Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Dhrishya News by Dhrishya News
09/03/2026
in ಸುದ್ದಿಗಳು
0
ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
0
SHARES
4
VIEWS
Share on FacebookShare on Twitter

ಉಡುಪಿ:ಮಾರ್ಚ್ 09 :ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ವತಿಯಿಂದ ಅಧ್ಯಕ್ಷೆ ನೀತಾ ಪ್ರಭು ಅವರ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಕುಂಜಿಬೆಟ್ಟು ಮಾಂಡವಿ ಟ್ರೇಡ್ ಸೆಂಟರ್ ಸಭಾಂಗಣದಲ್ಲಿ ವಿಶೇಷ ರೀತಿಯಲ್ಲಿ ಆಚರಿಸಲಾಯಿತು.

 

ಮುಖ್ಯ ಅತಿಥಿಗಳಾದ ಡಾ! ರಾಜಲಕ್ಷ್ಮಿ ಅವರು ಗಣ್ಯರ ಉಪಸ್ಥಿತಿಯಲ್ಲಿ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

 

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರಾದ ಶಕುಂತಲಾ ಶೆಟ್ಟಿ – ಹೈನುಗಾರಿಕೆ, ವಿಮಲ – ಸಂಜೀವಿನಿ ಗ್ರೂಪ್, ಅನುಷಾ – ವಕೀಲರು, ಸುಶೀಲ ಸಾಲಿಯಾನ್ – ಮಹಿಳಾ ಹೋಮ್ ಗಾರ್ಡ್, ಗೀತಾ ಕೃಷ್ಣರಾಜ್ – ಆಟೋ ಚಾಲಕಿ, ಲಲಿತ – ಪೌರ ಕಾರ್ಮಿಕರು ಹಾಗೂ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು, ವಿಶು ಶೆಟ್ಟಿ ಅಂಬಲಪಾಡಿ ಮತ್ತು ಸತೀಶ್ ಸಾಲಿಯಾನ್ ಅವರನ್ನು ಸನ್ಮಾನಿಸಲಾಯಿತು. 

 

ವಿಶೇಷವಾಗಿ ಪರ್ಕಳದ ಮನೆ ಊಟ ಹೋಟೆಲ್ ನ ಹಿರಿಯ ದಂಪತಿಗಳಾದ ಗೋಪಾಲಕೃಷ್ಣ ಮತ್ತು ವಸಂತಿ ಅವರನ್ನು ಗೌರವಿಸಲಾಯಿತು.

ಸಂತೆಕಟ್ಟೆ ವಾತ್ಸಲ್ಯ ಕ್ಲಿನಿಕ್ ನ ಡಾ! ರಾಜಲಕ್ಷ್ಮಿ ಅವರಿಂದ ಮಹಿಳೆಯರಿಗಾಗಿ ಉಪಯುಕ್ತ ವಿಶೇಷ ಆರೋಗ್ಯ ಮಾಹಿತಿ ಕಾರ್ಯಕ್ರಮ ನಡೆಯಿತು.

 

ಮನೋರಂಜನಾ ಕಾರ್ಯಕ್ರಮದ ಅಂಗವಾಗಿ ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾದ ಅಧ್ಯಕ್ಷೆ ನೀತಾ ಪ್ರಭು ಸಂಯೋಜನೆಯಲ್ಲಿ ಮೋರ್ಚಾದ ಪದಾಧಿಕಾರಿಗಳು ಮತ್ತು ಸದಸ್ಯರ ಸಕ್ರಿಯ ಭಾಗವಹಿಸುವಿಕೆಯಲ್ಲಿ ನಡೆದ ವಿವಿಧ ವಿನೋದಾವಳಿಗಳ ಸಹಿತ ‘ನಾರೀ ಶಕ್ತಿ’ ಎಂಬ ವಿಶೇಷ ಕಾರ್ಯಕ್ರಮವು ಆಕರ್ಷಕವಾಗಿ ಮೂಡಿ ಬಂದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

 

ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ಕೆ.ಉದಯ ಕುಮಾರ್ ಶೆಟ್ಟಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು.

 

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ನಗರ ಮಂಡಲಾಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಉಡುಪಿ ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಾಂತಿ ಮನೋಜ್ ಸಹಿತ ಮಹಿಳಾ ಮೋರ್ಚಾ ಮತ್ತು ವಿವಿಧ ಸ್ತರದ ಪದಾಧಿಕಾರಿಗಳು, ಸಮಿತಿ ಸದಸ್ಯರು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Previous Post

ಬಾರ್ಕೂರಿನ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

Next Post

ಉಡುಪಿ: ವೃದ್ಧೆ ಬಾವಿಗೆ ಹಾರಿ ಆತ್ಮಹತ್ಯೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕೀಟನಾಶಕ ಸೇವಿಸಿದ್ದ ಡಿಪ್ಲೋಮಾ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತ…!

ಉಡುಪಿ: ವೃದ್ಧೆ ಬಾವಿಗೆ ಹಾರಿ ಆತ್ಮಹತ್ಯೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

09/03/2026
ಚಿನ್ನದ ಬೆಲೆಯಲ್ಲಿ  ಇಳಿಕೆ: 10 ಗ್ರಾಂಗೆ ₹1960 ಕುಸಿತ, ಬೆಳ್ಳಿಯ ದರದಲ್ಲೂ ಇಳಿಕೆ..!!

ಚಿನ್ನದ ಬೆಲೆಯಲ್ಲಿ  ಇಳಿಕೆ: 10 ಗ್ರಾಂಗೆ ₹1960 ಕುಸಿತ, ಬೆಳ್ಳಿಯ ದರದಲ್ಲೂ ಇಳಿಕೆ..!!

09/03/2026
ಕೀಟನಾಶಕ ಸೇವಿಸಿದ್ದ ಡಿಪ್ಲೋಮಾ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತ…!

ಉಡುಪಿ: ವೃದ್ಧೆ ಬಾವಿಗೆ ಹಾರಿ ಆತ್ಮಹತ್ಯೆ..!

09/03/2026
ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

09/03/2026

Recent News

ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

09/03/2026
ಚಿನ್ನದ ಬೆಲೆಯಲ್ಲಿ  ಇಳಿಕೆ: 10 ಗ್ರಾಂಗೆ ₹1960 ಕುಸಿತ, ಬೆಳ್ಳಿಯ ದರದಲ್ಲೂ ಇಳಿಕೆ..!!

ಚಿನ್ನದ ಬೆಲೆಯಲ್ಲಿ  ಇಳಿಕೆ: 10 ಗ್ರಾಂಗೆ ₹1960 ಕುಸಿತ, ಬೆಳ್ಳಿಯ ದರದಲ್ಲೂ ಇಳಿಕೆ..!!

09/03/2026
ಕೀಟನಾಶಕ ಸೇವಿಸಿದ್ದ ಡಿಪ್ಲೋಮಾ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತ…!

ಉಡುಪಿ: ವೃದ್ಧೆ ಬಾವಿಗೆ ಹಾರಿ ಆತ್ಮಹತ್ಯೆ..!

09/03/2026
ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

09/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved