ಉಡುಪಿ:ಮಾರ್ಚ್ 03 :ಶೀರೂರು ಮಠ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಹಾಗೂ ಪುತ್ತಿಗೆ ಮಠ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಭಕ್ತರೊಂದಿಗೆ ಗ್ರಹಣ ಮೋಕ್ಷ ಕಾಲದಲ್ಲಿ ಕೃಷ್ಣ ಮಠದ ಮಧ್ವ ಸರೋವರದಲ್ಲಿ ಪವಿತ್ರ ಸ್ನಾನ ನೆರವೇರಿಸಿದರು.
ನಂತರ ಮಠದಲ್ಲಿ ವಿಶೇಷ ರಾತ್ರಿ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳು ಭಕ್ತಿಭಾವದಿಂದ ನಡೆಯಿತು. ಸಾವಿರಾರು ಭಕ್ತರು ಈ ಪುಣ್ಯ ಕ್ಷಣಕ್ಕೆ ಸಾಕ್ಷಿಯಾದರು.







