ಕಾರ್ಕಳ, ಮಾರ್ಚ್ 03:ಕಾರ್ಕಳ ಪುರಸಭಾ ವ್ಯಾಪ್ತಿಯ ರಾಮಸಮುದ್ರ ಸಮೀಪದ ಸ್ವರಾಜ್ ಮೈದಾನ ಪಕ್ಕದಲ್ಲಿ ಇಂದು ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಸ್ಥಳೀಯರು ಗಮನಿಸಿದ ತಕ್ಷಣ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಘಟನಾ ಸ್ಥಳಕ್ಕೆ ಕಾರ್ಕಳ ಪುರಸಭಾ ಆರೋಗ್ಯಾಧಿಕಾರಿ ಲೈಲಾ ಥಾಮಸ್ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಅಗ್ನಿಶಾಮಕ ದಳದ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಕೂಡ ತಕ್ಷಣ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.
ಪುರಸಭಾ ವಾರ್ಡ್ ಕೌನ್ಸಿಲರ್ ವಿನ್ನಿ ಬೋಲ್ಡ್, ಹೇಮಂತ್, ಸುದೇಶ್, ಸಂದೀಪ್ ಹಾಗೂ ಮಂಜುನಾಥ್ ಸ್ಥಳದಲ್ಲೇ ಇದ್ದು ಕಾರ್ಯಾಚರಣೆಗೆ ಸಹಕಾರ ನೀಡಿದರು. ಬೆಂಕಿ ನಂದಿಸಲು ಅಗತ್ಯವಾದ ನೀರಿನ ಟ್ಯಾಂಕರ್ ವ್ಯವಸ್ಥೆಯನ್ನು ಅನಂತ ಕೃಷ್ಣ ಶೆಟ್ಟಿ ಒದಗಿಸಿದರು.

ಅಧಿಕಾರಿಗಳ ತ್ವರಿತ ಕ್ರಮದಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಯಾವುದೇ ದೊಡ್ಡ ಪ್ರಮಾಣದ ಹಾನಿ ಸಂಭವಿಸಿಲ್ಲವೆಂದು ತಿಳಿದುಬಂದಿದೆ.






