ಉಡುಪಿ, ಮಾ. 05: ಶ್ರೀ ಕೃಷ್ಣ ಮಠದ ರಾಜಾಂಗಣ ಸನಿಹ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ವೃದ್ಧರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ರಕ್ಷಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಬುಧವಾರ ದಾಖಲಿಸಿದ್ದರು
ಅಂಬಲಪಾಡಿ, ಕಪ್ಪೆಟ್ಟು ನಿವಾಸಿ ಭೋಜ ಪೂಜಾರಿ (87) ಎಂದು ಶಂಕಿಸಲಾಗಿದೆ.
ವಾರಸುದಾರರು ತಕ್ಷಣವೇ ಅಜ್ಜರಕಾಡು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪ್ರಕಟಣೆ ನೀಡಲಾಗಿತ್ತು
ಆದರೆ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.





