ಪುತ್ತೂರು, ಮಾ. 4: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂಬ ಆರೋಪದ ಹಿನ್ನೆಲೆಯಲ್ಲಿ ಯುವಕನೊಬ್ಬನಿಗೆ ಸಾರ್ವಜನಿಕರು ತರಾಟೆ ತೆಗೆದುಕೊಂಡ ಘಟನೆ ಮಂಗಳವಾರ (ಮಾ.03) ಪುತ್ತೂರು ಬಸ್ ನಿಲ್ದಾಣದ ಬಳಿ ನಡೆದಿದೆ.
ಘಟನೆ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪುತ್ತೂರು ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸಿ ಯುವಕನನ್ನು ವಶಕ್ಕೆ ಪಡೆದರು. ನಂತರ ಅವರನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ವಿಚಾರಣೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.
ಪ್ರಾಥಮಿಕ ಮಾಹಿತಿಯಂತೆ, ಸಂಬಂಧಪಟ್ಟ ಯುವಕ ಹಾಗೂ ಯುವತಿ ಇಬ್ಬರೂ ಸುಳ್ಯ ತಾಲೂಕಿನವರಾಗಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.







