ತಿರುಚನಾಪಳ್ಳಿ, ಮಾ. 11: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳ ಹಾಗೂ ತಮಿಳುನಾಡಿನ ಪ್ರವಾಸದಲ್ಲಿದ್ದು, ಈ ಸಂದರ್ಭದಲ್ಲಿ ಮಂಗಳೂರನ್ನು ಸಂಪರ್ಕಿಸುವ ಎರಡು ಹೊಸ ರೈಲುಗಳಿಗೆ ಚಾಲನೆ ನೀಡಲಿದ್ದಾರೆ.
ತಮಿಳುನಾಡಿನ ತಿರುಚನಾಪಳ್ಳಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಮೇಶ್ವರಂ–ಮಂಗಳೂರು ಎಕ್ಸ್ಪ್ರೆಸ್ ಹಾಗೂ ತಿರುನಲ್ವೇಲಿ–ಮಂಗಳೂರು ಎಕ್ಸ್ಪ್ರೆಸ್ ರೈಲುಗಳಿಗೆ ಪ್ರಧಾನಿ ಹಸಿರು ನಿಶಾನೆ ತೋರಿಸಿ ಸಂಚಾರ ಆರಂಭಿಸಲಿದ್ದಾರೆ.
ಈ ರೈಲುಗಳ ಸಂಚಾರದಿಂದ ಪವಿತ್ರ ಕ್ಷೇತ್ರ ರಾಮೇಶ್ವರಂಗೆ ನೇರ ಸಂಪರ್ಕ ಲಭ್ಯವಾಗಲಿದ್ದು, ಕರ್ನಾಟಕದ ಕರಾವಳಿ ಭಾಗದ ಯಾತ್ರಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಮಾರ್ಗವು ತಮಿಳುನಾಡು, ಕೇರಳ ಹಾಗೂ ಕರ್ನಾಟಕ ರಾಜ್ಯಗಳನ್ನು ಸಂಪರ್ಕಿಸುವುದರಿಂದ ಮೂರು ರಾಜ್ಯಗಳ ಪ್ರಯಾಣಿಕರಿಗೂ ಪ್ರಯೋಜನಕಾರಿಯಾಗಲಿದೆ.
ಇದೇ ಪ್ರವಾಸದ ಅಂಗವಾಗಿ ಪ್ರಧಾನಿ ಮೋದಿ ಕೇರಳ ಮತ್ತು ತಮಿಳುನಾಡಿನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಹ ಚಾಲನೆ ನೀಡಲಿದ್ದಾರೆ.







