ಬ್ರಹ್ಮಾವರ: ಹಿರಿಯ ಪತ್ರಕರ್ತರಾದ ಹಾಗೂ ಪ್ರಜಾವಾಣಿ ವರದಿಗಾರರಾಗಿದ್ದ ಶೇಷಗಿರಿ ಭಟ್ ಅವರ ಅಗಲಿಕೆಯನ್ನು ಸ್ಮರಿಸಿ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ನುಡಿನಮನ ಹಾಗೂ ಶ್ರದ್ದಾಂಜಲಿ ಸಭೆ ಮಾ.10ರಂದು ಸಾಸ್ತಾನದ ಕೋಸ್ಟಲ್ ಪ್ಯಾರಡೈಸ್ ಮಿನಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಶೇಷಗಿರಿ ಭಟ್ ಅವರ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮಾಡಿದ ಸೇವೆಯನ್ನು ಸ್ಮರಿಸಿ ನುಡಿನಮನ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಸುಪ್ರಸಾದ್ ಶೆಟ್ಟಿ, ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಬಿರ್ತಿ ರಾಜೇಶ್ ಶೆಟ್ಟಿ, ನಿರ್ದೇಶಕ ಕಮಲಾಕ್ಷ ಹೆಬ್ಬಾರ್, ಮಾಜಿ ತಾ.ಪಂ ಸದಸ್ಯ ಸುಧೀರ್ ಕುಮಾರ್ ಶೆಟ್ಟಿ, ಉಪನ್ಯಾಸಕಿ ಸವಿತಾ ಎರ್ಮಾಳ್ , ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಜಿ ಖುರ್ಯ, ರಾಜ್ಯ ಸಮಿತಿ ಸದಸ್ಯ ಆಸ್ಟ್ರೋಮೊಹನ್, ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ ಗಾಣಿಗ, ಪ್ರಭಾಕರ್ ಆಚಾರ್ಯ, ಸೇರಿದಂತೆ ಹಲವರು ಉಪಸ್ಥಿತರಿದ್ದರು.






