ಉಡುಪಿ, ಮಾ.4: ನಗರದ ನಗರಾಡಳಿತ ಕಚೇರಿ ಸಮೀಪದ ಬಸ್ ನಿಲ್ದಾಣದ ಬಳಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ವಲಕಾಡು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.
ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿರುವ ಈ ವ್ಯಕ್ತಿ ಹೆಬ್ರಿ ಮೂಲದ ರಾಮ ಎಂಬ ಶಂಕೆ ವ್ಯಕ್ತವಾಗಿದೆ. ಸಂಬಂಧಿಕರು ಅಥವಾ ಪರಿಚಿತರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆಯುವಂತೆ ಮನವಿ ಮಾಡಲಾಗಿದೆ.







