಳಿಗೆ ತಿದ್ದುಪಡಿ ತಂದು ನಂತರವೇ ನಿಯಮಾವಳಿ ರೂಪಿಸಬೇಕು.
ಕರಡು ನಿಯಮಗಳನ್ನು ಕನ್ನಡದಲ್ಲಿ ಪ್ರಕಟಿಸಿ ಆಕ್ಷೇಪಣೆ ಸಲ್ಲಿಸಲು ಸಮರ್ಪಕ ಅವಧಿ ನೀಡಬೇಕು.
ಕನಿಷ್ಠ ವೇತನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ತಕ್ಷಣ ಜಾರಿಗೊಳಿಸಬೇಕು.
ಪ್ರತಿಭಟನೆಯಲ್ಲಿ ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ, ಬೀಡಿ ಎಂಡ್ ಟೋಬ್ಯಾಕೋ ಲೇಬರ್ ಯೂನಿಯನ್ ಅಧ್ಯಕ್ಷೆ ನಳಿನಿ ಎಸ್., ಪ್ರಧಾನ ಕಾರ್ಯದರ್ಶಿ ಉಮೇಶ್ ಕುಂದರ್, ವಸಂತಿ, ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಸುಭಾಸ್ ನಾಯಕ್, ಪ್ರಧಾನ ಕಾರ್ಯದರ್ಶಿ ಶಶಿಧರ್ ಗೊಲ್ಲ, ಉಪಾಧ್ಯಕ್ಷ ದಯಾನಂದ ಕೊಟ್ಯಾನ್, ಕೋಶಾಧಿಕಾರಿ ವಾಮನ ಬಂಗೇರ ಸೇರಿದಂತೆ ಸರೋಜ ಎಸ್., ದಯಾನಂದ ಅಮೀನ್, ರಾಮ ಕಾರ್ಕಡ, ನಾಗರಾಜ ಸಾಲಿಗ್ರಾಮ, ಮುರಳಿ, ರಮೇಶ್, ಶ್ರೀಧರ ಶೆಟ್ಟಿ, ಅಶೋಕ, ರಂಗನಾಥ, ಚಂದ್ರಯ್ಯ ಪೂಜಾರಿ ಹಾಗೂ ಸಿಐಟಿಯು ಉಡುಪಿ ಮುಖಂಡ ಮೋಹನ್ ಉಪಸ್ಥಿತರಿದ್ದರು.






