ಉಪ್ಪಿನಂಗಡಿ, ಮಾ. 10: ಬಸ್ ನಿಲ್ದಾಣದಲ್ಲಿ ಶಿಕ್ಷಕಿಯೋರ್ವರ ಬ್ಯಾಗಿನಿಂದ ನಗದು ಹಾಗೂ ದಾಖಲೆಗಳಿದ್ದ ಪರ್ಸ್ ಕಳವುಗೊಂಡ ಘಟನೆ ಸೋಮವಾರ ಉಪ್ಪಿನಂಗಡಿಯಲ್ಲಿ ನಡೆದಿದೆ.
ಸಕಲೇಶಪುರದಲ್ಲಿ ಶಿಕ್ಷಕಿಯಾಗಿದ್ದ ಪ್ರಸನ್ನ ಕುಮಾರಿ ಅವರಿಗೆ ಪುತ್ತೂರಿಗೆ ವರ್ಗಾವಣೆ ಆದ ಹಿನ್ನೆಲೆಯಲ್ಲಿ ಅವರು ಪುತ್ತೂರಿಗೆ ಆಗಮಿಸಿದ್ದರು. ಬಳಿಕ ಉಪ್ಪಿನಂಗಡಿಗೆ ಬಂದು ಸಕಲೇಶಪುರಕ್ಕೆ ತೆರಳುವ ಬಸ್ಗೆ ಏರುವ ಸಂದರ್ಭ ಕಿಸೆಕಳ್ಳರು ಅವರ ಬ್ಯಾಗಿನಲ್ಲಿದ್ದ ಸುಮಾರು 30 ಸಾವಿರ ರೂ. ನಗದು ಹಾಗೂ ಪ್ರಮುಖ ದಾಖಲೆಗಳಿದ್ದ ಪರ್ಸ್ ಅನ್ನು ಕದಿಯಲಾಗಿದೆ.
ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಘಟನೆ ಸಂಬಂಧ ಸಿಸಿ ಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.







